Homeಕರ್ನಾಟಕಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿರುವ ಹೈಕೋರ್ಟ್, ಸಿಐಡಿ ತನ್ನ ಮುಂದೆ ಇಟ್ಟಿರುವ ಸಾಮಗ್ರಿಗಳು ಮತ್ತು ಈ ಆದೇಶದಲ್ಲಿ ಮಾಡಿದ ಅವಲೋಕನಗಳನ್ನು ಪರಿಗಣಿಸಿ ಹೊಸದಾಗಿ ಸೂಕ್ತ ಆದೇಶ ನೀಡಲು ವಿಚಾರಣಾ ನ್ಯಾಯಾಲಯಕ್ಕೆ ವಿಷಯವನ್ನು ಹಿಂದಿರುಗಿಸಿದೆ. ಇದೇ ವೇಳೆ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜುಲೈ 4, 2024 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಪೋಕ್ಸೋ ಮತ್ತು ಐಪಿಸಿ ನಿಬಂಧನೆಗಳ ಅಡಿಯಲ್ಲಿ ಸದಾಶಿವನಗರ ಠಾಣೆಯಲ್ಲಿ ತನ್ನ ವಿರುದ್ದ ದಾಖಲಾಗಿರುವ ಎಫ್‌ಐಆರ್, ಆನಂತರ ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿದ್ದಾರೆ.

2024ರ ಜೂನ್‌ನಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೋ) ಸೆಕ್ಷನ್ 8 ಮತ್ತು 1860ರ ಭಾರತೀಯ ದಂಡ ಸಂಹಿತೆಯ 354ಎ ಅಡಿಯಲ್ಲಿ ಯಡಿಯೂರಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.

ಸಂಜ್ಞೇ ಪರಿಗಣಿಸಿರುವ ಆದೇಶ ಹೊರತುಪಡಿಸಿ ಉಭಯ ಪಕ್ಷಕಾರರ ಪರ ಹಿರಿಯ ವಕೀಲರಾದ ಸಿ ವಿ ನಾಗೇಶ್‌ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಎತ್ತಿರುವ ಯಾವುದೇ ವಾದಗಳಿಗೆ ಹೈಕೋರ್ಟ್ ಉತ್ತರಿಸಿಲ್ಲ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದ್ದು, ಅರ್ಜಿದಾರರು ಸೂಕ್ತ ಸಂದರ್ಭದಲ್ಲಿ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದಾಗಿದೆ” ಎಂದು ಆದೇಶ ಮಾಡಿದೆ.

ಹೀಗಾಗಿ, ಈ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿರುವ ಆದೇಶ ಮುಂದುವರಿಯಲಿದೆ.

ಮಾರ್ಚ್ 28,2024 ರಂದು ಯಡಿಯೂರಪ್ಪ ಅವರಿಗೆ ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಅದರ ಪ್ರಕಾರ, ಯಡಿಯೂರಪ್ಪ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಜೂನ್ 10, 2024 ರಂದು ಯಡಿಯೂರಪ್ಪ ಅವರಿಗೆ ಎರಡನೇ ನೋಟಿಸ್‌ ನೀಡಿ, ಜೂನ್ 11, 2024 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಅವರು ಜೂನ್ 17 ರವರೆಗೆ ಹಾಜರಾಗಲು ಸಮಯ ಕೋರಿದ್ದರು. ಈ ನಡುವೆ ಯಡಿಯೂರಪ್ಪ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಿಐಡಿ ಆರೋಪಿಸಿತ್ತು.

ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಯಡಿಯೂರಪ್ಪ ಪರ ವಕೀಲರು ವಾದಿಸಿದ್ದಾರೆ. ಕ್ಯಾನ್ಸರ್‌ನಿಂದಾಗಿ ಕೊನೆಯುಸಿರೆಳೆದ ಸಂತ್ರಸ್ತೆಯ ತಾಯಿ, ದೂರುದಾರರ ಅರ್ಹತೆಗಳು ಮತ್ತು ಅರ್ಜಿದಾರರ ವಿರುದ್ಧ ಹೊರಿಸಲಾದ ಆರೋಪಗಳ ಸ್ವರೂಪ, ದೂರುದಾರರು ಇತರರ ವಿರುದ್ಧ ದಾಖಲಿಸಿರುವ ಹಲವಾರು ಪ್ರಕರಣಗಳ ಬಗ್ಗೆಯೂ ವಕೀಲರು ಉಲ್ಲೇಖಿಸಿದ್ದಾರೆ. ತನ್ನ ಕಕ್ಷಿದಾರರ ವಿರುದ್ಧದ ಪ್ರಕರಣದಂತೆ ಅವೆಲ್ಲವೂ ಕ್ಷುಲ್ಲಕವಾಗಿವೆ ಎಂದು ಅವರು ವಾದಿಸಿದ್ದಾರೆ. ಇದಲ್ಲದೆ, ರಾಜಕೀಯ ದ್ವೇಷದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಮಧ್ಯಂತರ ಆದೇಶದ ಮೂಲಕ, ನ್ಯಾಯಾಲಯವು ಯಡಿಯೂರಪ್ಪ ಅವರಿಗೆ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಗಾಗಿ ಪೊಲೀಸರ ಮುಂದೆ ಹಾಜರಾದಾಗ ಅವರನ್ನು ಬಂಧಿಸದಂತೆ ನಿರ್ದೇಶಿಸಿತ್ತು.

ಪ್ರಕರಣದ ಹಿನ್ನೆಲೆ : ಫೆಬ್ರವರಿ 2, 2024ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27, 2024 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26, 2024ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27,2024ರಂದು ದೂರು ದಾಖಲಿಸಿದೆ.

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...