Homeಮುಖಪುಟಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

- Advertisement -
- Advertisement -

ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಬಿಲ್ಲಾವರ್‌ನ ಗುಜ್ಜರ್ ಯುವಕ  ಮಖಾನ್ ದೀನ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಥುವಾ ಉಪ ಆಯುಕ್ತ ರಾಕೇಶ್ ಮಿನ್ಹಾಸ್ ಅವರು ಲೋಹೈ ಮಲ್ಹಾರ್ ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಉಪ ಪೊಲೀಸ್ ಮಹಾನಿರ್ದೇಶಕ (ಕಥುವಾ-ಸಾಂಬಾ-ಜಮ್ಮು ಶ್ರೇಣಿ) ಶಿವಕುಮಾರ್ ನೇತೃತ್ವದಲ್ಲಿ ಇಲಾಖಾ ತನಿಖೆಗೂ ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಆದೇಶಿಸಿದೆ. ಯಾವುದೇ ಗಡುವನ್ನು ನಿರ್ದಿಷ್ಟಪಡಿಸದೆ ಸಾಧ್ಯವಾದಷ್ಟು ಬೇಗ ತನಿಖೆ ಪೂರ್ಣಗೊಳಿಸಲಾಗುವುದು ಎಂದಿದೆ.

ಕಸ್ಟಡಿ ಹತ್ಯೆ ಎಂದೇ ಆರೋಪಿಸಲಾದ ಯುವಕನ ಆತ್ಮಹತ್ಯೆಯನ್ನು ಜಮ್ಮು ಕಾಶ್ಮೀರದ ನಾಗರಿಕ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆತ್ಮಹತ್ಯೆ ಮಾಡಿಕೊಂಡ ಬುಡಕಟ್ಟು ಯುವಕನಿಗೆ ನ್ಯಾಯ ದೊರಕಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ದೊಡ್ಡ ಮಟ್ಟದ ಆಗ್ರಹ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಮೆಹಬೂಬಾ ಮುಫ್ತಿ, “ಮಖಾನ್ ದೀನ್ ಅವರನ್ನು ಕ್ರೂರವಾಗಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ತಪ್ಪೊಪ್ಪಿಗೆ ನೀಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದಿದ್ದಾರೆ.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಮೆಹಬೂಬಾ ಮುಫ್ತಿ “ಕಥುವಾದಿಂದ ಆಘಾತಕಾರಿ ಸುದ್ದಿ : ಬಿಲ್ಲಾವರ್‌ನ ಪೆರೋಡಿಯ 25 ವರ್ಷದ ಮಖಾನ್ ದೀನ್ ಅವರನ್ನು ಬಿಲ್ಲಾವರ್ ಎಸ್‌ಹೆಚ್‌ಒ ಅವರು ಓವರ್ ಗ್ರೌಂಡ್ ವರ್ಕರ್ (ಒಜಿಡಬ್ಲ್ಯು) ಎಂಬ ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ಬಳಿಕ ಆತನಿಗೆ ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ ಬಲವಂತವಾಗಿ ತಪ್ಪೊಪ್ಪಿಗೆ ಪತ್ರ ಬರೆಯಿಸಲಾಗಿದೆ. ದುರಂತ ಎಂಬಂತೆ ಇಂದು ಮಖಾನ್ ದೀನ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಆ ಪ್ರದೇಶವನ್ನು (ಕಥುವಾ) ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ. ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜನರನ್ನು ಬಂಧಿಸಲಾಗುತ್ತಿದೆ. ಈ ಘಟನೆಯು ಸುಳ್ಳು ಆರೋಪಗಳ ಮೇಲೆ ಮುಗ್ಧ ಯುವಕರನ್ನು ಗುರಿಯಾಗಿಸಿದಂತೆ ತೋರುತ್ತಿದೆ. ಈ ಕುರಿತು ತಕ್ಷಣ ತನಿಖೆ ಕೈಗೊಳ್ಳುವಂತೆ ನಾನು ಜಮ್ಮು ಕಾಶ್ಮೀರ ಡಿಜಿಪಿಗೆ ಒತ್ತಾಯಿಸುತ್ತಿದ್ದೇನೆ” ಎಂದಿದ್ದರು

ಕಥುವಾ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಕೆಲವು ಉಗ್ರಗಾಮಿ ಸಂಬಂಧಿತ ಘಟನೆಗಳಲ್ಲಿ ಮಖಾನ್ ದೀನ್ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ಈ ವಾರದ ಆರಂಭದಲ್ಲಿ ಕಥುವಾ ಪೊಲೀಸರು ಅವರನ್ನು ಬಂಧಿಸಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬುಧವಾರ (ಫೆ.5) ಸಂಜೆ ಸಾವಿಗೂ ಮುನ್ನ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಮಖಾನ್ ದೀನ್ ತಲೆಯ ಮೇಲೆ ಪವಿತ್ರ ಕುರಾನ್ ಪ್ರತಿಯನ್ನು ಹಿಡಿದು, ಇಸ್ಲಾಮಿಕ್ ಶುಭಾಶಯಗಳನ್ನು ವ್ಯಕ್ತಪಡಿಸುತ್ತಿರುವುದು ಮತ್ತು ಜಮ್ಮು ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಲಾದ ಸಕ್ರಿಯ ಉಗ್ರಗಾಮಿ ಸ್ವರ್ ದೀನ್ ಅಲಿಯಾಸ್ ಸ್ವರು ಗುಜ್ಜರ್‌ನನ್ನು ನೋಡಿಲ್ಲ ಎಂದು ಪ್ರಮಾಣ ಮಾಡುತ್ತಿರುವುದು ಇದೆ.

ಬುಧವಾರ ಸಂಜೆ ಪೊಲೀಸರು ಮಖಾನ್ ದೀನ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಿ, ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದರೆಂದು ಹೇಳಲಾದ ಫೋನ್ ತರಲು ಸೂಚಿಸಿದ್ದರು. ಅವರೊಂದಿಗೆ ಯಾರಾದರು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿತ್ತೋ ಎಂಬುವುದು ತಿಳಿದು ಬಂದಿಲ್ಲ.

“ನಾನು ಬೇರೆ ಫೋನ್ ಬಳಸಿ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದೆ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದೇನೆ. ನನಗೆ ಕ್ರೂರವಾಗಿ ಹೊಡೆಯುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳಲು ಸುಮ್ಮನೆ ಸುಳ್ಳು ಕಥೆ ಹೇಳಿದ್ದೆ. ಪೊಲೀಸರು ಈಗ ಆ ಫೋನ್ ತರಲು ನನಗೆ ಸೂಚಿಸಿದ್ದಾರೆ. ನಾನು ಯಾವುದೇ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿ ಇಲ್ಲ. ಹೀಗಿರುವಾಗ, ಅವರನ್ನು ಸಂಪರ್ಕಿಸಿದ ಫೋನ್ ಎಲ್ಲಿಂದ ತರಲಿ? ಎಂದು ಸಾವಿಗೂ ಮುನ್ನ ಮಾಡಿದ ವಿಡಿಯೋದಲ್ಲಿ ಮಖಾನ್ ದೀನ್ ಅಳಲು ತೋಡಿಕೊಂಡಿದ್ದರು.

ಮುಂದುವರಿದು, “ನಾನು ಚಿಕ್ಕವನಿದ್ದಾಗ, ಬಹುಶಃ ಹಾಗೆ ಮಾಡಿರಬಹುದು. ಆದರೆ, ಯಾರು ಹೇಗೆ ಎಂದು ನನಗೆ ತಿಳಿದಾಗಿನಿಂದ ನಾನು ಯಾವುದೇ ಉಗ್ರಗಾಮಿಯನ್ನು ನೋಡಿಲ್ಲ. ನಾನು ಎಂದಿಗೂ ಪೊಲೀಸರಿಗೆ ದ್ರೋಹ ಮಾಡುವುದಿಲ್ಲ ಎಂದು ಶಫಿ ಭಾಯ್‌ಗೆ ಭರವಸೆ ನೀಡಿದ್ದೇನೆ. ನಾನು ನನ್ನ ಭರವಸೆಯನ್ನು ಉಳಿಸಿಕೊಂಡಿದ್ದೇನೆ” ಎಂದು ಎಂದಿದ್ದರು.

ಮಖಾನ್ ದೀನ್ ಅವರು ಉಗ್ರಗಾಮಿ ಎಂದು ಹೇಳಲಾದ ಸ್ವರು ಗುಜ್ಜರ್ ಅವರ ಸೋದರಳಿಯ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಬದ್ನೋಟಾ ಪ್ರದೇಶದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದ ಉಗ್ರರ ಗುಂಪಿನೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಜೂನಿಯರ್ ಕಮಿಷನರ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು.

“ಕೊಹಾಗ್ ಕಾರ್ಯಾಚರಣೆಯಲ್ಲಿ ಹೆಚ್‌ಸಿ ಬಶೀರ್ ಅವರ ಸಾವಿಗೆ ಕಾರಣವಾದ ಗುಂಪು ಇದೇ ಆಗಿದೆ. ಮಖಾನ್‌ಗೆ ಪಾಕಿಸ್ತಾನ ಮತ್ತು ಇತರ ವಿದೇಶಗಳಲ್ಲಿ ಹಲವಾರು ಅನುಮಾನಾಸ್ಪದ ಸಂಪರ್ಕಗಳಿದ್ದವು. ಯಾವುದೇ ಕಸ್ಟಡಿ ಚಿತ್ರಹಿಂಸೆ ಅಥವಾ ಹಲ್ಲೆ ಆಗಿಲ್ಲ. ಮಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿ, ಬಿಟ್ಟು ಕಳುಹಿಸಲಾಗಿದೆ. ಆತನ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಮೆಹಬೂಬಾ ಮುಫ್ತಿ ಅವರ ಆರೋಪಗಳನ್ನು ‘ಆಧಾರರಹಿತ ಮತ್ತು ದಾರಿತಪ್ಪಿಸುವ’ ಹೇಳಿಕೆ ಎಂದಿದ್ದಾರೆ.

ಪೂಂಚ್‌ನ ನಾರ್ ಗ್ರಾಮದ ನಿವಾಸಿ, ಉಗ್ರಗಾಮಿ ದಾಳಿ ಸಂಬಂಧ ವಿಚಾರಣೆಗೆ ಕರೆಯಲ್ಪಟ್ಟಿದ್ದ 50 ವರ್ಷದ ಮುಖ್ತಾರ್ ಹುಸೇನ್ ಶಾ ಎಂಬಾತ ಏಪ್ರಿಲ್ 27, 2023ರಂದು ವಿಷ ಸೇವಿಸಿ ಸಾವನ್ನಪ್ಪಿದ್ದರು. ಅದಾಗಿ, ಎರಡು ವರ್ಷಗಳ ಒಳಗೆ ಈ ಘಟನೆ ನಡೆದಿದೆ. ಮುಖ್ತಾರ್ ಹುಸೇನ್ ಶಾ ಕೂಡ ಸಾವಿಗೂ ಮುನ್ನ 9 ನಿಮಿಷ 45 ಸೆಕೆಂಡುಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು.

“ನನಗೆ ಸೇನೆ, ಪೊಲೀಸರು ಅಥವಾ ಯಾವುದೇ ಗ್ರಾಮಸ್ಥರಿಂದ ಯಾವುದೇ ಒತ್ತಡವಿಲ್ಲ. ನನ್ನ ಕುಟುಂಬ ಮತ್ತು ನೆರೆಹೊರೆಯವರು ಎದುರಿಸುತ್ತಿರುವ ಚಿತ್ರ ಹಿಂಸೆಯಿಂದಾಗಿ ನನ್ನ ಧರ್ಮವು ನಿಷೇಧಿಸಿರುವ ಆತ್ಮಹತ್ಯೆ ಮೂಲಕ ನನ್ನ ಪ್ರಾಣವನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ…ನನಗೆ ಏನೂ ತಿಳಿದಿಲ್ಲ” ಎಂದು ಶಾ ವಿಡಿಯೋದಲ್ಲಿ ಹೇಳಿದ್ದರು. ವಿಡಿಯೋ ಮಾಡುವ ವೇಳೆ ಕೀಟನಾಶಕದ ಬಾಟಲಿಯನ್ನು ಹೊಂದಿದ್ದ ಸಣ್ಣ ಪಾಲಿಥಿನ್ ಚೀಲವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, “ಕಳೆದ 24 ಗಂಟೆಗಳಲ್ಲಿ ಬಾರಾಮುಲ್ಲಾ ಮತ್ತು ಕಥುವಾದಲ್ಲಿ ಇಬ್ಬರು ನಾಗರಿಕರ ಸಾವುಗಳ ವಿಷಯವನ್ನು ಗಮನಿಸಿದ್ದೇನೆ. ಒಬ್ಬರು ಸೇನೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಘಟನೆಗಳು ನಡೆಯಬಾರದಿತ್ತು ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಸ್ಥಳೀಯ ಜನರ ಸಹಕಾರ ಮತ್ತು ಪಾಲುದಾರಿಕೆ ಇಲ್ಲದೆ ಜಮ್ಮು ಕಾಶ್ಮೀರ ಎಂದಿಗೂ ಸಂಪೂರ್ಣವಾಗಿ ಸಹಬದಿಗೆ ಬರಲು ಮತ್ತು ಭಯೋತ್ಪಾದನೆ ಮುಕ್ತವಾಗಲು ಸಾಧ್ಯವಿಲ್ಲ. ಈ ರೀತಿಯ ಘಟನೆಗಳು ಸಾಮಾನ್ಯ ಸ್ಥಿತಿಗೆ ಮರಳಲು ನಾವು ನಮ್ಮೊಂದಿಗೆ ಕೊಂಡೊಯ್ಯಬೇಕಾದ ಜನರನ್ನೇ ದೂರವಿಡುವ ಅಪಾಯವನ್ನುಂಟುಮಾಡುತ್ತವೆ. ನಾನು ಈ ಘಟನೆಗಳನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದೇನೆ ಮತ್ತು ಎರಡೂ ಘಟನೆಗಳನ್ನು ಸಮಯಕ್ಕೆ ಅನುಗುಣವಾಗಿ, ಪಾರದರ್ಶಕ ರೀತಿಯಲ್ಲಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದೇನೆ. ಜಮ್ಮು ಕಾಶ್ಮೀರ ಸರ್ಕಾರವು ತನ್ನದೇ ಆದ ವಿಚಾರಣೆಗೆ ಆದೇಶಿಸಿದೆ ಎಂದು ತಿಳಿಸಿದ್ದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...