HomeಮುಖಪುಟDelhi Election Results - ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

Delhi Election Results – ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುವ ಮೂಲಕ ದೆಹಲಿ ಗದ್ದುಗೆಯನ್ನು 27 ವರ್ಷಗಳ ನಂತರ ಏರುತ್ತಿದೆ. ವಿಧಾನಸಭೆಯ ಒಟ್ಟು 70 ಕ್ಷೇತ್ರಗಳಲ್ಲಿ ಪಕ್ಷವು 48 ಸ್ಥಾನಗಳನ್ನು ಗಳಿಸಿದ್ದು, ಆಡಳಿತರೂಢ ಎಎಪಿಯ ಸಂಖ್ಯೆ 22 ಕ್ಕೆ ಇಳಿದಿದೆ. ಪಕ್ಷದ ಪ್ರಮುಖ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುಂಡಿದ್ದು ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಅದಾಗ್ಯೂ, ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಕಲ್ಕಾಜಿ ಕ್ಷೇತ್ರವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. Delhi Election Results

2020ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು, ಬಿಜೆಪಿಗೆ 8 ಸ್ಥಾನಗಳಲ್ಲಿ ಸಮಾಧಾನ ಪಡುವಂತೆ ಮಾಡಿತ್ತು. ಅದಕ್ಕೂ ಮುಂಚಿನ 2015ರ ಚುನಾವಣೆಯಲ್ಲಿ ಎಎಪಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 67 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಬಿಜೆಪಿಗೆ 3 ಸ್ಥಾನಗಳಷ್ಟೆ ದಕ್ಕಿತ್ತು. ಅದಾಗ್ಯೂ, ಕಾಂಗ್ರೆಸ್ ಸಸತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಶೂನ್ಯ ಸಾಧನೆ ಮಾಡಿದೆ. Delhi Election Results

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ.

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ 675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ.

ಇದನ್ನೂಓದಿ:  Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...