Homeಮುಖಪುಟಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

ಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಮಿಲ್ಕಿಪುರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಚಂದ್ರಭಾನು ಪಾಸ್ವಾನ್ ಅವರು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಜಿತ್ ಪ್ರಸಾದ್ ಅವರನ್ನು 65,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಅದಗ್ಯೂ, ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಎಸ್‌ಪಿ ಆರೋಪಿಸಿದೆ. ಯುಪಿ ಉಪ ಚುನಾವಣೆ

ಮಿಲ್ಕಿಪುರ ಕ್ಷೇತ್ರದ ಉಪ ಚುನಾವಣೆಯನ್ನು ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿ ಪರಿಗಣಿಸಿತ್ತು. ಚುನಾವಣೆಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಿದ್ದರು. ಮಿಲ್ಕಿಪುರ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಿಜೆಪಿ ಎಂಟು ವರ್ಷಗಳ ಅಂತರವನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಾಸ್ವಾನ್ ಅವರು ತನ್ನ ಗೆಲುವಿಗೆ ಶನಿವಾರ ಬಿಜೆಪಿಗೆ ಕೃತಜ್ಞತೆ ಸಲ್ಲಿಸಿದ್ದು, “ಮೋದಿ ಅವರು ಮತ್ತು ಯೋಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮತದಾರರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅಪಾರ ಗೌರವ ಮತ್ತು ಬೆಂಬಲ ಸಿಕ್ಕಿದೆ.” ಎಂದು ಹೇಳಿದ್ದಾರೆ. ಯುಪಿ ಉಪ ಚುನಾವಣೆ

ಅಯೋಧ್ಯೆ ಮತ್ತು ಮಿಲ್ಕಿಪುರದ ಜನರು ಅಭಿವೃದ್ಧಿ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಒ.ಪಿ. ರಾಜ್‌ಭರ್ ಹೇಳಿದ್ದಾರೆ. “ಎನ್‌ಡಿಎ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಸಾರ್ವಜನಿಕರು ಅಭಿವೃದ್ಧಿಯನ್ನು ಬಯಸುತ್ತಾರೆ ಮತ್ತು ಅವರು ಯೋಗಿ ಅವರ ಕೆಲಸದಿಂದ ಸಂತೋಷಪಟ್ಟಿದ್ದಾರೆ” ಎಂದು ರಾಜ್‌ಭರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

2024ರಲ್ಲಿ ಲೋಕಸಭೆಗೆ ಆಯ್ಕೆಯಾದ ಕಾರಣಕ್ಕೆ ಎಸ್‌ಪಿಯ ಅವಧೇಶ್ ಪ್ರಸಾದ್ ಕ್ಷೇತ್ರವನ್ನು ತೊರೆದಿದ್ದರು, ಹಾಗಾಗಿ ಮಿಲ್ಕಿಪುರ ಉಪಚುನಾವಣೆ ನಡೆದಿತ್ತು. ಫೈಜಾಬಾದ್ ಕ್ಷೇತ್ರದಲ್ಲಿ ಅವಧೇಶ್ ಪ್ರಸಾದ್ ಅವರು ಎರಡು ಬಾರಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದರು. ಎಸ್‌ಪಿಯ ಉಪ ಚುನಾವಣೆ ಅಭ್ಯರ್ಥಿ ಅಜಿತ್ ಪ್ರಸಾದ್ ಅವರು ಅವದೇಶ್ ಪ್ರಸಾದ್‌ ಮಗ.

ಮತ ಎಣಿಕೆಯ ಸಮಯದಲ್ಲಿ, ಎಸ್‌ಪಿ ಸಂಸದ ಅವಧೇಶ್ ಪ್ರಸಾದ್ ಬಿಜೆಪಿಯನ್ನು “ಅಪ್ರಾಮಾಣಿಕ” ಪಕ್ಷ ಎಂದು ಆರೋಪಿಸಿದ್ದು, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯ ಗೆಲುವು ನಕಲಿ ಎಂದು ಕರೆದಿದ್ದಾರೆ.

ಕ್ಷೇತ್ರದ ಉಪಚುನಾವಣೆಯ ಮತದಾನ ಬುಧವಾರ ನಡೆದಿದ್ದು, ಒಟ್ಟು 3.70 ಲಕ್ಷ ಮತದಾರರಲ್ಲಿ 65% ಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ (EC) ಪ್ರಕಾರ, ಮತದಾನ ಪೂರ್ಣಗೊಳ್ಳುವವರೆಗೆ ಶೇ. 65.35 ರಷ್ಟು ಮತಗಳು ಚಲಾವಣೆಯಾಗಿವೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಶೇ. 60.23 ರಷ್ಟು ಮತದಾನ ದಾಖಲಾಗಿತ್ತು.

ಮತದಾನದ ದಿನ ಕೂಡಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡು, ಇದು ಆಡಳಿತಾರೂಢ ಬಿಜೆಪಿಗೆ ಸಹಾಯ ಮಾಡಲು ಅದರ ಅಧ್ಯಕ್ಷರು “ನಕಲಿ ಮತದಾನ”ದ “ಗುರಿ”ಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸುತ್ತದೆ ಎಂದು ಹೇಳಿಕೊಂಡಿದ್ದರು.

ಇದನ್ನೂಓದಿ:  ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...