Homeಕರ್ನಾಟಕಮದುವೆ, ವಿಚ್ಛೇದನ ಪ್ರಮಾಣಪತ್ರ ನೀಡುವ ವಕ್ಫ್ ಮಂಡಳಿಯ ಅಧಿಕಾರ ಪ್ರಶ್ನಿಸಿದ ಹೈಕೋರ್ಟ್

ಮದುವೆ, ವಿಚ್ಛೇದನ ಪ್ರಮಾಣಪತ್ರ ನೀಡುವ ವಕ್ಫ್ ಮಂಡಳಿಯ ಅಧಿಕಾರ ಪ್ರಶ್ನಿಸಿದ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ದಂಪತಿಗಳಿಗೆ ವಿವಾಹ ಮತ್ತು ವಿಚ್ಛೇದನ ಪ್ರಮಾಣಪತ್ರಗಳನ್ನು ನೀಡುವ ರಾಜ್ಯ ವಕ್ಫ್ ಮಂಡಳಿಯ ಅಧಿಕಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ (ಫೆ.10) ಅನುಮಾನ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ದಂಪತಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ವಕ್ಫ್ ಮಂಡಳಿ ಮತ್ತು ಅದರ ಜಿಲ್ಲಾ ಅಧಿಕಾರಿಗಳಿಗೆ ಅಧಿಕಾರ ನೀಡಿ ಆಗಸ್ಟ್ 30, 2023ರಂದು ಹೊರಡಿಸಲಾದ ಸರ್ಕಾರಿ ಆದೇಶವನ್ನು ನ್ಯಾಯಾಲಯ ಕಳೆದ ವರ್ಷ ತಡೆ ಹಿಡಿದಿತ್ತು.

ಮನವಿಯ ಮೇರೆಗೆ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನ್ಯಾಯಪೀಠವು ಇಂದು ರಾಜ್ಯ ಸರ್ಕಾರಕ್ಕೆ ತನ್ನ ಆದೇಶವನ್ನು ಪ್ರಶ್ನಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸ್ವಲ್ಪ ಸಮಯವಕಾಶ ನೀಡಿದೆ. ಫೆಬ್ರವರಿ 19ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

“ವಕ್ಫ್ (ಪ್ರಾಧಿಕಾರ) ಮದುವೆ ಪ್ರಮಾಣಪತ್ರ ಮತ್ತು ವಿಚ್ಛೇದನ ಪ್ರಮಾಣಪತ್ರವನ್ನು ಸಹ ನೀಡುತ್ತಿದೆಯೇ? ನಾವು ನಿಮ್ಮ ಉತ್ತರಕ್ಕಾಗಿ ಹೆಚ್ಚಿನ ಸಮಯವನ್ನು ನೀಡುವುದಿಲ್ಲ. ಏಕೆಂದರೆ ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಕ್ಫ್ ಕಾಯ್ದೆಯಡಿ ನಿಮಗೆ ಯಾವುದೇ ಅಧಿಕಾರವಿಲ್ಲ” ಎಂದು ನ್ಯಾಯಾಲಯ ಟೀಕಿಸಿದೆ ಎಂದು ವರದಿ ಹೇಳಿದೆ.

ಕರ್ನಾಟಕದಾದ್ಯಂತ ಜಿಲ್ಲಾ ವಕ್ಫ್ ಮಂಡಳಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ಕೊಡುವ ರಾಜ್ಯ ಸರ್ಕಾರದ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಆಲಂ ಪಾಷಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಮುಸ್ಲಿಂ ದಂಪತಿಗಳ ವಿವಾಹ ಸಮಾರಂಭದ ಸಮಯದಲ್ಲಿ ಕುರಾನ್ ಶ್ಲೋಕಗಳನ್ನು ಪಠಿಸುವ ಖಾಝಿಗೆ, 1988ರ ಖಾಝಿ ಕಾಯ್ದೆಯ ಅಡಿಯಲ್ಲಿ ವಿವಾಹ ಪ್ರಮಾಣಪತ್ರಗಳನ್ನು ನೀಡಲು ವಕ್ಫ್ ಮಂಡಳಿಯು ಅಧಿಕಾರ ನೀಡಿತ್ತು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆದರೆ, ಈ ಕಾಯ್ದೆಯನ್ನು 2013 ರಲ್ಲಿ ರದ್ದುಗೊಳಿಸಲಾಗಿದೆ. ನಂತರ ರಾಜ್ಯ ಸರ್ಕಾರ ವಕ್ಫ್ ಮಂಡಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ಕೊಡುವ ಆದೇಶ ಹೊರಡಿಸಿದೆ.

ವಕ್ಫ್ ಕಾಯ್ದೆಯು ಸ್ಥಿರ ಮತ್ತು ಚರ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ. ವಕ್ಫ್ ಮಂಡಳಿಯ ಅಧಿಕಾರಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಥವಾ ವ್ಯವಹರಿಸಲು ಅಧಿಕಾರ ನೀಡುವ ಯಾವುದೇ ನಿಬಂಧನೆಗಳು ಈ ಕಾಯ್ದೆಯಡಿಯಲ್ಲಿ ಇಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಮದುವೆಯ ನಂತರ ವಿದೇಶ ಪ್ರವಾಸ ಮಾಡಿದ ಮುಸ್ಲಿಮರು ವಿವಾಹ ಪ್ರಮಾಣಪತ್ರಗಳನ್ನು ಪಡೆಯುವಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ” ಎಂದು ನವೆಂಬರ್ 2024ರಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಇಂದು ವಾದ ಮಂಡಿಸಲು ವಕೀಲರು ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಪರಿಣಾಮ ವಿಚಾರಣೆ ಮುಂದೂಡಲಾಯಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ದಾವಣಗೆರೆಯಲ್ಲಿ ಕಾಂಗ್ರೆಸ್ ಅಹಿಂದ ನಾಯಕರ ರಹಸ್ಯ ಸಭೆ; ನಾಯಕತ್ವ ಬದಲಾವಣೆ ಚರ್ಚೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...