Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...