Homeಮುಖಪುಟ"ಕುದುರೆ ಓಡಿಹೋದ ನಂತರ..." - ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

“ಕುದುರೆ ಓಡಿಹೋದ ನಂತರ…” – ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಯು “ಕುದುರೆ ಓಡಿಹೋದ ನಂತರ ಲಾಯದ ಬಾಗಿಲು ಮುಚ್ಚಿದಂತೆ” ಎಂದು ಕಾಂಗ್ರೆಸ್ ಭಾನುವಾರ ಹೇಳಿದ್ದು, ಜನಾಂಗೀಯ ಹಿಂಸಾಚಾರ ನಡೆದು 2 ವರ್ಷಗಳ ನಂತರ ತಡವಾಗಿ ರಾಜೀನಾಮೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಜೆಪಿಯು 21 ತಿಂಗಳ ಕಾಲ ಮಣಿಪುರದಲ್ಲಿ ಬೆಂಕಿ ಹಚ್ಚಿ, ಜನರ ಕೈಬಿಟ್ಟಿತು ಎಂಬ ವಿಚಾರ ಬಹಳ ನೋವಿನ ಸಂಗತಿ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ತಿರಸ್ಕಾರ ಮತ್ತು ನಿರಾಸಕ್ತಿಯ ನಿಜವಾದ ಅಪರಾಧಿ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ಮಣಿಪುರ ಭಾರತದ ಒಂದು ಭಾಗ ಎಂಬುದನ್ನು ಅವರು ಮರೆತಿದ್ದಾರೆ. ಅವರು ತಮ್ಮ ನೆನಪನ್ನು ಮರುಸ್ಥಾಪಿಸಿಕೊಂಡು ಭಾರತದ ನಕ್ಷೆಯಲ್ಲಿ ಮಣಿಪುರ ರಾಜ್ಯವನ್ನು ಗುರುತಿಸುವ ಸಮಯ ಬಂದಿದೆ!” ಎಂದು ಹೇಳಿದ್ದಾರೆ. ಕುದುರೆ ಓಡಿಹೋದ ನಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ವಿಚಾರದಲ್ಲಿ ಮುಖ್ಯಮಂತ್ರಿಯು ಪಕ್ಷಪಾತದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ ಮತ್ತು ಅವರು ಬಹುಮತೀಯತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮರ್ ಗುಂಪುಗಳು ನಿರಂತರ ಆರೋಪಿಸುತ್ತಲೆ ಬರುತ್ತಿದ್ದು, ಈ ನಡುವೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಜೋಮಿ-ಹ್ಮರ್ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿರೇನ್ ಸಿಂಗ್ ಅವರನ್ನು ದೂಷಿಸಿದ್ದು, “ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡ, ಸುಪ್ರೀಂ ಕೋರ್ಟ್ ತನಿಖೆ ಮತ್ತು ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯದ ಪರಿಣಾಮವಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಯಿತು” ಎಂದು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಆದ್ಯತೆಯಾಗಿರಬೇಕು ಎಂದು ಒತ್ತಿಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ಸಹಜಸ್ಥಿತಿ ಮರಳಿ ತರುವ ಯೋಜನೆಯನ್ನು ವಿವರಿಸುವಂತೆ ಪ್ರಧಾನಿಯನ್ನು ಕೇಳಿದ್ದಾರೆ.

ಸೋಮವಾರ ಮಣಿಪುರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಬಿರೇನ್ ಸಿಂಗ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

“ಮುಖ್ಯಮಂತ್ರಿಯ ರಾಜೀನಾಮೆ ತಡವಾಗಿ ಆಗಿದೆ” ಎಂದು ಹೇಳಿರುವ ಜೈರಾಮ್ ರಮೇಶ್, “ಮಣಿಪುರದ ಜನರು ಈಗ ಫ್ರಾನ್ಸ್ ಮತ್ತು ಅಮೆರಿಕಾಗೆ ತೆರಳಿರುವ ಹಾರುವ ಪ್ರಧಾನಿಯ ಭೇಟಿಗಾಗಿ ಕಾಯುತ್ತಿದ್ದಾರೆ. ಕಳೆದ ಇಪ್ಪತ್ತು ತಿಂಗಳುಗಳಿಂದ ಮಣಿಪುರಕ್ಕೆ ಹೋಗಲು ಅವರಿಗೆ ಸಮಯ ಅಥವಾ ಒಲವು ಸಿಗುತ್ತಿಲ್ಲ.” ಎಂದು ಹೇಳಿದ್ದಾರೆ.

21 ತಿಂಗಳ ಹಿಂದೆ ಹಿಂಸಾಚಾರ ಪ್ರಾರಂಭವಾದಾಗಿನಿಂದ, ಕುಕಿ-ಜೋಮಿ-ಹ್ಮರ್ ಗುಂಪುಗಳು ಸಂಘರ್ಷಕ್ಕೆ ಬಿರೇನ್ ಸಿಂಗ್ ಅವರ ಪಕ್ಷಪಾತದ ವರ್ತನೆ ಮತ್ತು ಬಹುಸಂಖ್ಯಾತ ನೀತಿಗಳೆ ಕಾರಣ ಎಂದು ಹೇಳಿದ್ದು, ಸಮುದಾಯವು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ನಡೆಸಲು ಬಿರೇನ್ ಸಿಂಗ್ ಅವರನ್ನು ಸಂಪರ್ಕಿಸಲಾಗಿತ್ತು ಎಂದು ಹೇಳಲಾದ ಆಡಿಯೋ ತುಣುಕುಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಫೆಬ್ರವರಿ 3 ರಂದು ಸುಪ್ರೀಂ ಕೋರ್ಟ್ ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಆದೇಶಿಸಿದೆ. ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್‌ನ ಅರ್ಜಿಯ ಮೇರೆಗೆ ಈ ಆದೇಶವನ್ನು ಕೋರ್ಟ್‌ ನೀಡಿತ್ತು.

“ಸಂಘರ್ಷ ಹೇಗೆ ಮತ್ತು ಏಕೆ ಪ್ರಾರಂಭವಾಯಿತು” ಎಂಬುದಕ್ಕೆ ಮುಖ್ಯಮಂತ್ರಿಯೇ ಕಾರಣ ಎಂದು ಹೇಳುವ ಆಡಿಯೋ ರೆಕಾರ್ಡಿಂಗ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸಂಘಟನೆ ಕೋರಿತ್ತು.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್, ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯ ಟೇಪ್‌ಗಳನ್ನು ಪರಿಶೀಲಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧ್ವನಿಮುದ್ರಣಗಳಲ್ಲಿ ಕೇಳಿಬಂದ ಧ್ವನಿ ಮುಖ್ಯಮಂತ್ರಿಯವರದು ಎಂದು ಪ್ರಯೋಗಾಲಯವು 93% ಖಚಿತತೆಯೊಂದಿಗೆ ದೃಢಪಡಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...