HomeಮುಖಪುಟDelhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರುತ್ತಿದ್ದು, ಆಡಳಿತರೂಢ ಎಎಪಿ ಹೀನಾಯವಾಗಿ ಸೋಲುಂಡಿದೆ. ಚುನಾವಣೆಯಲ್ಲಿ ಎಎಪಿಯ ಘಟಾನುಘಟಿ ನಾಯಕರು ಸೋಲುಂಡಿರುವ ನಡುವೆ ಮುಖ್ಯಮಂತ್ರಿ ಅತಿಶಿ ತಮ್ಮ ಕಲ್ಕಾಜಿ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. Delhi Election Results 2025

ಈ ನಡುವೆ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ. Delhi Election Results 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ  675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ. Delhi Election Results 2025

ಇದನ್ನೂಓದಿ:  ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...