Homeಮುಖಪುಟಕೇಜ್ರಿವಾಲ್ ಸೋಲು ಅಣ್ಣಾ ಹಜಾರೆಗೆ ಖುಷಿ ಕೊಟ್ಟಿದೆ - ಸಂಜಯ್ ರಾವತ್

ಕೇಜ್ರಿವಾಲ್ ಸೋಲು ಅಣ್ಣಾ ಹಜಾರೆಗೆ ಖುಷಿ ಕೊಟ್ಟಿದೆ – ಸಂಜಯ್ ರಾವತ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸೋಲಿನಿಂದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಸಂತೋಷಗೊಂಡಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಳೆದ ಕೆಲವು ವರ್ಷಗಳಿಂದ ಮಾಡಲಾಗುತ್ತಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಅಣ್ಣಾ ಹಜಾರೆ ಅವರ ಮೌನವನ್ನು ಸಹ ರಾವತ್ ಪ್ರಶ್ನಿಸಿದ್ದಾರೆ. ಕೇಜ್ರಿವಾಲ್ ಸೋಲು

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷದ ಆಳ್ವಿಕೆಯನ್ನು ಕೊನೆಗೊಳಿಸಿತ್ತು. ಅಲ್ಲದೆ, ಸೋತ ಪ್ರಮುಖರಲ್ಲಿ ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಕೂಡ ಒಬ್ಬರು. ಕೇಜ್ರಿವಾಲ್ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಣ್ಣಾ ಹಜಾರೆ ಬಗ್ಗೆ ಪ್ರತಿಕ್ರಿಯಿಸಿದ ರಾವತ್, “ಮೋದಿ ಆಳ್ವಿಕೆಯಲ್ಲಿ ಭ್ರಷ್ಟಾಚಾರ ನಡೆದಾಗ ಹಜಾರೆ ಎಲ್ಲಿದ್ದರು? ಕೇಜ್ರಿವಾಲ್ ಸೋಲಿನಿಂದ ಹಜಾರೆ ಸಂತೋಷಗೊಂಡಿದ್ದಾರೆ. ಒಬ್ಬನೇ ಕೈಗಾರಿಕೋದ್ಯಮಿಯ ಕೈಯಲ್ಲಿ ಸಂಪತ್ತು ಕೇಂದ್ರೀಕೃತವಾಗಿ ದೇಶವನ್ನು ಲೂಟಿ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ಹೇಗೆ ಮುಂದುವರಿಯಬಹುದು? ಇಂತಹ ಸಮಯದಲ್ಲಿ ಹಜಾರೆ ಅವರ ಮೌನದ ಹಿಂದಿನ ರಹಸ್ಯವೇನು” ಎಂದು ರಾಜ್ಯಸಭಾ ಸಂಸದರು ಪ್ರಶ್ನಿಸಿದ್ದಾರೆ.

“ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ಮತದಾರರ ಪಟ್ಟಿ ಗೊಂದಲ ಒಂದೇ ರೀತಿಯ ಮಾದರಿಯಲ್ಲಿ ಇತ್ತು. ಆದಾಗ್ಯೂ, ಹಜಾರೆ ಅವರು ಅಂತಹ ವಿಷಯಗಳ ಬಗ್ಗೆ ಮೌನವಾಗಿದ್ದಾರೆ. ಹರಿಯಾಣದಲ್ಲೂ ಇದೇ ರೀತಿಯ ದೂರುಗಳು ಕೇಳಿ ಬಂದಿದ್ದವು. ಬಿಹಾರ ಚುನಾವಣೆಯಲ್ಲೂ ಇವು ಕೇಳಿ ಬರುತ್ತವೆ” ಎಂದು ರಾವತ್ ವರದಿಗಾರರಿಗೆ ತಿಳಿಸಿದ್ದಾರೆ.

2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಚುನಾವಣೆಗಳಲ್ಲಿ ಸಾಂವಿಧಾನಿಕ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅಕ್ರಮ ಮತ್ತು ಹಣದ ಬಲದ ಮೂಲಕ ಗೆಲುವು ಸಾಧಿಸಲಾಗುತ್ತಿದೆ” ಎಂದು ರಾವತ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ಅವರು ಎಎಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದರೆ ದೆಹಲಿ ಚುನಾವಣೆಯ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಚುನಾವಣಾ ಫಲಿತಾಂಶಗಳು ಘೋಷಣೆಯಾದ ನಂತರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹಜಾರೆ, ಕೇಜ್ರಿವಾಲ್ ನಾನು ಹೇಳಿದ್ದ ವಿಷಯಗಳಿಗೆ ಗಮನ ಕೊಡಲಿಲ್ಲ. ಅವರು ಮದ್ಯದ ಮೇಲೆ ಮಾತ್ರ ಗಮನಹರಿಸಿದರು ಎಂದು ಹೇಳಿಕೊಂಡಿದ್ದಾರೆ.

“ಅಭ್ಯರ್ಥಿಯ ನಡವಳಿಕೆ ಮತ್ತು ಆಲೋಚನೆಗಳು ಶುದ್ಧವಾಗಿರಬೇಕು. ಅವನ ಜೀವನವು ದೋಷರಹಿತವಾಗಿರಬೇಕು ಮತ್ತು ಅದು ತ್ಯಾಗವನ್ನು ಒಳಗೊಂಡಿರಬೇಕು ಎಂದು ನಾನು ಯಾವಾಗಲೂ ಹೇಳುತ್ತಲೆ ಬಂದಿದ್ದೇನೆ. ಮತದಾರರಲ್ಲಿ ವಿಶ್ವಾಸವನ್ನು ಬೆಳೆಸುವ ಗುಣಗಳು ಇವುಗಳಾಗಿದ್ದು, ನಾನು ಇದನ್ನು ಕೇಜ್ರಿವಾಲ್‌ಗೆ ಹೇಳಿದ್ದೆ. ಆದರೆ ಅವರು ಅದರತ್ತ ಗಮನ ಹರಿಸಲಿಲ್ಲ. ಅವರು ಹಣ ಬಲದ ಹಿಂದೆ ಹೋಗಿದ್ದರು” ಎಂದು ಹಜಾರೆ ಹೇಳಿದ್ದರು.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...