Homeಮುಖಪುಟಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಚುನಾವಣಾ ಫಲಿತಾಂಶಕ್ಕೂ ಮುನ್ನ ಕ್ಷಿಪ್ರ ರಾಜಕೀಯ ಬೆಳವಣಿಗೆ

- Advertisement -
- Advertisement -

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ (ಫೆ.7) ನೋಟಿಸ್ ನೀಡಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ (ಫೆ.6) ಆರೋಪಿಸಿದ್ದರು. ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಈ ಕುರಿತು ತನಿಖೆ ನಡೆಸುವಂತೆ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್‌ ವಿ.ಕೆ ಸಕ್ಸೇನಾ ಅವರಿಗೆ ದೂರು ಸಲ್ಲಿಸಿದ್ದರು. ಬಿಜೆಪಿ ನಾಯಕನ ದೂರು ಆಧರಿಸಿ ಎಸಿಬಿ ತನಿಖೆ ನಡೆಸುವಂತೆ ಗವರ್ನರ್ ಆದೇಶಿಸಿದ್ದರು. ಗವರ್ನರ್ ಆದೇಶ ಬಂದ ಬೆನ್ನಲ್ಲೇ ಶುಕ್ರವಾರ (ಫೆ.7) ಸಂಜೆ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಎಸಿಬಿ ಅಧಿಕಾರಿಗಳ ತಂಡ ಆಗಮಿಸಿತ್ತು. ಈ ವೇಳೆ ಕೇಜ್ರಿವಾಲ್ ಮನೆ ಮುಂದೆ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. “ಎಸಿಬಿ ಅಧಿಕಾರಿಗಳು ಯಾವುದೇ ಆದೇಶ ಪ್ರತಿ ಅಥವಾ ನೋಟಿಸ್ ಇಲ್ಲದೆ ಏಕಾಏಕಿ ಕೇಜ್ರಿವಾಲ್ ಮನೆಗೆ ನುಗ್ಗಿದ್ದಾರೆ” ಎಂದು ಎಎಪಿ ಕಾನೂನು ಘಟಕದ ವಕೀಲ ಸಂಜೀವ್ ನಾಸಿಯರ್ ಆರೋಪಿಸಿದ್ದರು.

ಬಿಜೆಪಿಯು 16 ಎಎಪಿ ಅಭ್ಯರ್ಥಿಗಳನ್ನು ಖರೀದಿಸಲು ತಲಾ 15 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿದೆ ಎಂಬ ಆರೋಪದ ಕುರಿತು ತನಿಖೆಗೆ ಸಹಕರಿಸುವಂತೆ ಕೇಜ್ರಿವಾಲ್ ಅವರಿಗೆ ಎಸಿಬಿ ನೀಡಿದ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಹಣದ ಆಮಿಷವೊಡ್ಡಲು ಬಳಸಿದ ಫೋನ್ ಮತ್ತು ನಂಬರ್, ಬಿಜೆಪಿ ವಿರುದ್ದ ಆರೋಪ ಮಾಡಿ ಕೇಜ್ರಿವಾಲ್ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆಯೇ ಎಂಬುವುದರ ಕುರಿತು ಎಸಿಬಿ ಮಾಹಿತಿ ಕೇಳಿದೆ ಎಂದು ವರದಿ ಹೇಳಿದೆ.

ಕೇಜ್ರಿವಾಲ್ ಪರ ವಕೀಲ ರಿಷಿಕೇಶ್ ಕುಮಾರ್ ಅವರು ಎಸಿಬಿ ನೋಟಿಸ್ ಅಸ್ಪಷ್ಟವಾಗಿದೆ ಎಂದಿದ್ದು, ತಿರಸ್ಕರಿಸಿದ್ದಾರೆ. “ನಾವು ಅವರ (ಎಸಿಬಿ) ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಮನೆಗೆ ಎಸಿಬಿ ಅಧಿಕಾರಿಗಳು ಬಂದಾಗ, ಅವರ ಬಳಿ ಯಾವುದೇ ತನಿಖಾ ಆದೇಶ ಇಲ್ಲ ಎಂದು ಆರೋಪಿಸಿ ಮನೆಯೊಳಗೆ ಬಿಡಲು ನಿರಾಕರಿಸಲಾಗಿತ್ತು. ಸ್ವಲ್ಪ ಹೊತ್ತಿನ ಹೈಡ್ರಾಮದ ಬಳಿಕ, ಸಂಜೆ 4.15ರ ಸುಮಾರಿಗೆ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿ ಎಸಿಬಿ ತಂಡ ನಿರ್ಗಮಿಸಿದೆ.

ಎಸಿಬಿ ಅಧಿಕಾರಿಗಳು ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕ ಮುಖೇಶ್ ಅಹ್ಲಾವತ್ ಅವರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜಯ್ ಸಿಂಗ್ ಅವರು ಹೇಳಿಕೆ ದಾಖಲಿಸಲು ಖುದ್ದಾಗಿ ಎಸಿಬಿ ಕಚೇರಿಗೆ ಹಾಜರಾಗಿದ್ದರು.

“ಎಸಿಬಿ ಹಠಾತ್ ಆಗಮನದ ಹಿಂದೆ ರಾಜಕೀಯ ಕುತಂತ್ರ ಅಲ್ಲದೆ ಇನ್ನೇನು ಇಲ್ಲ. ಬಿಜೆಪಿ ನಮ್ಮ ಅಭ್ಯರ್ಥಿಯೊಬ್ಬರಿಗೆ ಆಮಿಷವೊಡ್ಡಲು ಬಳಸಿದ ಫೋನ್ ನಂಬರ್ ಅನ್ನು ನಾವು ಬಹಿರಂಗಪಡಿಸಿದ್ದೇವೆ. ಎಸಿಬಿ ಇಲ್ಲಿ ಬಂದು ನಾಟಕ ಮಾಡಬಾರದು” ಎಂದು ಎಎಪಿ ನಾಯಕರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ ತಕ್ಷಣ ಬಿಜೆಪಿ ಕಾರ್ಯದರ್ಶಿ ಗವರ್ನರ್‌ಗೆ ದೂರು ನೀಡಿದ್ದು, ಅದನ್ನು ಆಧರಿಸಿ ಗವರ್ನರ್ ತಕ್ಷಣ ತನಿಖೆಗೆ ಆದೇಶಿಸಿರುವುದು ಮತ್ತು ಗವರ್ನರ್ ಆದೇಶದ ಬೆನ್ನಲ್ಲೇ ಎಸಿಬಿ ತಂಡ ಕೇಜ್ರಿವಾಲ್ ಮನೆಗೆ ಬಂದಿರುವುದು ಸೇರಿದಂತೆ ಚುನಾವಣಾ ಫಲಿತಾಂಶದ ಮುನ್ನಾದಿನ ದೆಹಲಿಯಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಗಳು ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಇಂದು (ಫೆ.8) ದೆಹಲಿಯ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...