Homeಮುಖಪುಟದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

ದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಂಜಾಬ್ ಎಎಪಿ ಘಟಕವು ವಿಭಜನೆಯಾಗಲಿದೆ ಎಂಬ ತೀವ್ರ ಊಹಾಪೋಹಗಳ ನಡುವೆ, ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ದೆಹಲಿ ಹಿನಾಯ ಸೋಲು

ಈ ನಡುವೆ, ಕನಿಷ್ಠ 30 ಎಎಪಿ ಸದಸ್ಯರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಹೇಳಿಕೊಂಡಿದೆ. ಜೊತೆಗೆ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಲಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಮತ್ತು ಪಂಜಾಬ್‌ನಿಂದ ರಾಜ್ಯಸಭೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಎಪಿ ಸ್ಪಷ್ಟಪಡಿಸಿದೆ.

ಈ ಎಲ್ಲಾ ಊಹಾಪೋಹಗಳ ನಡುವೆ, ಪಂಜಾಬ್‌ನ ಏಳು ಸಂಸದರಲ್ಲಿ ಒಬ್ಬರು ರಾಜೀನಾಮೆ ನೀಡಿ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಹರಡಿವೆ. ದೆಹಲಿ ಹಿನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಪಂಜಾಬ್ ಮುಖ್ಯಮಂತ್ರಿಯ ಅಧಿಕೃತ ನಿವಾಸವಾದ ಕಪುರ್ತಲಾ ಹೌಸ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪಂಜಾಬ್ ಶಾಸಕರಿಗೆ ಸೂಚಿಸಲಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮಾನ್ ಭಾನುವಾರ ಮಧ್ಯಾಹ್ನ ಚಂಡೀಗಢಕ್ಕೆ ಬಂದಿದ್ದಾರೆ. ಸೋಮವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 13 ಕ್ಕೆ ಮುಂದೂಡಲಾಗಿದೆ.

ಈ ಸಭೆಯ ಕಾರ್ಯಸೂಚಿ ತಿಳಿದಿಲ್ಲ, ಆದರೆ ಕೇಜ್ರಿವಾಲ್ ಶಾಸಕರಿಗೆ “ಆಮ್ ಆದ್ಮಿ” ಜೊತೆ ಮತ್ತೆ ಸಂಪರ್ಕ ಸಾಧಿಸಲು “ಆತ್ಮ ಸಮಾಲೋಚನಾ ಸಭೆ” ಮಾಡುವ ಸಾಧ್ಯತೆ ಇದೆ. ಪಂಜಾಬ್‌ನ ಕೆಲವು ಶಾಸಕರು ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದು, ಪಕ್ಷ ಬದಲಾಯಿಸುವುದನ್ನು ಪರಿಗಣಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿಯಲ್ಲಿ ನಡೆಯಲಿರುವ ಸಭೆಯೂ ಮಹತ್ವ ಬಂದಿದೆ.

ಈ ನಡುವೆ, ಪಂಜಾಬ್‌ ರಾಜಕೀಯದಲ್ಲಿ ಕೇಜ್ರಿವಾಲ್ ನೇರವಾಗಿ ಪಾತ್ರ ವಹಿಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಸ್ಥಾನ ಖಾಲಿಯಾಗಿರುವುದರಿಂದ, ಕೇಜ್ರಿವಾಲ್ ಅಲ್ಲಿಂದ ಸ್ಪರ್ಧಿಸಿ ಪಂಜಾಬ್ ಸರ್ಕಾರದ ಭಾಗವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಪಂಜಾಬ್‌ನಲ್ಲಿ ಎಎಪಿ ಮೇಲೆ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, “ಮಾನ್ ಅವರ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಇದೇ ರೀತಿಯ ಹೇಳಿಕೆ ನಿಡಿದ್ದು, ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಿಗಿಡಲಿದ್ದಾರೆ ಎಂದು ಸೂಚಿಸಿದರು.

“ಚುನಾವಣೆಯಲ್ಲಿ ಸೋತ ನಂತರ, ಕೇಜ್ರಿವಾಲ್  ಅವರು ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಸಿಎಂ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...