Homeಮುಖಪುಟಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಎಎಪಿ ಪಂಜಾಬ್ ಘಟಕ ಆಂತರಿಕ ಕಲಹ ಮತ್ತು ಸಂಭಾವ್ಯ ವಿಭಜನೆ ಎದುರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ವಿಧಾನಸಭೆಯ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಭಾನುವಾರ (ಫೆ.9) ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ಎಎಪಿ ಶಾಸಕರು ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದು, ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೊಸ ಬಾಂಬ್ ಸಿಡಿಸಿದ್ದಾರೆ.

“ಎಎಪಿಯ ದೆಹಲಿ ನಾಯಕತ್ವ ಭಗವಂತ್ ಮಾನ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಹುದು. ವಿಶೇಷವಾಗಿ ಪಂಜಾಬ್‌ನ ಎಲ್ಲಾ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಜೊತೆ ಇದ್ದಾರೆ. ಹಾಗಾಗಿ, ಎಎಪಿಯಲ್ಲಿ ನಾಯಕತ್ವದ ಕಲಹ ಸನ್ನಿಹಿತವಾಗಿದೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭೆಗೆ ಸೇರಲು ಕೇಜ್ರಿವಾಲ್ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರಬಹುದು” ಎಂದು ಪ್ರತಾಪ್ ಸಿಂಗ್ ಬಜ್ವಾ ಹೇಳಿದ್ದಾರೆ.

“2027ರ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಎಎಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಎಎಪಿ ವಿಭಜನೆಯಾಗಬೇಕೆಂದು ಬಯಸುತ್ತಿವೆ. ಕೇಜ್ರಿವಾಲ್ ಲುಧಿಯಾನ (ಪಶ್ಚಿಮ) ದಿಂದ ಸ್ಪರ್ಧಿಸಲು ನಿರ್ಧರಿಸಿದರೆ, ಅದು ಪಕ್ಷಕ್ಕೆ ಹಾನಿಕಾರಕವಾಗಬಹುದು ಮತ್ತು ಅವರ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳ ಅಂತ್ಯವನ್ನು ಸೂಚಿಸಬಹುದು” ಎಂದು ಪ್ರಮುಖ ರಾಜಕೀಯ ವಿಶ್ಲೇಷಕ ಕುಲದೀಪ್ ಸಿಂಗ್ ವಿವರಿಸಿದ್ದಾರೆ.

ಕಾಂಗ್ರೆಸ್ ನಾಯಕನ ಹೇಳಿಕೆಯನ್ನು ತಳ್ಳಿ ಹಾಕಿರುವ ಪಂಜಾಬ್ ಎಎಪಿ ವಕ್ತಾರ ನೀಲ್ ಗರ್ಗ್, “ಕೇಜ್ರಿವಾಲ್ ನಮ್ಮ ರಾಷ್ಟ್ರೀಯ ಸಂಚಾಲಕರು ಮತ್ತು ಮಾನ್ ಪಂಜಾಬ್ ಸಿಎಂ. ಕಾಂಗ್ರೆಸ್‌ನ ಗ್ರಾಫ್ ವೇಗವಾಗಿ ಕುಸಿಯುತ್ತಿದೆ. ದೆಹಲಿಯಲ್ಲಿ, ಅದು ಸತತ ಮೂರನೇ ಬಾರಿಗೆ ಶೂನ್ಯ ಸ್ಥಾನ ಗಳಿಸಿದೆ. 2022ರ ಪಂಜಾಬ್ ಚುನಾವಣೆಯಲ್ಲಿ, ಅದು ಕೇವಲ 18 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. 2027ರ ಚುನಾವಣೆಯಲ್ಲಿ ಈ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ. ಕಾಂಗ್ರೆಸ್‌ನ ಕಾರ್ಯಕ್ಷಮತೆ ಹೇಗಿದೆ ಎಂಬುವುದಕ್ಕೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಗಳನ್ನು ನೋಡಿ” ಎಂದಿದ್ದಾರೆ.

“ದೆಹಲಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆಲ್ಲದಿರುವುದರ ಬಗ್ಗೆ ಬಾಜ್ವಾ ಕಳವಳ ವ್ಯಕ್ತಪಡಿಸಬೇಕು, ಹೊರತು ಪಂಜಾಬ್‌ನ ಬಗ್ಗೆ ಅಲ್ಲ” ಎಂದು ಗರ್ಗ್ ಹೇಳಿದ್ದಾರೆ.

Biren Singh resigns | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...