Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...