Homeಮುಖಪುಟನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

- Advertisement -
- Advertisement -

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿ ಮಾಡಿಕೊಳ್ಳಲು ನೆರೆಮನೆಯ ಬ್ರಾಹ್ಮಣ ಯುವತಿಯೊಂದಿಗೆ ಆಗಮಿಸಿದ್ದ ಮುಸ್ಲಿಂ ಯುವಕನಿಗೆ ಬಲಪಂಥೀಯ ಹಿಂದುತ್ವ ಸಂಘಟನೆಯ ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ (ಫೆ.7) ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನರ್ಮದಾಪುರಂ ಜಿಲ್ಲೆಯ ಪಿಪರಿಯಾ ಪ್ರದೇಶದ ಯುವಕ ಮತ್ತು ಯುವತಿ ತಮ್ಮ ವಿವಾಹ ನೋಂದಣಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಸಂಸ್ಕೃತಿ ಬಚಾವೊ ಮಂಚ್ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಯವರು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಇಬ್ಬರು ವ್ಯಕ್ತಿಗಳು ಯುವಕನನ್ನು ನೆಲಕ್ಕೆ ಕೆಡವಿ, ಬೂಟುಗಾಲಿನಿಂದ ಆತನ ಮುಖಕ್ಕೆ ತುಳಿಯುತ್ತಿರುವ ದೃಶ್ಯವಿದೆ.

ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಯುವಕನ ಬಲ ಹುಬ್ಬಿನ ಬಳಿ ರಕ್ತಸ್ರಾವವಾಗುತ್ತಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ನೀವು ಹಿಂದೂ ಹುಡುಗಿಯರ ಹಿಂದೆ ಏಕೆ ಇದ್ದೀರಿ? ಮತ್ತೆ ಲವ್ ಜಿಹಾದ್ ಮಾಡ್ತಿದ್ದೀರಾ? ನೀವು ಸುರಕ್ಷಿತವಾಗಿರಲು ಬಯಸಿದರೆ ಮುಸ್ಲಿಂ ಹುಡುಗಿಯನ್ನು ಮದುವೆಯಾಗಿ” ಎಂದು ದುಷ್ಕರ್ಮಿಗಳು ಹೇಳುವುದನ್ನು ಕೇಳಬಹುದು ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮಗದೊಂದು ವಿಡಿಯೋದಲ್ಲಿ ಪೊಲೀಸರು ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಎಂಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲು ವಾಹನದ ಕಡೆಗೆ ಕರೆದೊಯ್ಯುವಾಗಲೂ, ದುಷ್ಕರ್ಮಿಗಳು ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಕಾಣಬಹುದು ಎಂದು ವರದಿ ಹೇಳಿದೆ.

ಸ್ಥಳೀಯ ಹಿಂದುತ್ವ ಸಂಘಟನೆ ಸಂಸ್ಕೃತಿ ಬಚಾವೋ ಮಂಚ್‌ ಅನ್ನು ಪ್ರತಿನಿಧಿಸುವ ಚಂದ್ರಶೇಖರ್ ತಿವಾರಿ ಎಂಬಾತ “ಹಿಂದೂ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಮುಸ್ಲಿಂ ಯುವಕನ ಪ್ರಯತ್ನವನ್ನು ತಂತ್ರದ ಮೂಲಕ ವಿಫಲಗೊಳಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

“ಆತ ಲವ್ ಜಿಹಾದ್‌ನಲ್ಲಿ ತೊಡಗಿದ್ದ. ನಕಲಿ ಐಡಿ ಮೂಲಕ ಚಾಟ್ ಮಾಡಿ ಹಿಂದೂ ಯುವತಿಯನ್ನು ವಂಚಿಸಿದ್ದ. ಮದುವೆ ಮತ್ತು ನಂತರದ ಧಾರ್ಮಿಕ ಮತಾಂತರಕ್ಕಾಗಿ ಆಕೆಯನ್ನು ಅಕ್ರಮ ಸಂಬಂಧಕ್ಕೆ ಒತ್ತಾಯಿಸಿದ್ದ. ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ನಾವು ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿವಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಹಿಂದುತ್ವ ಗುಂಪಿನ ಜೊತೆಗಿದ್ದ ವಕೀಲರೊಬ್ಬರು, “ಮುಸ್ಲಿಂ ಯುವಕ ನಕಲಿ ಅಫಿಡವಿಟ್ ಆಧಾರದ ಮೇಲೆ ಹಿಂದೂ ಯುವತಿಯನ್ನು ಮದುವೆಯಾಗಲು ಪ್ರಯತ್ನಿಸಿದ್ದಾನೆ” ಎಂದು ಆರೋಪಿಸಿದ್ದಾರೆ.

“ಹಿಂದೂ ಅರ್ಚಕನ ಮಗಳಾದ ಯುವತಿಯನ್ನು ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ ಮುಸ್ಲಿಂ ವ್ಯಕ್ತಿ ಲವ್ ಜಿಹಾದ್ ಮಾಡಿ ವಂಚಿಸಿದ್ದಾನೆ. ಆತನ ಮೇಲಿನ ಹಲ್ಲೆಯ ಬಗ್ಗೆ ಕೇಳುವ ಮೊದಲು, ಲವ್ ಜಿಹಾದ್ ಮೂಲಕ ಧಾರ್ಮಿಕ ಮತಾಂತರಕ್ಕಾಗಿ ಹಿಂದೂ ಅರ್ಚಕನ ಮಗಳನ್ನು ತನ್ನೊಂದಿಗೆ ಏಕೆ ಕರೆತಂದಿದ್ದಾನೆ ಎಂದು ಕೇಳಿ” ಎಂದು ವಕೀಲ ಹೇಳಿದ್ದಾರೆ.

“ಭಿನ್ನ ಧರ್ಮದ ಯುವಕ ಮತ್ತು ಯುವತಿ ವಿವಾಹ ನೋಂದಣಿ ಮಾಡಿಕೊಳ್ಳಲು ನ್ಯಾಯಾಲಯಕ್ಕೆ ಬರುತ್ತಿರುವ ಬಗ್ಗೆ ಕೆಲ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾವು ಅಂತರ್ಧರ್ಮೀಯ ದಂಪತಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಅವರ ಹೇಳಿಕೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ಆಯುಕ್ತ (ಎಂಪಿ ನಗರ) ಅಕ್ಷಯ್ ಚೌಧರಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕ ಮೇಲಿನ ಹಲ್ಲೆಯ ವಿಡಿಯೋ ಹಂಚಿಕೊಂಡಿರುವವರು ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳ ಬದಲು, ಹಲ್ಲೆಗೊಳಗಾದ ಯುವಕನನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...