Homeಮುಖಪುಟಬಿಜೆಪಿ ನಾಯಕನ 'ಅತಿಕ್ರಮಣ' ಆರೋಪ: ಮಸೀದಿಯ ತೆರವು

ಬಿಜೆಪಿ ನಾಯಕನ ‘ಅತಿಕ್ರಮಣ’ ಆರೋಪ: ಮಸೀದಿಯ ತೆರವು

- Advertisement -
- Advertisement -

ಲಕ್ನೋ:ಲಕ್ನೋದಿಂದ ಸುಮಾರು 325 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಖುಷಿನಗರ ಜಿಲ್ಲೆಯ ಮಸೀದಿಯ ಒಂದು ಭಾಗವನ್ನು ‘ಅತಿಕ್ರಮಣ’ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಅದರ ತೆರವು ಕಾರ್ಯಾಚರಣೆಯನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ಬಿಜೆಪಿಯ ನಾಯಕರೊಬ್ಬರು ಮುಸ್ಲಿಂ ಧಾರ್ಮಿಕ ಸ್ಥಳವು ಸರ್ಕಾರಿ ಭೂಮಿಯ ಒಂದು ಭಾಗವನ್ನು ಅತಿಕ್ರಮಿಸಿದೆ ಎಂದು ಆರೋಪಿಸಿದ ನಂತರ ಮೂರು ಅಂತಸ್ತಿನ ಮಸೀದಿಯ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ವರದಿಗಳ ಪ್ರಕಾರ, ಮಸೀದಿಯ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ನಂತರ ಭಾರೀ ಪೊಲೀಸ್ ಪಡೆಯ ನಿಯೋಜನೆಯ ನಡುವೆಯೇ ಮಸೀದಿಯ ಕೆಲವು ಭಾಗದ ತೆರವು ಕಾರ್ಯ ಪ್ರಾರಂಭವಾಯಿತು. ಇದಕ್ಕೂ ಮೊದಲು ನ್ಯಾಯಾಲಯವು ಫೆಬ್ರವರಿ 8ರವರೆಗೆ ಮಸೀದಿಯ ತೆರವಿಗೆ ತಡೆ ನೀಡಿತ್ತು. ತಡೆಯಾಜ್ಞೆಯ ಸಮಯ ಮುಗಿದಂತೆ ಅಧಿಕಾರಿಗಳು ಅದನ್ನು ಕೆಡವಲು ಪ್ರಾರಂಭಿಸಿದರು.

ಕಳೆದ ವರ್ಷ ಸೆಪ್ಟೆಂಬರ್ 17ರಂದು ಬಿಜೆಪಿ ನಾಯಕ ರಾಮ್‌ಭಚನ್ ಸಿಂಗ್ ಅವರು ಹಟಾ ಪ್ರದೇಶದ ಸರ್ಕಾರಿ ಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದಾಗ ಈ ವಿಷಯ ಮುನ್ನೆಲೆಗೆ ಬಂದಿತು.

ಆದಾಗ್ಯೂ, ಮಸೀದಿ ಸಮಿತಿಯ ಜಾಕಿರ್ ಖಾನ್, ಮಸೀದಿ ನಿರ್ಮಾಣಕ್ಕಾಗಿ ಜಾಕಿರ್ ಹುಸೇನ್ ಮತ್ತು ಅಜ್ಮತುನ್ನಿಸಾ ಅವರಿಂದ 32 ದಶಮಾಂಶ ಭೂಮಿಯನ್ನು ಪಡೆದುಕೊಂಡಿದೆ ಎಂದು ಹೇಳುತ್ತಾರೆ. ಮಸೀದಿಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿರುವ ಮಸೀದಿಯ 30 ದಶಮಾಂಶ ಮತ್ತು ಎರಡು ದಶಮಾಂಶ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ.

ಮಸೀದಿಯ ಉಸ್ತುವಾರಿ ವಹಿಸಿಕೊಂಡವರು ಮಸೀದಿ ನಿರ್ಮಿಸಲು ಮುಸ್ಲಿಂ ಸಮುದಾಯವು ಸುಮಾರು 15 ವರ್ಷಗಳ ಹಿಂದೆ 32 ದಶಮಾಂಶ ಭೂಮಿಯನ್ನು ಖರೀದಿಸಿದೆ ಎಂದು ಹೇಳಿದರು. ಯಾವುದೇ ಅತಿಕ್ರಮಣವಿಲ್ಲ ಮತ್ತು ಮಸೀದಿ 30 ದಶಮಾಂಶ ಭೂಮಿಯಲ್ಲಿ ನಿಂತಿದೆ ಎಂದು ಅವರು ಹೇಳಿದರು.

ವರದಿಗಾರರೊಂದಿಗೆ ಮಾತನಾಡಿದ ಮಸೀದಿಯ ಪ್ರತಿನಿಧಿ ಸೈಫುಲ್ಲಾ ಖಾನ್, ಬುಲ್ಡೋಜರ್ ನಿಂದ ಹೊಡೆದುರುಳಿಸುವ ತೆರವು ಕಾರ್ಯಾಚರಣೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದರು.

“ನಗರ ಪಾಲಿಕೆ ಕಚೇರಿಯಲ್ಲಿ ಸಮಯಕ್ಕೆ ಸರಿಯಾಗಿ ಅಧಿಕಾರಿಗಳಿಗೆ ನೀಡಿದ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ವಿವರಣೆಯನ್ನು ನೀಡಲಾಯಿತು. ನಾನು ಇಲ್ಲಿಗೆ ಬಂದ ತಕ್ಷಣ ವಿವರಣೆಯ ಕುರಿತು ಆದೇಶವನ್ನು ಕೇಳಿದೆ. ನಮಗೆ ಯಾವುದೇ ಆದೇಶವನ್ನು ತೋರಿಸಲಾಗಿಲ್ಲ. ನಮಗೆ ಹಾರ್ಡ್ ಅಥವಾ ಸಾಫ್ಟ್ ಕಾಪಿ ನೀಡಲಾಗಿಲ್ಲ. ಆದರೆ ಅವರು ಕ್ರಮ ಕೈಗೊಳ್ಳುವುದನ್ನು ಮುಂದುವರೆಸಿದ್ದಾರೆ” ಎಂದು ಖಾನ್ ತಿಳಿಸಿದರು.

ಹಿಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಭೂಮಿಯನ್ನು ಅಳತೆ ಮಾಡಿದ್ದರು. 33 ದಶಮಾಂಶ ಮೌಲ್ಯದ ಭೂಮಿ ಮಸೀದಿಗೆ ಸೇರಿದ್ದು ಮತ್ತು ಮಸೀದಿ 29 ದಶಮಾಂಶ ಭೂಮಿಯಲ್ಲಿದೆ ಎಂಬುದು ಕಂಡುಬಂದಿದೆ ಎಂದು ಖಾನ್ ಮಾಹಿತಿ ನೀಡಿದ್ದಾರೆ.

ಮಸೀದಿಯ ಬಗ್ಗೆ ದೂರು ನೀಡಿದವರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಭೂಮಿಯನ್ನು ಹೊಂದಿಲ್ಲ ಎಂದು ಖಾನ್ ಹೇಳಿದರು.

“ಯಾರಾದರೂ ಬಿಜೆಪಿ ಲೆಟರ್‌ಹೆಡ್‌ನಲ್ಲಿ ದೂರು ನೀಡಿದರೆ, ಆ ದೂರಿನ ಆಧಾರದ ಮೇಲೆ ಯಾವುದೇ ಸಮುದಾಯದ ಧಾರ್ಮಿಕ ರಚನೆಗಳನ್ನು ಕೆಡವಲಾಗುತ್ತದೆ. ಇದು ಸ್ಪಷ್ಟ ಅನ್ಯಾಯವಾಗಿದೆ” ಎಂದು ಅವರು ಹೇಳಿದರು.

ಸುತ್ತಮುತ್ತಲಿನ ಪ್ರದೇಶದ ಭೂಮಿ ಪೊಲೀಸ್ ಠಾಣೆ ಮತ್ತು ನಗರ ಪಾಲಿಕೆಗೆ ಸೇರಿದೆ. ಜಿಲ್ಲಾಡಳಿತದಿಂದ ಅದನ್ನು ಅಳತೆ ಮಾಡಲಾಗಿದೆ. ಭೂಮಿಯ ಅಳತೆಯ ಕುರಿತಾದ ವರದಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆ. ವರದಿಯಲ್ಲಿ ಯಾವುದೇ ಅತಿಕ್ರಮಣವಾಗಿಲ್ಲ ಎಂದು ತೀರ್ಮಾನಿಸಿತ್ತು. ಅತಿಕ್ರಮಣವಿಲ್ಲದಿರುವಾಗ ಅದು ಹೇಗೆ ಅನಧಿಕೃತ ಆಕ್ರಮಣವಾಗುತ್ತದೆ? ಎಂದು ಖಾನ್ ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬುಲ್ಡೋಜರ್ ಕಾರ್ಯಾಚರಣೆಗೆ ಮಸೀದಿ ಇತ್ತೀಚಿನ ಗುರಿಯಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಹೊರತಾಗಿಯೂ ಸರ್ಕಾರವು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಲೇ ಇದೆ ಎಂದು ಅವರು ಆರೋಪಿಸಿದ್ದಾರೆ.

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...