HomeUncategorizedದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

- Advertisement -
- Advertisement -

ನವದೆಹಲಿ: ‘ಮೋದಿ, ಮಹಿಳಾ (ಮಹಿಳೆ), ಮಧ್ಯಮ ವರ್ಗದ’ ಮಂತ್ರವು ದೆಹಲಿಯಲ್ಲಿ ಬಿಜೆಪಿಯ ಪುನರಾಗಮನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು 2025ರ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆಯ ಸಮಯದಲ್ಲಿ ತಜ್ಞರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಮಹಿಳೆಯರು ಮತ್ತು ದೆಹಲಿಯ ಮಧ್ಯಮ ವರ್ಗದ ನಿವಾಸಿಗಳ ದೊಡ್ಡ ವಿಭಾಗವು ಎಎಪಿಯನ್ನು ತಿರಸ್ಕರಿಸಿದೆ ಮತ್ತು ಈ ಬಾರಿ ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿರಂತರ ಪ್ರಭಾವವು ಅರವಿಂದ್ ಕೇಜ್ರಿವಾಲ್ ಅವರ ಎಎಪಿಯನ್ನು ದೊಡ್ಡ ಸೋಲಿನ ಅಂಚಿಗೆ ತಳ್ಳಿತು. ಬಿಜೆಪಿ ಗೆಲುವು ಸಾಧಿಸಿದೆ.

ಈ ಚುನಾವಣೆಯಲ್ಲಿ ಎಎಪಿಯ ಪ್ರಭಾವಿಗಳಾದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಲನ್ನನುಭವಿಸಿದ್ದಾರೆ. 2013ರಿಂದ ನವದೆಹಲಿ ಕ್ಷೇತ್ರದಿಂದ  ಕೇಜ್ರಿವಾಲ್ ಮತ್ತು ಜಂಗ್‌ಪುರ ಕ್ಷೇತ್ರದಿಂದ ಸಿಸೋಡಿಯಾ ಗೆಲುವು ಸಾಧಿಸುತ್ತಾ ಬಂದಿದ್ದರು.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪ್ರಾಬಲ್ಯ ಸಾಧಿಸಿತ್ತು. ಆಗ ಎಎಪಿಯು 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿತು. 2015ರಲ್ಲಿ ಅದು ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಬಹುತೇಕ 67 ಸ್ಥಾನಗಳನ್ನು ಬಾಚಿಕೊಂಡಿತ್ತು.

ಮಾಜಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತನಾಗಿದ್ದ ಕೇಜ್ರಿವಾಲ್ ಅವರ ಮೇಲೆ ‘ಶೀಶ್‌ಮಹಲ್’ ವಿವಾದದಿಂದ ಹಿಡಿದು ಮದ್ಯ ಅಬಕಾರಿ ನೀತಿ ಹಗರಣದವರೆಗೆ ಆರೋಪಗಳನ್ನು ಹೊರಿಸಲಾಗಿತ್ತು. ಈ ಸೋಲು ದೆಹಲಿ ಮೇಲಿನ ಅವರ ದಶಕದ ನಿಯಂತ್ರಣವನ್ನು ಕೊನೆಗೊಳಿಸಿದಂತಾಗಿದೆ.

ಆದರೆ ಬಿಜೆಪಿಯ (ಎಲ್ಲವೂ ಖಚಿತವಲ್ಲ) ಗೆಲುವಿನ ಹಿಂದಿನ ದೊಡ್ಡ ಅಂಶಗಳು ಮಧ್ಯಮ ವರ್ಗ ಮತ್ತು ಮಹಿಳಾ ಮತದಾರರಾಗಿದ್ದಾರೆ. ಈ ಎರಡು ವರ್ಗ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಎಎಪಿಯ ಬಲವಾದ ಬೆಂಬಲಿಗರಾಗಿದ್ದರು.

‘ಮಹಿಳಾ’ ಮತದಾರರು

ಈ ಚುನಾವಣೆಯ ಆರಂಭದಲ್ಲಿಯೇ ಮಹಿಳೆಯರನ್ನು ಸಂಭಾವ್ಯ ಪ್ರಮುಖ ಮತಗಳ ನೆಲೆಯಾಗಿ ಗುರುತಿಸಿ ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ ಎಲ್ಲರೂ ತಮ್ಮ ಪ್ರಣಾಳಿಕೆಗಳಲ್ಲಿ ಅವರಿಗಾಗಿ ವಿಶೇಷ ಭರವಸೆಗಳನ್ನು ನೀಡಿದ್ದರು. ದೆಹಲಿಯ ನೋಂದಾಯಿತ ಮತದಾರರಲ್ಲಿ ಶೇ.46ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ. ಅಂದರೆ ಸುಮಾರು 71 ಲಕ್ಷ ಮಹಿಳಾ ಮತದಾರನ್ನು ದೆಹಲಿ ವಿಧಾನಸಭಾ ಕ್ಷೇತ್ರವು ಹೊಂದಿದೆ.

ಮತದಾನದ ಹಿಂದಿನ ದಿನಗಳಲ್ಲಿ (ಅದು ಬುಧವಾರ), ಹೆಚ್ಚಿನ ಮಹಿಳೆಯರು ಮತ ಚಲಾಯಿಸಲು ಸಹಿ ಹಾಕುತ್ತಿದ್ದರು ಮತ್ತು ಅದು ಹೆಚ್ಚಿನ ಮತಗಳಾಗಿ ಬದಲಾಯಿತು. ಇದರಿಂದಾಗಿ ಈ ಚುನಾವಣಾ ಸಂದರ್ಭ ಮಹಿಳಾ ಮತದಾರರ ಸಂಖ್ಯೆ ಸುಮಾರು ಎರಡು ಪ್ರತಿಶತದಷ್ಟು ಏರಿಕೆ ಕಂಡಿತ್ತು.

2020ರ  ಚುನಾವಣೆಯಲ್ಲಿ ಎಎಪಿಯು ಸುಮಾರು ಶೇ. 60ರಷ್ಟು ಮಹಿಳಾ ಮತಗಳನ್ನು ಗಳಿಸಿತ್ತು ಎಂದು ರಾಜಕೀಯ ವಿಶ್ಲೇಷಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆಗ ಬಿಜೆಪಿಯು ಕೇವಲ ಶೇ.35 ರಷ್ಟು ಮಾತ್ರ ಮಹಿಳಾ ಮತಗಳನ್ನು ಗಳಿಸಿತ್ತು. ಈ ಬಾರಿ ಎಲ್ಲವೂ ತಲೆಕೆಳಗಾಗಿರುವಂತೆ ಕಾಣುತ್ತಿದೆ. ತಿಂಗಳಿಗೆ ರೂ. 2,500 ನೇರ ನಗದು ವರ್ಗಾವಣೆಯ ಭರವಸೆ ನೀಡಿದ ಕೇಸರಿ ಪಕ್ಷದ ಕಡೆ ಮಹಿಳೆಯರು ತಿರುಗಿರುವುದು ಕಾಣುತ್ತಿದೆ.

ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದಂತಹ ಇತರ ಭರವಸೆಗಳನ್ನು ಬಿಜೆಪಿ ಮತ್ತು ಎಎಪಿಗಳೆರಡರಿಂದ ನೀಡಲಾಗಿತ್ತು. ಇದರ ಜೊತೆ ಬಿಜೆಪಿಯು ಗರ್ಭಿಣಿ ಮಹಿಳೆಯರಿಗೆ ನಗದು ಸಹಾಯ ನೀಡುವ ಎರಡನೇ ವಿಶೇಷ ಪ್ರತಿಜ್ಞೆ ಮಾಡಿತ್ತು. ಎಎಪಿ ಇದೇ ರೀತಿಯ ತಿಂಗಳಿಗೆ ರೂ. 2,100 ನೀಡುವ ಭರವಸೆ ನೀಡಿತ್ತು. ಆದರೆ ಇದು ನಿಷ್ಪರಿಣಾಮಕಾರಿಯಾಗಿತ್ತು. ಅಧಿಕಾರದಲ್ಲಿದ್ದ ಪಕ್ಷವು ಇದರ ಅನುಷ್ಠಾನ ವಿಳಂಬದ ತಪ್ಪು ಕಾರ್ಯತಂತ್ರ ಇದಕ್ಕೆ ಕಾರಣವೆಂದು  ತಜ್ಞರು ಎನ್‌ಡಿಟಿವಿಗೆ  ಎಂದು ಹೇಳಿದ್ದಾರೆ.

ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಎಎಪಿ ನಡುವೆ ಹಲವಾರು ಪೈಪೋಟಿಗಳು ನಡೆದವು. ಆಗಲೂ ಕೇಜ್ರಿವಾಲ್ ಇದನ್ನು ಕಾರ್ಯರೂಪಕ್ಕೆ ತರಬೇಕಿತ್ತು ಎಂದು ತಜ್ಞರು ಹೇಳಿದ್ದಾರೆ.

ಇದರರ್ಥ ಮಹಿಳಾ ಮತದಾರರು ಒಂದು ಕಾಲದಲ್ಲಿ ಎಎಪಿಗೆ ಪ್ರಮುಖವಾಗಿದ್ದರು. ಈಗ ವಿಶೇಷವಾಗಿ ಮಹಿಳಾ ಮಧ್ಯಮ ವರ್ಗದ ಮತದಾರರು ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.

ಮಧ್ಯಮ ವರ್ಗ

2025ರ ಕೇಂದ್ರ ಬಜೆಟ್ ನಂತರ ಮಧ್ಯಮ ವರ್ಗದವರು ಬಿಜೆಪಿ ಪಾಳಯಕ್ಕೆ ಜಿಗಿದಿರುವುದು ಕಂಡು ಬರುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆ ರಿಯಾಯಿತಿ ಮಿತಿಯಲ್ಲಿ ಭಾರಿ ಹೆಚ್ಚಳವನ್ನು ಘೋಷಿಸಿದರು. ರೂ. 12 ಲಕ್ಷ  ಹೊಂದಿರುವ ಜನರು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲವೆಂಬುದು ಈ ಘೋಷಣೆಯಾಗಿದೆ. ಈ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಈ ಕ್ರಮವನ್ನು ಶ್ಲಾಘಿಸಿ ಮಾತನಾಡಿದರು. ದಕ್ಷಿಣ ದೆಹಲಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು ಆ ಅಂಶವನ್ನು ಮಂಡಿಸಿದರು.

ಭ್ರಷ್ಟಾಚಾರ ಹಗರಣಗಳಲ್ಲಿ ಎಎಪಿ ಸಿಲುಕಿದ ನಂತರ ಮಧ್ಯಮ ವರ್ಗದ ಮತಗಳು ಬಿಜೆಪಿಯತ್ತ ತಿರುಗಿದವು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಕೇಜ್ರಿವಾಲ್ ಮೇಲಿನ ಮದ್ಯ ನೀತಿ ವಿವಾದದ ಆರೋಪವು ಪ್ರಮುಖವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಮತ್ತು ಅವರ ಆಪ್ತ ಮನೀಶ್ ಸಿಸೋಡಿಯಾ ಇಬ್ಬರೂ ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿದ್ದರು.

ಮಧ್ಯಮ ವರ್ಗದವರು ದೆಹಲಿಯ ಮತದಾರರಲ್ಲಿ ಸುಮಾರು 40 ಪ್ರತಿಶತದಷ್ಟಿದ್ದಾರೆ. ಇದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾವುದೇ ಚುನಾವಣೆಗೂ ಇವರು ನಿರ್ಣಾಯಕವಾಗಿದ್ದಾರೆ. ಬಿಜೆಪಿಯು ಇವರನ್ನು ತನ್ನ ಕಡೆಗೆ ಸೆಳೆಯಲು ಸಹಾಯ ಮಾಡಿದ್ದು ಆದಾಯ ತೆರಿಗೆ ವಿನಾಯಿತಿಯಾಗಿದೆ. ಇಷ್ಟು ಮಾತ್ರವಲ್ಲ ಕುಸಿಯುತ್ತಿರುವ ಮೂಲಸೌಕರ್ಯ ಮತ್ತು ವಾರ್ಷಿಕ ವಾಯು ಗುಣಮಟ್ಟದ ಬಿಕ್ಕಟ್ಟು ಕೂಡ ಕಾರಣವಾಗಿದೆ.

ಬಿಜೆಪಿ ಕಡೆ ಮತದಾರರು ಒಲವು ತೋರಿಸಲು ಮತ್ತೊಂದು ಪ್ರಮುಖ ‘ಆಕರ್ಷಕ’ವೆಂದರೆ 8ನೇ ವೇತನ ಆಯೋಗವಾಗಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಳಿಗೆ ದೊಡ್ಡ ಪರಿಷ್ಕರಣೆಯನ್ನು ಶಿಫಾರಸು ಮಾಡಿತು. ಅವರಲ್ಲಿ ಹೆಚ್ಚಿನವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಕೇಜ್ರಿವಾಲ್ ಅವರ ‘ಸ್ವಚ್ಛ’ ಮತ್ತು ‘ಭ್ರಷ್ಟಾಚಾರ ರಹಿತ’ ಇಮೇಜ್ ಕುಸಿದಿರುವಂತೆ ತೋರುತ್ತಿದೆ.

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...