Homeಮುಖಪುಟಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ...

ಮೋದಿ ಸಮ್ಮಾನಿತ ಯೂಟ್ಯೂಬರ್‌ನಿಂದ ಆಕ್ಷೇಪಾರ್ಹ ಪ್ರಶ್ನೆ : ಪೊಲೀಸ್, ಮಹಿಳಾ ಆಯೋಗಕ್ಕೆ ದೂರು ಕಠಿಣ ಕ್ರಮಕ್ಕೆ ಆಗ್ರಹ

- Advertisement -
- Advertisement -

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ್ದಕ್ಕೆ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ, ಹಾಸ್ಯನಟ ಸಮಯ್ ರೈನಾ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಔಪಚಾರಿಕ ದೂರು ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ತನಿಖೆ ನಡೆಯುತ್ತಿದೆ” ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ದೂರಿನಲ್ಲಿ, ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ಬೀರ್ ಬೈಸೆಪ್ಸ್’ ಎಂದೇ ಹೆಸರು ಗಳಿಸಿರುವ ಪಾಡ್‌ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ, ಕಾರ್ಯಕ್ರಮದ ಇಡೀ ತಂಡದ ವಿರುದ್ದ ದೂರು ದಾಖಲಾಗಿದೆ.

ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಪಡೆದ ಆನ್‌ಲೈನ್ ಕಂಟೆಂಟ್ ಕ್ರಿಯೇಟರ್‌ಗಳಲ್ಲಿ ಅಲ್ಲಾಬಾದಿಯಾ ಕೂಡ ಒಬ್ಬರು. ಈ ಹಿಂದೆ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಅಲ್ಲಾಬಾದಿಯಾ ಅವರು ಕೇಂದ್ರ ಸಂಪುಟ ಸಚಿವರ ಸರಣಿಯ ಸಂದರ್ಶನಗಳನ್ನು ನಡೆಸಿದ್ದರು.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಅಲ್ಲಾಬಾದಿಯಾ “ನಿನ್ನ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀಯಾ? ಇಲ್ಲ ಒಮ್ಮೆ ಅದರಲ್ಲಿ ಭಾಗವಹಿಸಿ ಶಾಶ್ವತವಾಗಿ ನಿಲ್ಲಿಸುತ್ತೀಯಾ?” ಎಂದು ಮಹಿಳಾ ಸ್ಪರ್ಧಿಯೊಬ್ಬರಿಗೆ ಕೇಳಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದ್ದಾರೆ. 

ಪೋಷಕರು, ಲೈಂಗಿಕತೆಯ ವಿಷಯವನ್ನು ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲಾಬಾದಿಯ ಟೀಕೆಗೆ ಗುರಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳನ್ನು ಪ್ರಚಾರ ಮಾಡುವ ರಣವೀರ್ ಅಲ್ಲಾಬಾದಿಯ, ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.  

ಆನ್‌ಲೈನ್ ಪ್ರಸಾರದ ಮೂಲಕ ಜನಪ್ರಿಯತೆ ಮತ್ತು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜಕರು ಮತ್ತು ಭಾಗವಹಿಸುವವರು ಉದ್ದೇಶಪೂರ್ವಕವಾಗಿ ಮಹಿಳೆಯರ ಖಾಸಗಿ ಭಾಗಗಳ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಜಾಗತಿಕವಾಗಿ ಪ್ರಸಾರವಾದ ಈ ಕಾರ್ಯಕ್ರಮ ಅಲ್ಲಾಬಾದಿಯ ಮಹಿಳೆಯರನ್ನು ಗುರಿಯಾಗಿಸಿ ನಗುವುದು ಮತ್ತು ಅನುಚಿತ ಹಾಸ್ಯಗಳನ್ನು ಮಾಡುವುದನ್ನು ಒಳಗೊಂಡಿದೆ. ಇದನ್ನು ದೂರುದಾರರು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

ಕುಟುಂಬದ ವಿಷಯದಲ್ಲಿ ನಾನು ಎಂದಿಗೂ ಅಗೌರವ ತೋರುವುದಿಲ್ಲ: ಅಲ್ಲಾಬಾದಿಯಾ

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಅಲ್ಲಾಬಾದಿಯಾ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆ ಅನುಚಿತ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಹೊಂದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

“ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಆ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಕ್ಷಮಿಸಿ” ಎಂದು ಅಲ್ಲಾಬಾದಿಯಾ ವಿಡಿಯೋದಲ್ಲಿ ಹೇಳಿದ್ದಾರೆ. “ನನ್ನ ಹೇಳಿಕೆ ಕೇವಲ ಅನುಚಿತವಾಗಿರಲಿಲ್ಲ, ಅದು ತಮಾಷೆಯೂ ಆಗಿರಲಿಲ್ಲ. ಹಾಸ್ಯ ನನ್ನ ಸಾಮರ್ಥ್ಯವಲ್ಲ. ವೈಯಕ್ತಿಕವಾಗಿ ನಾನು ನಿರ್ಣಯಿಸುವಲ್ಲಿ ಒಂದು ಲೋಪವನ್ನು ಹೊಂದಿದ್ದೇನೆ, ಅದು ಸಾಮಾನ್ಯ ವಿಷಯವಲ್ಲ. ವಿಶೇಷವಾಗಿ ಎಲ್ಲಾ ವಯಸ್ಸಿನ ಜನರು ವೀಕ್ಷಿಸುವ ವೇದಿಕೆಯಲ್ಲಿ” ಎಂದಿದ್ದಾರೆ.

“ತಾನು ಆ ವೇದಿಕೆಯನ್ನು ಜವಾಬ್ದಾರಿಯಿಂದ ಬಳಸಬೇಕಿತ್ತು ಎಂದಿರುವ ಅಲ್ಲಾಬಾದಿಯಾ, ಕುಟುಂಬವನ್ನು ಅವಮಾನಿಸುವುದು ಎಂದಿಗೂ ನನಗೆ ಅಷ್ಟೊಂದು ಕನಿಷ್ಠ ವಿಷಯವಿಲ್ಲ. ಈ ವೇದಿಕೆಯನ್ನು ಉತ್ತಮವಾಗಿ ಬಳಸಬೇಕಿದೆ. ಅದು ಇಡೀ ಅನುಭವದಿಂದ ನಾನು ಕಲಿತ ಪಾಠ” ಎಂದು ಹೇಳಿದ್ದಾರೆ.

“ವಿಡಿಯೊದ ಸೂಕ್ಷ್ಮವಲ್ಲದ ಭಾಗಗಳನ್ನು ತೆಗೆದುಹಾಕುವಂತೆ ನಿರ್ಮಾಪಕರನ್ನು ವಿನಂತಿಸಿದ್ದೇನೆ. ಮುಂದೆ ಸುಧಾರಿಸುವುದಾಗಿ ಭರವಸೆ ನೀಡಿದ್ದೇನೆ. ಕ್ಷಮಿಸಿ ಎಂದಷ್ಟೇ ನಾನು ಹೇಳಬಲ್ಲೆ, ನೀವು ಮನುಷ್ಯರಾಗಿ ನನ್ನನ್ನು ಕ್ಷಮಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ: ದೂರು

ವಿವಾದದಿಂದ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗಿದೆ. ಮಹಿಳೆಯರ ಘನತೆಗೆ ಉಂಟಾಗುವ ಹಾನಿ ಅಥವಾ ಯುವ ಪ್ರೇಕ್ಷಕರ ಮೇಲೆ, ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಬಗ್ಗೆ ಯಾವುದೇ ಗಮನ ಹರಿಸಲಾಗಿಲ್ಲ ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು “ನನಗೆ ಅದರ ಬಗ್ಗೆ ಮಾಹಿತಿ ದೊರೆತಿದೆ. ನಾನು ಇನ್ನೂ ವಿಡಿಯೋ ನೋಡಿಲ್ಲ. ವಿಷಯಗಳನ್ನು ತಪ್ಪಾದ ರೀತಿಯಲ್ಲಿ ಹೇಳಲಾಗಿದೆ ಮತ್ತು ಪ್ರಸ್ತುತಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ, ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ, ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಮತ್ತು ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಕೂಡ ರಣವೀರ್ ಅಲ್ಲಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ವಿಡಿಯೋ ತುಂಬಾ ಆಘಾತಕಾರಿಯಾಗಿದೆ. ಮಹಿಳೆಯಾಗಿರಲಿ, ಪುರುಷನಾಗಿರಲಿ, ಈ ರೀತಿಯ ಹಾಸ್ಯವನ್ನು ಸಮಾಜ ಎಂದಿಗೂ ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಾಯಿ ಅಥವಾ ಮಹಿಳೆಯ ದೇಹದ ಬಗ್ಗೆ ಹಾಸ್ಯ ಮಾಡುವುದು ಒಳ್ಳೆಯದಲ್ಲ. ಎಲ್ಲೋ ಇಂದಿನ ಯುವಕರು ನೈತಿಕವಾಗಿ ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ. ಇಂತಹ ಹಾಸ್ಯಗಳು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವ ಇತರರ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುತ್ತೇನೆ. ಕ್ರಮ ಕೈಗೊಳ್ಳಲು ನಾನು ಆ ವಿಡಿಯೋವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.

ಶಿವಸೇನೆಯು ತನ್ನ ವಕ್ತಾರ ರಾಜು ವಾಗ್ಮರೆ ಮೂಲಕ ರಣವೀರ್ ಅಲ್ಲಾಬಾದಿಯಾ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ನೀಡಿದ ಹೇಳಿಕೆಗಳನ್ನು ಖಂಡಿಸಿದೆ

“ಶಿವಾಜಿ ಮಹಾರಾಜರ ಪರಂಪರೆಯಡಿಯಲ್ಲಿ, ಮಹಾರಾಷ್ಟ್ರ ರಾಜ್ಯದಲ್ಲಿ ಇಂತಹ ಭಾಷೆಯನ್ನು ಸಹಿಸಲಾಗುವುದಿಲ್ಲ. ಅವರು ಇದನ್ನೆಲ್ಲಾ ತಕ್ಷಣವೇ ನಿಲ್ಲಿಸಬೇಕು; ಇಲ್ಲದಿದ್ದರೆ ನಾವು ನಮ್ಮದೇ ಆದ ಶೈಲಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಜು ವಾಗ್ಮರೆ ಕಾರ್ಯಕ್ರಮದ ನಿರ್ಮಾಪಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...