Homeಕರ್ನಾಟಕಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್...

ಮಂಗಳೂರು | ಚೈನ್ ಸಹಿತ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ವೈದ್ಯರು

- Advertisement -
- Advertisement -

ಬಾಲಕನೊಬ್ಬನ ಕುತ್ತಿಗೆ ಪಕ್ಕದಿಂದ ಎದೆಗೂಡಿನೊಳಗೆ ಹೊಕ್ಕಿದ್ದ ತೆಂಗಿನ ಗರಿಯ ದಿಂಡನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಚೇತರಿಸಿಕೊಂಡಿದ್ದಾನೆ.

ಬಹಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಬಾಲಕನ ಜೀವ ಉಳಿಸಿದ ಸರ್ಕಾರಿ ವೈದ್ಯರ ಕಾರ್ಯಕ್ಕೆ ಸರ್ಕಾರ ಮತ್ತು ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಡಿಕೇರಿಯಲ್ಲಿ ವಾಸವಿರುವ ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬದ ಕಮಲ್ ಹಸನ್ (12) ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ.

ಕಮಲ್ ಹಸನ್ ಶನಿವಾರ (ಫೆ. 8) ಸಂಜೆ 7 ಗಂಟೆಯ ಸುಮಾರಿಗೆ ಮನೆಯ ಮೆಟ್ಟಿಲ ಬಳಿ ನಿಂತಿದ್ದಾಗ ಮರದಿಂದ ಜಾರಿ ಬಿದ್ದ ತೆಂಗಿನ ಗರಿಯ ದಿಂಡು ಕುತ್ತಿಗೆ ಪಕ್ಕದಿಂದ ಎದೆಗೂಡಿನ ಒಳ ಹೊಕ್ಕಿದೆ. ಅದನ್ನು ತೆಗೆಯಲು ಮಡಿಕೇರಿ ಆಸ್ಪತ್ರೆಯ ವೈದ್ಯರು ನಿರಾಕರಿಸಿದ್ದರು. ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ತಕ್ಷಣ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಮಡಿಕೇರಿಯಿಂದ ಕಮಲ್ ಹಸನ್ ಅವರನ್ನು ಕರೆದುಕೊಂಡು ಬಂದ ಕುಟುಂಬಸ್ಥರು, ರಾತ್ರಿ 12.15ರ ಸುಮಾರಿಗೆ ಮಂಗಳೂರು ತಲುಪಿದ್ದರು. ಇಲ್ಲಿ ವೈದ್ಯರು ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಪ್ರಸ್ತುತ ಬಾಲಕನ ಆರೋಗ್ಯ ಸುಧಾರಿಸಿದೆ ಎಂದು ವರದಿಯಾಗಿದೆ.

ತೆಂಗಿನ ಗರಿಯ ದಿಂಡು ಬಿದ್ದ ರಭಸಕ್ಕೆ ಬಾಲಕನ ಕುತ್ತಿಗೆಯಲ್ಲಿದ್ದ ಸ್ಟೀಲ್ ಚೈನ್ ಕೂಡ ದೇಹದ ಒಳ ಹೊಕ್ಕಿತ್ತು. ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಹೋಗಿತ್ತು. ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕ ಇದೀಗ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಮತ್ತು ಡಿಎಂಒ ಡಾ. ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಬಹಳ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಈ ಶಸ್ತ್ರ ಚಿಕಿತ್ಸೆ ನಡೆಸಿದ್ದಿದ್ದರೆ 10 ಲಕ್ಷ ರೂಪಾಯಿ ತನಕ ಖರ್ಚಾಗುತ್ತಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ ಎಂದು ವೈದ್ಯರ ಸಾಧನೆಯನ್ನು ಡಿಎಂಒ ಡಾ.ಶಿವಪ್ರಕಾಶ್ ಶ್ಲಾಘಿಸಿದ್ದಾರೆ.

ಶೃಂಗೇರಿ | ಬಜರಂಗದಳ ಕಾರ್ಯಕರ್ತರಿಂದ ದರ್ಗಾಕ್ಕೆ ಬಂದಿದ್ದವರ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...