HomeUncategorizedದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

- Advertisement -
- Advertisement -

ನವದೆಹಲಿ: ‘ಮೋದಿ, ಮಹಿಳಾ (ಮಹಿಳೆ), ಮಧ್ಯಮ ವರ್ಗದ’ ಮಂತ್ರವು ದೆಹಲಿಯಲ್ಲಿ ಬಿಜೆಪಿಯ ಪುನರಾಗಮನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು 2025ರ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆಯ ಸಮಯದಲ್ಲಿ ತಜ್ಞರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಮಹಿಳೆಯರು ಮತ್ತು ದೆಹಲಿಯ ಮಧ್ಯಮ ವರ್ಗದ ನಿವಾಸಿಗಳ ದೊಡ್ಡ ವಿಭಾಗವು ಎಎಪಿಯನ್ನು ತಿರಸ್ಕರಿಸಿದೆ ಮತ್ತು ಈ ಬಾರಿ ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿರಂತರ ಪ್ರಭಾವವು ಅರವಿಂದ್ ಕೇಜ್ರಿವಾಲ್ ಅವರ ಎಎಪಿಯನ್ನು ದೊಡ್ಡ ಸೋಲಿನ ಅಂಚಿಗೆ ತಳ್ಳಿತು. ಬಿಜೆಪಿ ಗೆಲುವು ಸಾಧಿಸಿದೆ.

ಈ ಚುನಾವಣೆಯಲ್ಲಿ ಎಎಪಿಯ ಪ್ರಭಾವಿಗಳಾದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಲನ್ನನುಭವಿಸಿದ್ದಾರೆ. 2013ರಿಂದ ನವದೆಹಲಿ ಕ್ಷೇತ್ರದಿಂದ  ಕೇಜ್ರಿವಾಲ್ ಮತ್ತು ಜಂಗ್‌ಪುರ ಕ್ಷೇತ್ರದಿಂದ ಸಿಸೋಡಿಯಾ ಗೆಲುವು ಸಾಧಿಸುತ್ತಾ ಬಂದಿದ್ದರು.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪ್ರಾಬಲ್ಯ ಸಾಧಿಸಿತ್ತು. ಆಗ ಎಎಪಿಯು 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿತು. 2015ರಲ್ಲಿ ಅದು ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಬಹುತೇಕ 67 ಸ್ಥಾನಗಳನ್ನು ಬಾಚಿಕೊಂಡಿತ್ತು.

ಮಾಜಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತನಾಗಿದ್ದ ಕೇಜ್ರಿವಾಲ್ ಅವರ ಮೇಲೆ ‘ಶೀಶ್‌ಮಹಲ್’ ವಿವಾದದಿಂದ ಹಿಡಿದು ಮದ್ಯ ಅಬಕಾರಿ ನೀತಿ ಹಗರಣದವರೆಗೆ ಆರೋಪಗಳನ್ನು ಹೊರಿಸಲಾಗಿತ್ತು. ಈ ಸೋಲು ದೆಹಲಿ ಮೇಲಿನ ಅವರ ದಶಕದ ನಿಯಂತ್ರಣವನ್ನು ಕೊನೆಗೊಳಿಸಿದಂತಾಗಿದೆ.

ಆದರೆ ಬಿಜೆಪಿಯ (ಎಲ್ಲವೂ ಖಚಿತವಲ್ಲ) ಗೆಲುವಿನ ಹಿಂದಿನ ದೊಡ್ಡ ಅಂಶಗಳು ಮಧ್ಯಮ ವರ್ಗ ಮತ್ತು ಮಹಿಳಾ ಮತದಾರರಾಗಿದ್ದಾರೆ. ಈ ಎರಡು ವರ್ಗ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಎಎಪಿಯ ಬಲವಾದ ಬೆಂಬಲಿಗರಾಗಿದ್ದರು.

‘ಮಹಿಳಾ’ ಮತದಾರರು

ಈ ಚುನಾವಣೆಯ ಆರಂಭದಲ್ಲಿಯೇ ಮಹಿಳೆಯರನ್ನು ಸಂಭಾವ್ಯ ಪ್ರಮುಖ ಮತಗಳ ನೆಲೆಯಾಗಿ ಗುರುತಿಸಿ ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ ಎಲ್ಲರೂ ತಮ್ಮ ಪ್ರಣಾಳಿಕೆಗಳಲ್ಲಿ ಅವರಿಗಾಗಿ ವಿಶೇಷ ಭರವಸೆಗಳನ್ನು ನೀಡಿದ್ದರು. ದೆಹಲಿಯ ನೋಂದಾಯಿತ ಮತದಾರರಲ್ಲಿ ಶೇ.46ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ. ಅಂದರೆ ಸುಮಾರು 71 ಲಕ್ಷ ಮಹಿಳಾ ಮತದಾರನ್ನು ದೆಹಲಿ ವಿಧಾನಸಭಾ ಕ್ಷೇತ್ರವು ಹೊಂದಿದೆ.

ಮತದಾನದ ಹಿಂದಿನ ದಿನಗಳಲ್ಲಿ (ಅದು ಬುಧವಾರ), ಹೆಚ್ಚಿನ ಮಹಿಳೆಯರು ಮತ ಚಲಾಯಿಸಲು ಸಹಿ ಹಾಕುತ್ತಿದ್ದರು ಮತ್ತು ಅದು ಹೆಚ್ಚಿನ ಮತಗಳಾಗಿ ಬದಲಾಯಿತು. ಇದರಿಂದಾಗಿ ಈ ಚುನಾವಣಾ ಸಂದರ್ಭ ಮಹಿಳಾ ಮತದಾರರ ಸಂಖ್ಯೆ ಸುಮಾರು ಎರಡು ಪ್ರತಿಶತದಷ್ಟು ಏರಿಕೆ ಕಂಡಿತ್ತು.

2020ರ  ಚುನಾವಣೆಯಲ್ಲಿ ಎಎಪಿಯು ಸುಮಾರು ಶೇ. 60ರಷ್ಟು ಮಹಿಳಾ ಮತಗಳನ್ನು ಗಳಿಸಿತ್ತು ಎಂದು ರಾಜಕೀಯ ವಿಶ್ಲೇಷಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆಗ ಬಿಜೆಪಿಯು ಕೇವಲ ಶೇ.35 ರಷ್ಟು ಮಾತ್ರ ಮಹಿಳಾ ಮತಗಳನ್ನು ಗಳಿಸಿತ್ತು. ಈ ಬಾರಿ ಎಲ್ಲವೂ ತಲೆಕೆಳಗಾಗಿರುವಂತೆ ಕಾಣುತ್ತಿದೆ. ತಿಂಗಳಿಗೆ ರೂ. 2,500 ನೇರ ನಗದು ವರ್ಗಾವಣೆಯ ಭರವಸೆ ನೀಡಿದ ಕೇಸರಿ ಪಕ್ಷದ ಕಡೆ ಮಹಿಳೆಯರು ತಿರುಗಿರುವುದು ಕಾಣುತ್ತಿದೆ.

ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದಂತಹ ಇತರ ಭರವಸೆಗಳನ್ನು ಬಿಜೆಪಿ ಮತ್ತು ಎಎಪಿಗಳೆರಡರಿಂದ ನೀಡಲಾಗಿತ್ತು. ಇದರ ಜೊತೆ ಬಿಜೆಪಿಯು ಗರ್ಭಿಣಿ ಮಹಿಳೆಯರಿಗೆ ನಗದು ಸಹಾಯ ನೀಡುವ ಎರಡನೇ ವಿಶೇಷ ಪ್ರತಿಜ್ಞೆ ಮಾಡಿತ್ತು. ಎಎಪಿ ಇದೇ ರೀತಿಯ ತಿಂಗಳಿಗೆ ರೂ. 2,100 ನೀಡುವ ಭರವಸೆ ನೀಡಿತ್ತು. ಆದರೆ ಇದು ನಿಷ್ಪರಿಣಾಮಕಾರಿಯಾಗಿತ್ತು. ಅಧಿಕಾರದಲ್ಲಿದ್ದ ಪಕ್ಷವು ಇದರ ಅನುಷ್ಠಾನ ವಿಳಂಬದ ತಪ್ಪು ಕಾರ್ಯತಂತ್ರ ಇದಕ್ಕೆ ಕಾರಣವೆಂದು  ತಜ್ಞರು ಎನ್‌ಡಿಟಿವಿಗೆ  ಎಂದು ಹೇಳಿದ್ದಾರೆ.

ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಎಎಪಿ ನಡುವೆ ಹಲವಾರು ಪೈಪೋಟಿಗಳು ನಡೆದವು. ಆಗಲೂ ಕೇಜ್ರಿವಾಲ್ ಇದನ್ನು ಕಾರ್ಯರೂಪಕ್ಕೆ ತರಬೇಕಿತ್ತು ಎಂದು ತಜ್ಞರು ಹೇಳಿದ್ದಾರೆ.

ಇದರರ್ಥ ಮಹಿಳಾ ಮತದಾರರು ಒಂದು ಕಾಲದಲ್ಲಿ ಎಎಪಿಗೆ ಪ್ರಮುಖವಾಗಿದ್ದರು. ಈಗ ವಿಶೇಷವಾಗಿ ಮಹಿಳಾ ಮಧ್ಯಮ ವರ್ಗದ ಮತದಾರರು ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.

ಮಧ್ಯಮ ವರ್ಗ

2025ರ ಕೇಂದ್ರ ಬಜೆಟ್ ನಂತರ ಮಧ್ಯಮ ವರ್ಗದವರು ಬಿಜೆಪಿ ಪಾಳಯಕ್ಕೆ ಜಿಗಿದಿರುವುದು ಕಂಡು ಬರುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆ ರಿಯಾಯಿತಿ ಮಿತಿಯಲ್ಲಿ ಭಾರಿ ಹೆಚ್ಚಳವನ್ನು ಘೋಷಿಸಿದರು. ರೂ. 12 ಲಕ್ಷ  ಹೊಂದಿರುವ ಜನರು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲವೆಂಬುದು ಈ ಘೋಷಣೆಯಾಗಿದೆ. ಈ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಈ ಕ್ರಮವನ್ನು ಶ್ಲಾಘಿಸಿ ಮಾತನಾಡಿದರು. ದಕ್ಷಿಣ ದೆಹಲಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು ಆ ಅಂಶವನ್ನು ಮಂಡಿಸಿದರು.

ಭ್ರಷ್ಟಾಚಾರ ಹಗರಣಗಳಲ್ಲಿ ಎಎಪಿ ಸಿಲುಕಿದ ನಂತರ ಮಧ್ಯಮ ವರ್ಗದ ಮತಗಳು ಬಿಜೆಪಿಯತ್ತ ತಿರುಗಿದವು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಕೇಜ್ರಿವಾಲ್ ಮೇಲಿನ ಮದ್ಯ ನೀತಿ ವಿವಾದದ ಆರೋಪವು ಪ್ರಮುಖವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಮತ್ತು ಅವರ ಆಪ್ತ ಮನೀಶ್ ಸಿಸೋಡಿಯಾ ಇಬ್ಬರೂ ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿದ್ದರು.

ಮಧ್ಯಮ ವರ್ಗದವರು ದೆಹಲಿಯ ಮತದಾರರಲ್ಲಿ ಸುಮಾರು 40 ಪ್ರತಿಶತದಷ್ಟಿದ್ದಾರೆ. ಇದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾವುದೇ ಚುನಾವಣೆಗೂ ಇವರು ನಿರ್ಣಾಯಕವಾಗಿದ್ದಾರೆ. ಬಿಜೆಪಿಯು ಇವರನ್ನು ತನ್ನ ಕಡೆಗೆ ಸೆಳೆಯಲು ಸಹಾಯ ಮಾಡಿದ್ದು ಆದಾಯ ತೆರಿಗೆ ವಿನಾಯಿತಿಯಾಗಿದೆ. ಇಷ್ಟು ಮಾತ್ರವಲ್ಲ ಕುಸಿಯುತ್ತಿರುವ ಮೂಲಸೌಕರ್ಯ ಮತ್ತು ವಾರ್ಷಿಕ ವಾಯು ಗುಣಮಟ್ಟದ ಬಿಕ್ಕಟ್ಟು ಕೂಡ ಕಾರಣವಾಗಿದೆ.

ಬಿಜೆಪಿ ಕಡೆ ಮತದಾರರು ಒಲವು ತೋರಿಸಲು ಮತ್ತೊಂದು ಪ್ರಮುಖ ‘ಆಕರ್ಷಕ’ವೆಂದರೆ 8ನೇ ವೇತನ ಆಯೋಗವಾಗಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಳಿಗೆ ದೊಡ್ಡ ಪರಿಷ್ಕರಣೆಯನ್ನು ಶಿಫಾರಸು ಮಾಡಿತು. ಅವರಲ್ಲಿ ಹೆಚ್ಚಿನವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಕೇಜ್ರಿವಾಲ್ ಅವರ ‘ಸ್ವಚ್ಛ’ ಮತ್ತು ‘ಭ್ರಷ್ಟಾಚಾರ ರಹಿತ’ ಇಮೇಜ್ ಕುಸಿದಿರುವಂತೆ ತೋರುತ್ತಿದೆ.

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...