Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...