Homeಮುಖಪುಟ"ಕುದುರೆ ಓಡಿಹೋದ ನಂತರ..." - ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

“ಕುದುರೆ ಓಡಿಹೋದ ನಂತರ…” – ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಯು “ಕುದುರೆ ಓಡಿಹೋದ ನಂತರ ಲಾಯದ ಬಾಗಿಲು ಮುಚ್ಚಿದಂತೆ” ಎಂದು ಕಾಂಗ್ರೆಸ್ ಭಾನುವಾರ ಹೇಳಿದ್ದು, ಜನಾಂಗೀಯ ಹಿಂಸಾಚಾರ ನಡೆದು 2 ವರ್ಷಗಳ ನಂತರ ತಡವಾಗಿ ರಾಜೀನಾಮೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಜೆಪಿಯು 21 ತಿಂಗಳ ಕಾಲ ಮಣಿಪುರದಲ್ಲಿ ಬೆಂಕಿ ಹಚ್ಚಿ, ಜನರ ಕೈಬಿಟ್ಟಿತು ಎಂಬ ವಿಚಾರ ಬಹಳ ನೋವಿನ ಸಂಗತಿ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ತಿರಸ್ಕಾರ ಮತ್ತು ನಿರಾಸಕ್ತಿಯ ನಿಜವಾದ ಅಪರಾಧಿ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ಮಣಿಪುರ ಭಾರತದ ಒಂದು ಭಾಗ ಎಂಬುದನ್ನು ಅವರು ಮರೆತಿದ್ದಾರೆ. ಅವರು ತಮ್ಮ ನೆನಪನ್ನು ಮರುಸ್ಥಾಪಿಸಿಕೊಂಡು ಭಾರತದ ನಕ್ಷೆಯಲ್ಲಿ ಮಣಿಪುರ ರಾಜ್ಯವನ್ನು ಗುರುತಿಸುವ ಸಮಯ ಬಂದಿದೆ!” ಎಂದು ಹೇಳಿದ್ದಾರೆ. ಕುದುರೆ ಓಡಿಹೋದ ನಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ವಿಚಾರದಲ್ಲಿ ಮುಖ್ಯಮಂತ್ರಿಯು ಪಕ್ಷಪಾತದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ ಮತ್ತು ಅವರು ಬಹುಮತೀಯತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮರ್ ಗುಂಪುಗಳು ನಿರಂತರ ಆರೋಪಿಸುತ್ತಲೆ ಬರುತ್ತಿದ್ದು, ಈ ನಡುವೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಜೋಮಿ-ಹ್ಮರ್ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿರೇನ್ ಸಿಂಗ್ ಅವರನ್ನು ದೂಷಿಸಿದ್ದು, “ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡ, ಸುಪ್ರೀಂ ಕೋರ್ಟ್ ತನಿಖೆ ಮತ್ತು ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯದ ಪರಿಣಾಮವಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಯಿತು” ಎಂದು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಆದ್ಯತೆಯಾಗಿರಬೇಕು ಎಂದು ಒತ್ತಿಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ಸಹಜಸ್ಥಿತಿ ಮರಳಿ ತರುವ ಯೋಜನೆಯನ್ನು ವಿವರಿಸುವಂತೆ ಪ್ರಧಾನಿಯನ್ನು ಕೇಳಿದ್ದಾರೆ.

ಸೋಮವಾರ ಮಣಿಪುರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಬಿರೇನ್ ಸಿಂಗ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

“ಮುಖ್ಯಮಂತ್ರಿಯ ರಾಜೀನಾಮೆ ತಡವಾಗಿ ಆಗಿದೆ” ಎಂದು ಹೇಳಿರುವ ಜೈರಾಮ್ ರಮೇಶ್, “ಮಣಿಪುರದ ಜನರು ಈಗ ಫ್ರಾನ್ಸ್ ಮತ್ತು ಅಮೆರಿಕಾಗೆ ತೆರಳಿರುವ ಹಾರುವ ಪ್ರಧಾನಿಯ ಭೇಟಿಗಾಗಿ ಕಾಯುತ್ತಿದ್ದಾರೆ. ಕಳೆದ ಇಪ್ಪತ್ತು ತಿಂಗಳುಗಳಿಂದ ಮಣಿಪುರಕ್ಕೆ ಹೋಗಲು ಅವರಿಗೆ ಸಮಯ ಅಥವಾ ಒಲವು ಸಿಗುತ್ತಿಲ್ಲ.” ಎಂದು ಹೇಳಿದ್ದಾರೆ.

21 ತಿಂಗಳ ಹಿಂದೆ ಹಿಂಸಾಚಾರ ಪ್ರಾರಂಭವಾದಾಗಿನಿಂದ, ಕುಕಿ-ಜೋಮಿ-ಹ್ಮರ್ ಗುಂಪುಗಳು ಸಂಘರ್ಷಕ್ಕೆ ಬಿರೇನ್ ಸಿಂಗ್ ಅವರ ಪಕ್ಷಪಾತದ ವರ್ತನೆ ಮತ್ತು ಬಹುಸಂಖ್ಯಾತ ನೀತಿಗಳೆ ಕಾರಣ ಎಂದು ಹೇಳಿದ್ದು, ಸಮುದಾಯವು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ನಡೆಸಲು ಬಿರೇನ್ ಸಿಂಗ್ ಅವರನ್ನು ಸಂಪರ್ಕಿಸಲಾಗಿತ್ತು ಎಂದು ಹೇಳಲಾದ ಆಡಿಯೋ ತುಣುಕುಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಫೆಬ್ರವರಿ 3 ರಂದು ಸುಪ್ರೀಂ ಕೋರ್ಟ್ ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಆದೇಶಿಸಿದೆ. ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್‌ನ ಅರ್ಜಿಯ ಮೇರೆಗೆ ಈ ಆದೇಶವನ್ನು ಕೋರ್ಟ್‌ ನೀಡಿತ್ತು.

“ಸಂಘರ್ಷ ಹೇಗೆ ಮತ್ತು ಏಕೆ ಪ್ರಾರಂಭವಾಯಿತು” ಎಂಬುದಕ್ಕೆ ಮುಖ್ಯಮಂತ್ರಿಯೇ ಕಾರಣ ಎಂದು ಹೇಳುವ ಆಡಿಯೋ ರೆಕಾರ್ಡಿಂಗ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸಂಘಟನೆ ಕೋರಿತ್ತು.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್, ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯ ಟೇಪ್‌ಗಳನ್ನು ಪರಿಶೀಲಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧ್ವನಿಮುದ್ರಣಗಳಲ್ಲಿ ಕೇಳಿಬಂದ ಧ್ವನಿ ಮುಖ್ಯಮಂತ್ರಿಯವರದು ಎಂದು ಪ್ರಯೋಗಾಲಯವು 93% ಖಚಿತತೆಯೊಂದಿಗೆ ದೃಢಪಡಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...