Homeಮುಖಪುಟದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

ದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಂಜಾಬ್ ಎಎಪಿ ಘಟಕವು ವಿಭಜನೆಯಾಗಲಿದೆ ಎಂಬ ತೀವ್ರ ಊಹಾಪೋಹಗಳ ನಡುವೆ, ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ದೆಹಲಿ ಹಿನಾಯ ಸೋಲು

ಈ ನಡುವೆ, ಕನಿಷ್ಠ 30 ಎಎಪಿ ಸದಸ್ಯರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಹೇಳಿಕೊಂಡಿದೆ. ಜೊತೆಗೆ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಲಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಮತ್ತು ಪಂಜಾಬ್‌ನಿಂದ ರಾಜ್ಯಸಭೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಎಪಿ ಸ್ಪಷ್ಟಪಡಿಸಿದೆ.

ಈ ಎಲ್ಲಾ ಊಹಾಪೋಹಗಳ ನಡುವೆ, ಪಂಜಾಬ್‌ನ ಏಳು ಸಂಸದರಲ್ಲಿ ಒಬ್ಬರು ರಾಜೀನಾಮೆ ನೀಡಿ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಹರಡಿವೆ. ದೆಹಲಿ ಹಿನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಪಂಜಾಬ್ ಮುಖ್ಯಮಂತ್ರಿಯ ಅಧಿಕೃತ ನಿವಾಸವಾದ ಕಪುರ್ತಲಾ ಹೌಸ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪಂಜಾಬ್ ಶಾಸಕರಿಗೆ ಸೂಚಿಸಲಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮಾನ್ ಭಾನುವಾರ ಮಧ್ಯಾಹ್ನ ಚಂಡೀಗಢಕ್ಕೆ ಬಂದಿದ್ದಾರೆ. ಸೋಮವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 13 ಕ್ಕೆ ಮುಂದೂಡಲಾಗಿದೆ.

ಈ ಸಭೆಯ ಕಾರ್ಯಸೂಚಿ ತಿಳಿದಿಲ್ಲ, ಆದರೆ ಕೇಜ್ರಿವಾಲ್ ಶಾಸಕರಿಗೆ “ಆಮ್ ಆದ್ಮಿ” ಜೊತೆ ಮತ್ತೆ ಸಂಪರ್ಕ ಸಾಧಿಸಲು “ಆತ್ಮ ಸಮಾಲೋಚನಾ ಸಭೆ” ಮಾಡುವ ಸಾಧ್ಯತೆ ಇದೆ. ಪಂಜಾಬ್‌ನ ಕೆಲವು ಶಾಸಕರು ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದು, ಪಕ್ಷ ಬದಲಾಯಿಸುವುದನ್ನು ಪರಿಗಣಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿಯಲ್ಲಿ ನಡೆಯಲಿರುವ ಸಭೆಯೂ ಮಹತ್ವ ಬಂದಿದೆ.

ಈ ನಡುವೆ, ಪಂಜಾಬ್‌ ರಾಜಕೀಯದಲ್ಲಿ ಕೇಜ್ರಿವಾಲ್ ನೇರವಾಗಿ ಪಾತ್ರ ವಹಿಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಸ್ಥಾನ ಖಾಲಿಯಾಗಿರುವುದರಿಂದ, ಕೇಜ್ರಿವಾಲ್ ಅಲ್ಲಿಂದ ಸ್ಪರ್ಧಿಸಿ ಪಂಜಾಬ್ ಸರ್ಕಾರದ ಭಾಗವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಪಂಜಾಬ್‌ನಲ್ಲಿ ಎಎಪಿ ಮೇಲೆ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, “ಮಾನ್ ಅವರ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಇದೇ ರೀತಿಯ ಹೇಳಿಕೆ ನಿಡಿದ್ದು, ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಿಗಿಡಲಿದ್ದಾರೆ ಎಂದು ಸೂಚಿಸಿದರು.

“ಚುನಾವಣೆಯಲ್ಲಿ ಸೋತ ನಂತರ, ಕೇಜ್ರಿವಾಲ್  ಅವರು ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಸಿಎಂ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...