Homeಮುಖಪುಟಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಚುನಾವಣಾ ಫಲಿತಾಂಶಕ್ಕೂ ಮುನ್ನ ಕ್ಷಿಪ್ರ ರಾಜಕೀಯ ಬೆಳವಣಿಗೆ

- Advertisement -
- Advertisement -

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ (ಫೆ.7) ನೋಟಿಸ್ ನೀಡಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ (ಫೆ.6) ಆರೋಪಿಸಿದ್ದರು. ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಈ ಕುರಿತು ತನಿಖೆ ನಡೆಸುವಂತೆ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್‌ ವಿ.ಕೆ ಸಕ್ಸೇನಾ ಅವರಿಗೆ ದೂರು ಸಲ್ಲಿಸಿದ್ದರು. ಬಿಜೆಪಿ ನಾಯಕನ ದೂರು ಆಧರಿಸಿ ಎಸಿಬಿ ತನಿಖೆ ನಡೆಸುವಂತೆ ಗವರ್ನರ್ ಆದೇಶಿಸಿದ್ದರು. ಗವರ್ನರ್ ಆದೇಶ ಬಂದ ಬೆನ್ನಲ್ಲೇ ಶುಕ್ರವಾರ (ಫೆ.7) ಸಂಜೆ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಎಸಿಬಿ ಅಧಿಕಾರಿಗಳ ತಂಡ ಆಗಮಿಸಿತ್ತು. ಈ ವೇಳೆ ಕೇಜ್ರಿವಾಲ್ ಮನೆ ಮುಂದೆ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. “ಎಸಿಬಿ ಅಧಿಕಾರಿಗಳು ಯಾವುದೇ ಆದೇಶ ಪ್ರತಿ ಅಥವಾ ನೋಟಿಸ್ ಇಲ್ಲದೆ ಏಕಾಏಕಿ ಕೇಜ್ರಿವಾಲ್ ಮನೆಗೆ ನುಗ್ಗಿದ್ದಾರೆ” ಎಂದು ಎಎಪಿ ಕಾನೂನು ಘಟಕದ ವಕೀಲ ಸಂಜೀವ್ ನಾಸಿಯರ್ ಆರೋಪಿಸಿದ್ದರು.

ಬಿಜೆಪಿಯು 16 ಎಎಪಿ ಅಭ್ಯರ್ಥಿಗಳನ್ನು ಖರೀದಿಸಲು ತಲಾ 15 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿದೆ ಎಂಬ ಆರೋಪದ ಕುರಿತು ತನಿಖೆಗೆ ಸಹಕರಿಸುವಂತೆ ಕೇಜ್ರಿವಾಲ್ ಅವರಿಗೆ ಎಸಿಬಿ ನೀಡಿದ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಹಣದ ಆಮಿಷವೊಡ್ಡಲು ಬಳಸಿದ ಫೋನ್ ಮತ್ತು ನಂಬರ್, ಬಿಜೆಪಿ ವಿರುದ್ದ ಆರೋಪ ಮಾಡಿ ಕೇಜ್ರಿವಾಲ್ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆಯೇ ಎಂಬುವುದರ ಕುರಿತು ಎಸಿಬಿ ಮಾಹಿತಿ ಕೇಳಿದೆ ಎಂದು ವರದಿ ಹೇಳಿದೆ.

ಕೇಜ್ರಿವಾಲ್ ಪರ ವಕೀಲ ರಿಷಿಕೇಶ್ ಕುಮಾರ್ ಅವರು ಎಸಿಬಿ ನೋಟಿಸ್ ಅಸ್ಪಷ್ಟವಾಗಿದೆ ಎಂದಿದ್ದು, ತಿರಸ್ಕರಿಸಿದ್ದಾರೆ. “ನಾವು ಅವರ (ಎಸಿಬಿ) ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಮನೆಗೆ ಎಸಿಬಿ ಅಧಿಕಾರಿಗಳು ಬಂದಾಗ, ಅವರ ಬಳಿ ಯಾವುದೇ ತನಿಖಾ ಆದೇಶ ಇಲ್ಲ ಎಂದು ಆರೋಪಿಸಿ ಮನೆಯೊಳಗೆ ಬಿಡಲು ನಿರಾಕರಿಸಲಾಗಿತ್ತು. ಸ್ವಲ್ಪ ಹೊತ್ತಿನ ಹೈಡ್ರಾಮದ ಬಳಿಕ, ಸಂಜೆ 4.15ರ ಸುಮಾರಿಗೆ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿ ಎಸಿಬಿ ತಂಡ ನಿರ್ಗಮಿಸಿದೆ.

ಎಸಿಬಿ ಅಧಿಕಾರಿಗಳು ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕ ಮುಖೇಶ್ ಅಹ್ಲಾವತ್ ಅವರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜಯ್ ಸಿಂಗ್ ಅವರು ಹೇಳಿಕೆ ದಾಖಲಿಸಲು ಖುದ್ದಾಗಿ ಎಸಿಬಿ ಕಚೇರಿಗೆ ಹಾಜರಾಗಿದ್ದರು.

“ಎಸಿಬಿ ಹಠಾತ್ ಆಗಮನದ ಹಿಂದೆ ರಾಜಕೀಯ ಕುತಂತ್ರ ಅಲ್ಲದೆ ಇನ್ನೇನು ಇಲ್ಲ. ಬಿಜೆಪಿ ನಮ್ಮ ಅಭ್ಯರ್ಥಿಯೊಬ್ಬರಿಗೆ ಆಮಿಷವೊಡ್ಡಲು ಬಳಸಿದ ಫೋನ್ ನಂಬರ್ ಅನ್ನು ನಾವು ಬಹಿರಂಗಪಡಿಸಿದ್ದೇವೆ. ಎಸಿಬಿ ಇಲ್ಲಿ ಬಂದು ನಾಟಕ ಮಾಡಬಾರದು” ಎಂದು ಎಎಪಿ ನಾಯಕರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ ತಕ್ಷಣ ಬಿಜೆಪಿ ಕಾರ್ಯದರ್ಶಿ ಗವರ್ನರ್‌ಗೆ ದೂರು ನೀಡಿದ್ದು, ಅದನ್ನು ಆಧರಿಸಿ ಗವರ್ನರ್ ತಕ್ಷಣ ತನಿಖೆಗೆ ಆದೇಶಿಸಿರುವುದು ಮತ್ತು ಗವರ್ನರ್ ಆದೇಶದ ಬೆನ್ನಲ್ಲೇ ಎಸಿಬಿ ತಂಡ ಕೇಜ್ರಿವಾಲ್ ಮನೆಗೆ ಬಂದಿರುವುದು ಸೇರಿದಂತೆ ಚುನಾವಣಾ ಫಲಿತಾಂಶದ ಮುನ್ನಾದಿನ ದೆಹಲಿಯಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಗಳು ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಇಂದು (ಫೆ.8) ದೆಹಲಿಯ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...