Homeಮುಖಪುಟ'14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ' : ಸರ್ಕಾರಕ್ಕೆ ಸೋನಿಯಾ...

’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ

- Advertisement -
- Advertisement -

ದೇಶದಲ್ಲಿ ಸುಮಾರು 14 ಕೋಟಿ ಜನರು ಆಹಾರ ಭದ್ರತಾ ಕಾನೂನಿನಡಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತ್ವರಿತವಾಗಿ ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸೋಮವಾರ (ಫೆ.10) ಮೊದಲ ಬಾರಿಗೆ ಶೂನ್ಯ ವೇಳೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆಯೇ ಹೊರತು, ಇತ್ತೀಚಿನ ಜನಸಂಖ್ಯೆಯ ಪ್ರಕಾರವಲ್ಲ ಎಂದು ಹೇಳಿದ್ದಾರೆ.

ಯುಪಿಎ ಸರ್ಕಾರ ಸೆಪ್ಟೆಂಬರ್ 2013ರಲ್ಲಿ ಪರಿಚಯಿಸಿದ, ದೇಶದ 140 ಕೋಟಿ ಜನಸಂಖ್ಯೆಗೆ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆ ಒದಗಿಸುವ ಗುರಿ ಹೊಂದಿರುವ ಅತ್ಯಂತ ಮಹತ್ವದ ಯೋಜನೆ ಎನ್‌ಎಫ್‌ಎಸ್‌ಎ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಲಕ್ಷಾಂತರ ದುರ್ಬಲ ಕುಟುಂಬಗಳನ್ನು ಹಸಿವಿನಿಂದ ರಕ್ಷಿಸುವಲ್ಲಿ ಈ ಕಾಯ್ದೆ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಫಲಾನುಭವಿಗಳ ಕೋಟಾವನ್ನು ಇನ್ನೂ ನಿರ್ಧರಿಸಲಾಗುತ್ತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಜನಗಣತಿಯ ಮಾಹಿತಿ ದಶಕಕ್ಕೂ ಹೆಚ್ಚು ಹಳೆಯದು ಎಂದಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013 ಸಾರ್ವಜನಿಕ ವಿತರಣಾ ವ್ಯವಸ್ಥೆ (ಟಿಪಿಡಿಎಸ್) ಅಡಿಯಲ್ಲಿ ಹೆಚ್ಚಿನ ಸಬ್ಸಿಡಿ ಆಹಾರ ಧಾನ್ಯಗಳನ್ನು ಪಡೆಯಲು ಗ್ರಾಮೀಣ ಪ್ರದೇಶದ ಶೇಕಡ 75 ರಷ್ಟು ಮತ್ತು ನಗರ ಪ್ರದೇಶದ ಜನಸಂಖ್ಯೆಯ ಶೇಕಡ 50ರಷ್ಟು ಜನರಿಗೆ ಅವಕಾಶ ಒದಗಿಸುತ್ತದೆ. 2011ರ ಜನಗಣತಿಯ ಪ್ರಕಾರ ಫಲಾನುಭವಿಗಳ ಸಂಖ್ಯೆ ಸುಮಾರು 81.35 ಕೋಟಿ ಇದೆ.

ಪ್ರಸ್ತುತ, ಆಹಾರ ಭದ್ರತಾ ಕಾನೂನಿನಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ.

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ದಶಕದ ಜನಗಣತಿಯು ನಾಲ್ಕು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. 2021ಕ್ಕೆ ಜನಗಣತಿ ನಡೆಯಬೇಕಿತ್ತು. ಆದರೆ, ಆಗ ಕೋವಿಡ್ ಕಾರಣ ನೀಡಿ ಸರ್ಕಾರ ಮುಂದೂಡಿಕೆ ಮಾಡಿದೆ. ಜನಗಣತಿಯ ಅವಧಿ ಕಳೆದು 5 ವರ್ಷಗಳಾಯಿತು. ಸರ್ಕಾರ ಯಾವಾಗ ಗಣತಿ ನಡೆಸಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಬಜೆಟ್ ಹಂಚಿಕೆಗಳನ್ನು ನೋಡಿದರೆ ಹೊಸ ಜನಗಣತಿ ಈ ವರ್ಷ ನಡೆಸುವ ಸಾಧ್ಯತೆಯಿಲ್ಲ ಎಂದು ತೋರುತ್ತದೆ. ಇದರಿಂದ ಸುಮಾರು 14 ಕೋಟಿ ಅರ್ಹ ಭಾರತೀಯರು ಎನ್‌ಎಫ್‌ಎಸ್‌ಎ ಅಡಿಯಲ್ಲಿ ತಮ್ಮ ಹಕ್ಕಿನ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜನಗಣತಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡುವುದು ಮತ್ತು ಎಲ್ಲಾ ಅರ್ಹ ವ್ಯಕ್ತಿಗಳು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಅವರಿಗೆ ಖಾತರಿಪಡಿಸಿದ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಆಹಾರ ಭದ್ರತೆ ಒಂದು ಸವಲತ್ತು ಅಲ್ಲ. ಅದು ಮೂಲಭೂತ ಹಕ್ಕು ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ವಿತರಣೆಯ ಅವಧಿಯನ್ನು ಜನವರಿ 1, 2024 ರಿಂದ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಮಣಿಪುರ ಹಿಂಸಾಚಾರ| ಕಳೆದ 20 ತಿಂಗಳಿಂದ ಕಣಿವೆ ನಾಡಲ್ಲಿ ನಡೆದದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...