HomeಮುಖಪುಟDelhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರುತ್ತಿದ್ದು, ಆಡಳಿತರೂಢ ಎಎಪಿ ಹೀನಾಯವಾಗಿ ಸೋಲುಂಡಿದೆ. ಚುನಾವಣೆಯಲ್ಲಿ ಎಎಪಿಯ ಘಟಾನುಘಟಿ ನಾಯಕರು ಸೋಲುಂಡಿರುವ ನಡುವೆ ಮುಖ್ಯಮಂತ್ರಿ ಅತಿಶಿ ತಮ್ಮ ಕಲ್ಕಾಜಿ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. Delhi Election Results 2025

ಈ ನಡುವೆ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ. Delhi Election Results 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ  675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ. Delhi Election Results 2025

ಇದನ್ನೂಓದಿ:  ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...