Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...