Homeಮುಖಪುಟಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

ಬಿಹಾರ | ಮಗಳು ಗರ್ಭಿಣಿಯಾಗಲು 2 ವರ್ಷದ ಮಗುವಿನ ಕತ್ತು ಹಿಸುಕಿ, ಕಾಲು ಕತ್ತರಿಸಿ ಬಲಿ

- Advertisement -
- Advertisement -

ಮೂಢನಂಬಿಕೆಗಳಿಂದ ಪ್ರೇರಿತಳಾಗಿ ತನ್ನ ಮಗಳು ಗರ್ಭಿಣಿಯಾಗುವ ಉದ್ದೇಶಕ್ಕಾಗಿ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಬಲಿ ನೀಡಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರ

ಜನವರಿ 22 ರಿಂದ ಕಾಣೆಯಾಗಿದ್ದ ಮಗು ಸುಮಾರು ಒಂದು ವಾರದ ನಂತರ ಕುದ್ರಾ ರೈಲು ನಿಲ್ದಾಣದ ಬಳಿಯ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ವ್ಯಾಪಕ ಹುಡುಕಾಟದ ನಂತರ ಮಗುವಿನ ಕೊಳೆತ ಶವ ಪತ್ತೆಯಾಗಿದೆ ಎಂದು ಕೈಮೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿ ಮೋಹನ್ ಶುಕ್ಲಾ ತಿಳಿಸಿದ್ದಾರೆ. ಮಗುವನ್ನು ಬಲಿ ಪಡೆದ ಮಹಿಳೆಯು ಮಂತ್ರವಾದಿಯ ಮಾತು ಕೇಳಿ ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಮಂತ್ರವಾದಿ ಪ್ರಸ್ತುತ ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳೆಯು ಮಗುವನ್ನು ಕತ್ತು ಹಿಸುಕಿ ಗ್ರೇಡರ್ ಯಂತ್ರವನ್ನು ಬಳಸಿ ಕಾಲುಗಳನ್ನು ಕತ್ತರಿಸಿದ್ದಾಗಿ ಆರೋಪವಿದೆ. ಪೊಲೀಸರು ಗ್ರೇಡರ್‌ ಅನ್ನು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. “ಮಂತ್ರವಾದಿಯ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅಧಿಕಾರಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯವರಾದ ಸಂತ್ರಸ್ತರು, ಕುಟುಂಬದ ಮದುವೆಯಲ್ಲಿ ಭಾಗವಹಿಸಲು ತನ್ನ ಮಗು ತಾಯಿಯೊಂದಿಗೆ ಲಾಲಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ತನ್ನ ಅಜ್ಜಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಮಗು ಕಣ್ಮರೆಯಾಗಿತ್ತು. ಇದರಿಂದಾಗಿ ಮಗುವಿನ ಚಿಕ್ಕಪ್ಪ ಅಜಯ್ ಪಾಲ್ ಕುದ್ರಾ ಪೊಲೀಸರಿಗೆ ದೂರು ದಾಖಲಿಸಿದ್ದರು.

ಎಲೆಕ್ಟ್ರಾನಿಕ್ ಕಣ್ಗಾವಲು ಮತ್ತು ಗುಪ್ತಚರ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಐದು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಮುನ್ನಿ ಕುನ್ವರ್, ಅವರ ಮಗ ಅವಿನಾಶ್ ಕುಮಾರ್, ಅವರ ಸಹಚರ ಅಂಕಿತ್ ಕುಮಾರ್, ಲಕ್ಷ್ಮಿನಾ ದೇವಿ ಮತ್ತು ಅವರ ಮಗ ಪರಸ್ನಾಥ್ ಪಾಲ್ ಎಂದು ಗುರುತಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ, ಮುನ್ನಿ ತಪ್ಪೊಪ್ಪಿಕೊಂಡಿದ್ದರು. ತನ್ನ ವಿವಾಹಿತ ಮಗಳು ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ಗರ್ಭಿಣಿಯಾಗಿರಲಿಲ್ಲ. ಹಾಗಾಗಿ ಅವರ ಗಂಡನಿಗೆ ಎರಡನೇ ಮದುವೆಗೆ ಸಂಬಂಧಿಸಿದಂತೆ ಅವರ ಅತ್ತೆ ಮಾವರಿಂದ ಒತ್ತಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದರು. ಈ ವೇಳೆ ಮಂತ್ರವಾದಿಯನ್ನು ಸಂಪರ್ಕಿಸಿದ್ದು, ಅವರು ಚಿಕ್ಕ ಹುಡುಗನನ್ನು ಬಲಿ ನೀಡುವುದರಿಂದ ಮಗಳು ಗಂಡು ಮಗುವನ್ನು ಹೆರುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಮುನ್ನಿ ಹೇಳಿದ್ದಾರೆ.

ಅಪಹರಣವನ್ನು ನಡೆಸಲು ಮುನ್ನಿಯು ಲಕ್ಷ್ಮಿನಾ ಮತ್ತು ಅಂಕಿತ್ ಜೊತೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಜನವರಿ 22 ರಂದು, ಅಂಕಿತ್ ಮತ್ತು ಪರಸ್ನಾಥ್ ಮಗುವನ್ನು ಅಜ್ಜಿಯ ಮನೆಯ ಹೊರಗಿನಿಂದ ಅಪಹರಿಸಿ ಮುನ್ನಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ಯೆಯ ನಂತರ ಮಗುವನ್ನು ಲಕ್ಷ್ಮಿನಾ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದಿದ್ದನು.

ಕೊಲೆ ನಡೆದ ಸ್ಥಳದ ಮೇಲೆ ಸಿಮೆಂಟ್ ಹಾಕುವ ಮೂಲಕ ಆರೋಪಿಗಳು ಸಾಕ್ಷ್ಯವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದ ಮಂತ್ರವಾದಿಯ ಅಧಿಕಾರಿಗಳು ಹುಡುಕಾಟವನ್ನು ಮುಂದುವರೆಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ದೆಹಲಿ ಚುನಾವಣೆ: ಎಎಪಿ-ಕಾಂಗ್ರೆಸ್ ವಿಭಜನೆಯಿಂದ ಬಿಜೆಪಿಗೆ ಲಾಭವಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...