Homeಮುಖಪುಟಟಿವಿಕೆ ಅಧ್ಯಕ್ಷ ವಿಜಯ್‌ರನ್ನು ಭೇಟಿಯಾದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್

ಟಿವಿಕೆ ಅಧ್ಯಕ್ಷ ವಿಜಯ್‌ರನ್ನು ಭೇಟಿಯಾದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂದಿನ ವರ್ಷ ನಡೆಯಲಿದ್ದು, ಈ ನಡುವೆ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಸೋಮವಾರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ, ನಟ ವಿಜಯ್ ಅವರನ್ನು ಪನೈಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆದಿದೆ ಎಂದು ವರದಿ ಹೇಳಿದ್ದು, ಈ ಸಂದರ್ಭದಲ್ಲಿ ಕಿಶೋರ್ ಮತ್ತು ವಿಜಯ್ ಅವರು ಪಕ್ಷದ ಮಾರ್ಗಸೂಚಿ ಮತ್ತು ಸಂಭಾವ್ಯ ಮೈತ್ರಿಗಳ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿವಿಕೆ ಅಧ್ಯಕ್ಷ

ಇಬ್ಬರ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲವಾದರೂ, ವಿಜಯ್ 2026 ರಲ್ಲಿ ಚುನಾವಣಾ ಚೊಚ್ಚಲ ಪ್ರವೇಶ ಮಾಡುವ ನಿರೀಕ್ಷೆಯಿರುವುದರಿಂದ ಈ ಚರ್ಚೆ ಮಹತ್ವದ್ದಾಗಿದೆ. ಕಿಶೋರ್ ಅವರೊಂದಿಗಿನ ಸಭೆಯಲ್ಲಿ, ಪಕ್ಷದ ಚುನಾವಣಾ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಮತ್ತು ಇತರ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಟಿವಿಕೆ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021 ರ ಚುನಾವಣೆಗೆ ಮುಂಚಿತವಾಗಿ ಕಿಶೋರ್ ಡಿಎಂಕೆ ಜೊತೆ ಕೆಲಸ ಮಾಡಿದ್ದರು. ಆದಾಗ್ಯೂ, ಚುನಾವಣೆಯ ನಂತರ, ಅವರು ಚುನಾವಣಾ ತಂತ್ರಜ್ಞ ಹುದ್ದೆಯಿಂದ ಹೊರಬರುವುದಾಗಿ ಘೋಷಿಸಿದ್ದರು. ಪ್ರಸ್ತುತ ಅವರು ಬಿಹಾರದಲ್ಲಿ ಜನ್ ಸ್ವರಾಜ್ ಎಂಬ ಪಕ್ಷವನ್ನು ನಡೆಸುತ್ತಿದ್ದಾರೆ.

ಫೆಬ್ರವರಿ 2, 2024 ರಂದು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಥಾಪಿಸಿದ್ದರು. 2024ರ ಅಕ್ಟೋಬರ್‌ನಲ್ಲಿ ವಿಜಯ್ ಪಕ್ಷದ ರಾಜಕೀಯ ಮತ್ತು ಸೈದ್ಧಾಂತಿಕ ಆದ್ಯತೆಗಳನ್ನು ಘೋಷಿಸಿದ್ದರು.

ಅವರು ಈ ವೇಳೆ ಬಿಜೆಪಿಯನ್ನು ಟಿವಿಕೆಯ ಸೈದ್ಧಾಂತಿಕ ಎದುರಾಳಿ ಮತ್ತು ಡಿಎಂಕೆಯನ್ನು ಅದರ ರಾಜಕೀಯ ಎದುರಾಳಿ ಎಂದು ಗುರುತಿಸಿದ್ದರು. ಪೆರಿಯಾರ್, ಕಾಮರಾಜ್, ಅಂಬೇಡ್ಕರ್, ರಾಣಿ ವೇಲು ನಾಚಿಯಾರ್ ಮತ್ತು ಅಂಜಲಿ ಅಮ್ಮಲ್ ಅವರ ಪರಂಪರೆಯನ್ನು ಅನುಸರಿಸುವುದಾಗಿ ವಿಜಯ್ ಅಂದು ಪ್ರತಿಜ್ಞೆ ಮಾಡಿದ್ದರು.

ತಲಪತಿ ವಿಜಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ತಮಿಳು ನಟ ವಿಜಯ್ ಕಳೆದ ಮೂರು ದಶಕಗಳಲ್ಲಿ 68 ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಚಿತ್ರರಂಗದ ಅತ್ಯಂತ ಯಶಸ್ವಿ ನಟರಲ್ಲಿ ಒಬ್ಬರಾದ ಅವರು 1984 ರಲ್ಲಿ ಬಾಲನಟನಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಪೂವೆ ಉನಕ್ಕಾಗ (1996), ಕಾದಲುಕ್ಕು ಮರಿಯಾಧೈ (1997), ಮತ್ತು ಗಿಲ್ಲಿ (2004) ಅವರ ಪ್ರಮುಖ ಚಿತ್ರಗಳಾಗಿವೆ.

ಇದನ್ನೂಓದಿ:  ಚಾಲಕ, ಕಂಡಕ್ಟರ್‌ನಿಂದ ಅಶ್ಲೀಲ ಮಾತು; ಚಲಿಸುವ ಬಸ್ಸಿನಿಂದ ಹಾರಿದ ಬಾಲಕಿಯರು

ಚಾಲಕ, ಕಂಡಕ್ಟರ್‌ನಿಂದ ಅಶ್ಲೀಲ ಮಾತು; ಚಲಿಸುವ ಬಸ್ಸಿನಿಂದ ಹಾರಿದ ಬಾಲಕಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...