Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...