Homeಕರ್ನಾಟಕಮೈಸೂರು - ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

ಮೈಸೂರು – ಹೊಸದಾಗಿ ಸೇರಿದ 700 ಉದ್ಯೋಗಿಗಳ ವಜಾ ಮಾಡಿದ ಇನ್ಫೋಸಿಸ್!

- Advertisement -
- Advertisement -

ರಾಜ್ಯದ ಮೈಸೂರು ಕ್ಯಾಂಪಸ್‌ನಲ್ಲಿ ನೇಮಕಗೊಂಡಿದ್ದ ಮತ್ತು ಕಳೆದ ಕೆಲವು ತಿಂಗಳುಗಳಲ್ಲಿ ಫೌಂಡೇಶನ್‌ನಿಂದ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸಬರನ್ನುಇನ್ಫೋಸಿಸ್‌ ವಜಾಗೊಳಿಸಿದೆ ಎಂಬುವುದನ್ನು ಒಪ್ಪಿಕೊಂಡಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಐಟಿ ವಲಯದ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಜಾಗೊಳಿಸಲಾಗಿರುವ ಸಂಖ್ಯೆಯನ್ನು 700 ಎಂದು ಹೇಳಿದ್ದು ವಿವಾದವೇರ್ಪಟ್ಟಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಇನ್ಫೋಸಿಸ್ ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ವಜಾಗೊಳಿಸಿದ್ದು ಇದೇ ಮೊದಲಾಗಿದ್ದು, ಈ ಹಿಂದೆ ಸುಮಾರು 500 ಜನರನ್ನು ವಜಾಗೊಳಿಸಲಾಗಿತ್ತು ಎಂದು ವಜಾಗೊಳಿಸಲ್ಪಟ್ಟ ವ್ಯಕ್ತಿಯೊಬ್ಬರು ಅಂದಾಜಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ಫೋಸಿಸ್ ಅಕ್ಟೋಬರ್ 2024 ರಲ್ಲಿ ಕೆಲವೇ ತಿಂಗಳುಗಳ ಹಿಂದೆ ನೇಮಕಗೊಂಡಿದ್ದ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ಬಲವಂತವಾಗಿ ವಜಾಗೊಳಿಸಲು ಪ್ರಾರಂಭಿಸಿದ್ದು, ಇದು ಆಘಾತಕಾರಿ ಮತ್ತು ಅನೈತಿಕ ಕ್ರಮವಾಗಿದೆ. ಈ ಉದ್ಯೋಗಿಗಳು ತಮ್ಮ ಆಫರ್ ಲೆಟರ್‌ಗಳನ್ನು ಸ್ವೀಕರಿಸಿ ಈಗಾಗಲೇ ಎರಡು ವರ್ಷಗಳ ಕಾಲ ಕಾಯಬೇಕಾಗಿತ್ತು” ಎಂದು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲುಜಾ ಹೇಳಿದ್ದಾರೆ.

ಇನ್ಫೋಸಿಸ್ ಶುಕ್ರವಾರ ಈ ಉದ್ಯೋಗಿಗಳನ್ನು ತನ್ನ ಮೈಸೂರು ಕ್ಯಾಂಪಸ್‌ನ ಸಭೆ ಕೊಠಡಿಗಳಿಗೆ ಕರೆಸಿತು. ಅಲ್ಲಿ ಅವರನ್ನು “ಪರಸ್ಪರ ಬೇರ್ಪಡಿಕೆ” ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಯಿತು ಎಂದು ಒಕ್ಕೂಟವು ಹೇಳಿದೆ.

ದೇಶದ ಎಲ್ಲಾ ಪ್ರದೇಶದಿಂದ ಇದ್ದ ಉದ್ಯೋಗಿಗಳನ್ನು ಪೂರ್ಣ ದಿನದ ನೋಟಿಸ್ ಅವಧಿ ಕೂಡಾ ನೀಡದೆ ಸಂಜೆಯೊಳಗೆ ಇನ್ಫೋಸಿಸ್ ಆವರಣವನ್ನು ತೊರೆಯುವಂತೆ ಹೇಳಲಾಯಿತು ಎಂದು ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಜೊತೆಗೆ ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರ ಸುರಕ್ಷತಾ ಕಳವಳವನ್ನು ಕೂಡಾ ಅವರು ಎತ್ತಿ ತೋರಿಸಿದ್ದಾರೆ.

“ಮುಂದಿನ ಕೆಲವು ಬ್ಯಾಚ್‌ಗಳ ಹೆಚ್ಚಿನ ವಜಾಗಳು ಕೂಡಾ ಮುಂದೆ ನಡೆಯಲಿದೆ” ಎಂದು ಮಾಜಿ ಉದ್ಯೋಗಿ ಹೇಳಿದ್ದಾರೆ. ಅದಾಗ್ಯೂ, ಇನ್ಫೋಸಿಸ್ ನೀಡಿರುವ ಅಧಿಕೃತ ಹೇಳಿಕೆಯಲ್ಲಿ, “ವಜಾಗೊಳಿಸಲ್ಪಟ್ಟ ಉದ್ಯೋಗಿಗಳ ಸಂಖ್ಯೆ 300 ಕ್ಕಿಂತ ಸ್ವಲ್ಪ ಹೆಚ್ಚಿದೆ ಮತ್ತು ನಾವು ಯಾರನ್ನೂ ಬಲವಂತವಾಗಿ ವಜಾಗೊಳಿಸಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಇನ್ಫೋಸಿಸ್ ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದೆ. ಅಲ್ಲಿ ಎಲ್ಲಾ ಹೊಸಬರು ತಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ಮೂಲಭೂತ ತರಬೇತಿಯನ್ನು ಪಡೆದ ನಂತರ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಎಲ್ಲಾ ಹೊಸಬರು ಮೌಲ್ಯಮಾಪನವನ್ನು ಪೂರ್ಣಗೊಳಿಸಲು ಮೂರು ಪ್ರಯತ್ನಗಳನ್ನು ಪಡೆಯುತ್ತಾರೆ, ವಿಫಲವಾದರೆ ಅವರು ಸಂಸ್ಥೆಯೊಂದಿಗೆ ಮುಂದುವರಿಯಲು ಸಾಧ್ಯವಾಗುವುದಿಲ್ಲ, ಇದು ಅವರ ನಡುವೆ ನಡೆಸಲಾದ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ” ಎಂದು ಇನ್ಫೋಸಿಸ್ ಹೇಳಿದೆ.

“ಇದು ನಿಮಗೆ ತಿಳಿಸಲಾದ ತರಬೇತಿ ಮೌಲ್ಯಮಾಪನ ಫಲಿತಾಂಶದ ಮುಂದುವರಿಕೆಯಾಗಿದೆ. ಮುಂದಿನ ಹಂತಗಳನ್ನು ಚರ್ಚಿಸಲು ಫೆಬ್ರವರಿ 7, 2025 ರಂದು ಎಚ್‌ಆರ್‌ಡಿಯೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ನೀವು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಆದ್ದರಿಂದ ದಯವಿಟ್ಟು ಇದರ ಬಗ್ಗೆ ಚರ್ಚಿಸಬೇಡಿ ಅಥವಾ ಈ ಕ್ಯಾಲೆಂಡರ್ ಆಹ್ವಾನವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.” ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್‌ನಲ್ಲಿ ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಕ್ರಮವನ್ನು ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (NITES) ವಿರೋಧಿಸಿದ್ದು, ಅವದ ಕ್ರಮಗಳು 1947 ರ ಕೈಗಾರಿಕಾ ವಿವಾದ ಕಾಯ್ದೆ ಸೇರಿದಂತೆ ಭಾರತೀಯ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಒಕ್ಕೂಟವು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಅಧಿಕೃತ ದೂರು ಸಲ್ಲಿಸುತ್ತಿದ್ದು, ತಕ್ಷಣದ ಹಸ್ತಕ್ಷೇಪ ಮತ್ತು ಇನ್ಫೋಸಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಮೈಸೂರು

ಇದನ್ನೂಓದಿ:  ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿಯ ಕೈ ಬಲಪಡಿಸಿದ ಮಹಿಳಾ ಮತ್ತು ಮಧ್ಯಮ ವರ್ಗದ ಮತದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...