Homeಮುಖಪುಟಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ - ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ – ಮಮತಾ ಬ್ಯಾನರ್ಜಿ

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಿಂದ ತೃಣಮೂಲ ಕಾಂಗ್ರೆಸ್ ಶಾಸಕರು ಆತಂಕಗೊಳ್ಳಬೇಡಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ತೃಣಮೂಲ ಪಕ್ಷದ ಅವಕಾಶಗಳಿಗೆ ಹಾನಿ ಮಾಡುವಷ್ಟು ಕಾಂಗ್ರೆಸ್ ರಾಜ್ಯದಲ್ಲಿ ಬಲವಾಗಿಲ್ಲ ಎಂದು ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ

ರಾಜ್ಯ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಬ್ಯಾನರ್ಜಿ ತಿರಸ್ಕರಿಸಿದ್ದು, ತೃಣಮೂಲ ಪಕ್ಷವು ಮೂರನೇ ಎರಡರಷ್ಟು ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ. 2026 ರ ಮೊದಲಾರ್ಧದಲ್ಲಿ ಪಶ್ಚಿಮ ಬಂಗಾಳ ಚುನಾವಣೆಗೆ ಸಜ್ಜಾಗುವ ನಿರೀಕ್ಷೆಯಿದೆ.

“ದೆಹಲಿಯಲ್ಲಿ ಕಾಂಗ್ರೆಸ್ ಎಎಪಿಗೆ ಸಹಾಯ ಮಾಡಲಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. “ದೆಹಲಿಯಲ್ಲಿ [ಎಎಪಿ ಜೊತೆ] ಸೀಟು ಹೊಂದಾಣಿಕೆಯ ಸಮಯದಲ್ಲಿ ಕಾಂಗ್ರೆಸ್ ಹೆಚ್ಚು ಹೊಂದಿಕೊಳ್ಳಬೇಕಿತ್ತು. ಅದೇ ರೀತಿ, ಹರಿಯಾಣದಲ್ಲಿ, ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದರ ಪರಿಣಾಮ ಕಠಿಣವಾಗಿತ್ತು.” ಎಂದು ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈತ್ರಿ ಮಾಡಿಕೊಳ್ಳದರ ಪರಿಣಾಮವಾಗಿ, ಹರಿಯಾಣ ಮತ್ತು ದೆಹಲಿಯಲ್ಲಿ ಬಿಜೆಪಿ ಗೆದ್ದಿತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷದ ಇಂಡಿಯಾ ಮೈತ್ರಿಯ ಸದಸ್ಯರಾಗಿದ್ದರೂ ದೆಹಲಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದವು. 2024 ರ ಲೋಕಸಭಾ ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟವು ದೆಹಲಿಯ ಎಲ್ಲಾ ಏಳು ಸಂಸದೀಯ ಸ್ಥಾನಗಳನ್ನು ಸೋತಿದ್ದು, ಅಲ್ಲಿ ಬಿಜೆಪಿ ಗೆದ್ದುಕೊಂಡಿತ್ತು.

ಕಾಂಗ್ರೆಸ್ ಮತ್ತು ಎಡಪಕ್ಷಗಳು, ಕೆಲವು ಸಣ್ಣ ಪಕ್ಷಗಳೊಂದಿಗೆ, 2021 ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದವು. ಸುಮಾರು 10% ಮತಗಳನ್ನು ಪಡೆದಿದ್ದರೂ ಕೂಡಾ 294 ಸದಸ್ಯರ ವಿಧಾನಸಭೆಯಲ್ಲಿ ಈ ಮೈತ್ರಿಕೂಟ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ, ಕಾಂಗ್ರೆಸ್-ಎಡ ಮೈತ್ರಿಕೂಟ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಗೆದ್ದಿತು.

“ದೆಹಲಿಯಲ್ಲಿ, ಕಾಂಗ್ರೆಸ್ ಪಕ್ಷವೂ ಎಎಪಿಗೆ ಹೊಡೆತ ನೀಡಿರಬಹುದು. ಆದರೆ ಇಲ್ಲಿ ಅವರಿಗೆ ಅದು ಸಾಧ್ಯವಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಮತ್ತು ನಾವು ಮೂರನೇ ಎರಡರಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ… ಇಲ್ಲಿ ಯಾರೂ ಲೆಕ್ಕಕ್ಕಿಲ್ಲ, ಅವೆರು ನಮ್ಮ ಮತಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನಾವು 2026 ರಲ್ಲಿ ಸುಲಭವಾಗಿ ಗೆಲ್ಲುತ್ತೇವೆ.” ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಮಮತಾ ಅವರು ಹೇಳಿದ್ದಾರೆ.

ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಪ್ಪಿಸಲು ಸಮಾನ ಮನಸ್ಸಿನ ಪಕ್ಷಗಳು ತಿಳುವಳಿಕೆಯನ್ನು ಹೊಂದಿರಬೇಕು. ಇಲ್ಲದಿದ್ದರೆ, ವಿರೋಧ ಪಕ್ಷದ ಇಂಡಿಯಾ ಮೈತ್ರಿಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ತಡೆಯುವುದು ಕಷ್ಟವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂಓದಿ:  ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...