Homeಮುಖಪುಟದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

ದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

- Advertisement -
- Advertisement -

ದೆಹಲಿಯಲ್ಲಿ ಒಂದು ದಶಕದಲ್ಲಿಯೇ ಅತ್ಯಂತ ಕಡಿಮೆ ಎಂದರೆ 5 ಮಹಿಳಾ ಶಾಸಕರು ಸ್ಥಾನ ಪಡೆದಿದ್ದಾರೆ. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು ಸ್ಪರ್ಧಿಸಿದ್ದರು. ಇದರಲ್ಲಿ ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸ್ಪರ್ಧಿಸಿದ್ದರು.

ನವದೆಹಲಿ: ಈ ವರ್ಷ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 100 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಕೇವಲ ಐವರು ಅಂದರೆ ಬಿಜೆಪಿಯಿಂದ 4 ಮತ್ತು ಎಎಪಿಯಿಂದ ಒಬ್ಬರು ವಿಜೇತರಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಕಳೆದ 10 ವರ್ಷಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ.

ಈ ಬಾರಿ ಗೆದ್ದ ಎಎಪಿಯ ಏಕೈಕ ಮಹಿಳಾ ಅಭ್ಯರ್ಥಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ, ಹೊಸದಾಗಿ ಆಯ್ಕೆಯಾದ ಐದು ಮಹಿಳಾ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಮಹಿಳಾ ಶಾಸಕಿಯರು ಈಗ ದೆಹಲಿಯ 70 ಸದಸ್ಯರ ವಿಧಾನಸಭೆಯಲ್ಲಿ 7%ರಷ್ಟಿದ್ದಾರೆ.

ಈ ವರ್ಷ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು, ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸೇರಿದಂತೆ ಸ್ಪರ್ಧಿಸಿದ್ದರು. ಮೂರು ಪ್ರಮುಖ ರಾಜಕೀಯ ಪಕ್ಷಗಳು ಈ ಬಾರಿ 2020ರ ವಿಧಾನಸಭಾ ಚುನಾವಣೆಗಿಂತ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

1993ರಲ್ಲಿ ದೆಹಲಿ ವಿಧಾನಸಭೆಯನ್ನು ಪುನರ್ ರಚಿಸಿದ ನಂತರ ಈ ವರ್ಷ ಇದೇ ಮೊದಲ ಬಾರಿಗೆ ಹೆಚ್ಚಿನ ಮಹಿಳಾ ಮತದಾರರು ಅಂದರೆ 60.9% ರಷ್ಟು ಮತದಾನವನ್ನು ಚಲಾಯಿಸಿದ್ದು ದಾಖಲಾಗಿದೆ. ಫೆಬ್ರವರಿ 5ರಂದು ನಡೆದ ಒಂದೇ ಹಂತದ ಚುನಾವಣೆಯಲ್ಲಿ 72.36 ಲಕ್ಷ ನೋಂದಾಯಿತ ಮಹಿಳಾ ಮತದಾರರಲ್ಲಿ ಸುಮಾರು 44.08 ಲಕ್ಷ ಜನರಿಗೆ ಸಹಿ ಹಾಕಲಾಗಿದೆ.

2025ರ ದೆಹಲಿ ಚುನಾವಣೆಯಲ್ಲಿ ಗೆದ್ದ ಮಹಿಳೆಯರು

ಅತಿಶಿ: ಅವರು ತಮ್ಮ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಮತ್ತು ಬಿಜೆಪಿಯ ರಮೇಶ್ ಬಿಧುರಿ ಅವರನ್ನು ಸೋಲಿಸಿ 3,521 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆದಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸೌರಭ್ ಭಾರದ್ವಾಜ್ ಮತ್ತು ಸತ್ಯೇಂದರ್ ಜೈನ್ ಸೇರಿದಂತೆ ಪಕ್ಷದ ಹೆಚ್ಚಿನ ಪ್ರಮುಖ ನಾಯಕರು ಸೋತಿದ್ದರಿಂದ ಚುನಾವಣೆಯಲ್ಲಿ ಗೆದ್ದ ಕೆಲವು ಎಎಪಿ ಸಚಿವರು ಮತ್ತು ಹಿರಿಯ ನಾಯಕರಲ್ಲಿ ಅತಿಶಿ ಕೂಡ ಒಬ್ಬರಾಗಿದ್ದಾರೆ.

ನೀಲಂ ಪಹೇಲ್ವಾನ್: ನಜಾಫ್‌ಗಢದ ಬಿಜೆಪಿ ಅಭ್ಯರ್ಥಿ ನೀಲಂ ಪಹೇಲ್ವಾನ್ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಎಎಪಿಯ ತರುಣ್ ಕುಮಾರ್ ಅವರನ್ನು ಸುಮಾರು 30,000 ಮತಗಳಿಂದ ಸೋಲಿಸಿದ್ದಾರೆ.

ರೇಖಾ ಗುಪ್ತಾ: ಶಾಲಿಮಾರ್ ಬಾಗ್ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಎಎಪಿಯ ಬಂದಾನ ಕುಮಾರಿ ಅವರನ್ನು 29,595 ಮತಗಳಿಂದ ಸೋಲಿಸಿದ್ದಾರೆ.

ಪೂನಂ ಶರ್ಮಾ: ಬಿಜೆಪಿ ಅಭ್ಯರ್ಥಿಯಾದ ಇವರು ವಜೀರ್‌ಪುರ ಕ್ಷೇತ್ರದಲ್ಲಿ ಎಎಪಿಯ ರಾಜೇಶ್ ಗುಪ್ತಾ ಅವರನ್ನು 11,425 ಮತಗಳಿಂದ ಸೋಲಿಸಿದ್ದಾರೆ.

ಶಿಖಾ ರಾಯ್: ಗ್ರೇಟರ್ ಕೈಲಾಶ್‌ನಿಂದ ಹಾಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು 3,188 ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ನಾಯಕಿ ವಿಜಯಶಾಲಿಯಾಗಿದ್ದಾರೆ.

ಈ ಹಿಂದಿನ ದೆಹಲಿಯ ಮಹಿಳಾ ಶಾಸಕರತ್ತ ಒಂದು ನೋಟ
1993ರಿಂದ ಇಲ್ಲಿಯವರೆಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 44 ಮಹಿಳಾ ಅಭ್ಯರ್ಥಿಗಳು ಮಾತ್ರ ಗೆದ್ದಿದ್ದಾರೆ. 1998ರಲ್ಲಿ 9 ಮಹಿಳೆಯರು ಗೆದ್ದಿದ್ದರು. 1993ರಲ್ಲಿ ಕೇವಲ 3 ಮಹಿಳೆಯರು ಆಯ್ಕೆಯಾಗಿದ್ದರು. ಇದು ವಿಧಾನಸಭೆಯ ಶೇಕಡಾ 4.3ರಷ್ಟಿತ್ತು.

2003ರಲ್ಲಿ ಏಳು ಮಹಿಳೆಯರು ಆಯ್ಕೆಯಾಗಿದ್ದರು ಮತ್ತು 2008 ಮತ್ತು 2013ರ ಎರಡೂ ಚುನಾವಣೆಗಳಲ್ಲಿ ಈ ಸಂಖ್ಯೆ ಮೂರಕ್ಕೆ ಇಳಿಯಿತು. 2015ರಲ್ಲಿ, ಒಟ್ಟು 63 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮತ್ತು ಅವರಲ್ಲಿ 6 ಮಂದಿ ಗೆದ್ದರು.

2020ರ ಚುನಾವಣೆಯಲ್ಲಿ ಸ್ಪರ್ಧಿಸಿದ 672 ನಾಮನಿರ್ದೇಶಿತರಲ್ಲಿ 76 ಮಹಿಳೆಯರು ಸೇರಿದ್ದರು. ಅವರಲ್ಲಿ 8 ಮಹಿಳೆಯರು ಗೆದ್ದಿದ್ದರು.

ದೆಹಲಿ ಇಲ್ಲಿಯವರೆಗೆ ಕೇವಲ ಮೂವರು ಮಹಿಳಾ ಮುಖ್ಯಮಂತ್ರಿಗಳನ್ನು ಮಾತ್ರ ಕಂಡಿದೆ. 1998ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್, 1998ರಿಂದ 2013ರವರೆಗೆ 15 ವರ್ಷಗಳ ಕಾಲ ರಾಜಧಾನಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಗರದ ಕಿರಿಯ ಮುಖ್ಯಮಂತ್ರಿ ಎಎಪಿಯ ಅತಿಶಿಯಾಗಿದ್ದಾರೆ.

ಎಎಪಿ ಸೋಲಿಗೆ ದಲಿತ ಮತದಾರರು ಕಾರಣವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...