Homeಮುಖಪುಟರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ನ್ಯಾಯಾಲಯದ ಅಂಗಳದಲ್ಲಿ ತಮಿಳುನಾಡಿನ ರಾಜ್ಯಪಾಲ VS ಸರ್ಕಾರದ ತಿಕ್ಕಾಟ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ಒಪ್ಪಿಗೆ ನೀಡದೆ, ಅವುಗಳಲ್ಲಿ ಕೆಲವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವುದಾಗಿ ಘೋಷಿಸಿದ್ದೇಕೆ? ಎಂದು ಸುಪ್ರೀಂ ಕೋರ್ಟ್ ಗುರುವಾರ(ಫೆ.6) ಪ್ರಶ್ನಿಸಿದೆ.

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲರು “ತಮ್ಮದೇ ಕಾರ್ಯವಿಧಾನ ಅಳವಡಿಸಿಕೊಂಡಂತೆ ಕಾಣುತ್ತಿದೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಟೀಕಿಸಿದ್ದಾರೆ.

2020 ಮತ್ತು 2023ರ ನಡುವೆ ಅಂಗೀಕರಿಸಲಾದ 10 ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದೆ ಹಾಗೆಯೇ ಉಳಿಸಿಕೊಂಡಿರುವ ಹಿನ್ನೆಲೆ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ರಿಟ್ ಅರ್ಜಿಗಳ ವಿಚಾರಣೆಯನ್ನು ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ನಡೆಸುತ್ತಿದೆ.

“ರಾಜ್ಯಪಾಲರು ಮೂರು ವರ್ಷಗಳನ್ನು ತೆಗೆದುಕೊಂಡು ಕಂಡುಕೊಂಡ ಮಸೂದೆಗಳಲ್ಲಿನ ಅಂತಹ ಅಸಹ್ಯಕರವಾದ ವಿಷಯ ಯಾವುದು?” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಮತ್ತು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ನಿಬಂಧನೆಗಳನ್ನು ಒಳಗೊಂಡ 10 ಪುನರ್-ಜಾರಿಗೊಳಿಸಲಾದ ಮಸೂದೆಗಳನ್ನು ನವೆಂಬರ್ 18, 2023 ರಂದು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ. ರಾಷ್ಟ್ರಪತಿಗಳು ಒಂದನ್ನು ಅನುಮೋದಿಸಿದ್ದು, ಏಳನ್ನು ತಿರಸ್ಕರಿಸಿದ್ದಾರೆ ಮತ್ತು ಎರಡನ್ನು ಹಾಗೆಯೇ ಇಟ್ಟಿದ್ದಾರೆ.

ರಾಜ್ಯಪಾಲರು ಅತ್ತ ಮಸೂದೆಗಳಿಗೆ ಒಪ್ಪಿಗೆ ನೀಡದೆ, ಇತ್ತ ವಿಧಾನಸಭೆಗೆ ಹಿಂದಿರುಗಿಸದೆ
ಸಂವಿಧಾನದ 200ನೇ ವಿಧಿಯ ವಿರುದ್ದ ನಡೆದುಕೊಂಡಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವ ಅಥವಾ ತಿರಸ್ಕರಿಸುವ ರಾಜ್ಯಪಾಲರ ಅಧಿಕಾರವು ಸಾಂವಿಧಾನಿಕ ನಿಬಂಧನೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ರಾಜ್ಯಪಾಲರು ಮಸೂದೆಗಳಿಗೆ ಏಕೆ ಅಂಕಿತ ಹಾಕಿಲ್ಲ ಎಂಬುವುದನ್ನು ವಾಸ್ತವಿಕವಾಗಿ ಅಥವಾ ನಿರ್ಧಿಷ್ಟವಾಗಿ ತೋರಿಸಬೇಕು ಎಂದು ರಾಜ್ಯಪಾಲ ರವಿ ಅವರನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಸೂಚಿಸಿದ್ದಾರೆ.

“ಕೆಲವು ಮೂಲ ಕಡತಗಳಿಂದ ಅಥವಾ ಇತರ ಕೆಲವು ದಾಖಲೆಗಳಿಂದ, ರಾಜ್ಯಪಾಲರ ಕಚೇರಿಯಲ್ಲಿ ಲಭ್ಯವಿರುವ ಕೆಲವು ಸಮಕಾಲೀನ ದಾಖಲೆಗಳಿಂದ ಏನನ್ನು ಪರಿಶೀಲಿಸಲಾಗಿದೆ, ಏನು ಚರ್ಚಿಸಲಾಗಿದೆ, ಏನೆಲ್ಲಾ ಲೋಪಗಳಿವೆ ಎಂಬುವುದರ ಕುರಿತು ನಮಗೆ ತೋರಿಸಿ” ಎಂದು ನ್ಯಾಯಾಧೀಶರು ಎಜಿಗೆ ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಪಂಜಾಬ್‌ ರಾಜ್ಯಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ, ಮಸೂದೆಗಳನ್ನು ತಡೆ ಹಿಡಿಯುವ ಮೂಲಕ ವಿಧಾನಸಭೆಯನ್ನು ವೀಟೋ ಮಾಡಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ತಮಿಳುನಾಡು ರಾಜ್ಯಪಾಲರು ಮಸೂದೆಗಳನ್ನು ತಡೆ ಹಿಡಿದಿದ್ದಾರೆ ಎಂಬುವುದನ್ನು ನ್ಯಾಯಮೂರ್ತಿ ಪರ್ದಿವಾಲಾ ಗಮನಿಸಿದ್ದಾರೆ.

ನವೆಂಬರ್ 2023ರಲ್ಲಿ ಸುಪ್ರೀಂ ಕೋರ್ಟ್ ಆಗಿನ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ತಮ್ಮ ಮುಂದೆ ಬಾಕಿ ಇರುವ ನಾಲ್ಕು ಮಸೂದೆಗಳ ಬಗ್ಗೆ ನಿರ್ಧರಿಸುವಂತೆ ನಿರ್ದೇಶಿಸಿತ್ತು. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಿಜವಾದ ಅಧಿಕಾರ ಚುನಾಯಿತ ಪ್ರತಿನಿಧಿಗಳ ಕೈಯಲ್ಲಿ ಇರುತ್ತದೆ. ರಾಜ್ಯಪಾಲರು ರಾಜ್ಯದ ನಾಮಮಾತ್ರ ಮುಖ್ಯಸ್ಥರು ಎಂದಿತ್ತು.

ರಾಜ್ಯಪಾಲರು ಮಸೂದೆಗಳಿಗೆ ಅನಿರ್ದಿಷ್ಟಾವಧಿಗೆ ಒಪ್ಪಿಗೆ ನೀಡದೆ ತಡೆಹಿಡಿಯುವ ಮೂಲಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ತಮಿಳುನಾಡು ರಾಜ್ಯ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ವಾದಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್-ಹೈಕೋರ್ಟ್ ನ್ಯಾಯಾಧೀಶರ ವೇತನ ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...