Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...