Homeಮುಖಪುಟಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

- Advertisement -
- Advertisement -

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಮನೆಯಿಂದ ಮಂಗಳವಾರ (ಫೆ.11) ಬೆಳಿಗ್ಗೆ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಂಬೆಮ್ ಅವರನ್ನು ಬಂದೂಕು ತೋರಿಸಿ ಅಪಹರಿಸಿದ್ದರು, ಬಳಿಕ ಬಿಡುಗಡೆ ಮಾಡಿದ್ದಾರೆ.

ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಲಾಬಾ ಯಂಬೆಮ್ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪೊಲೀಸರು ಕುಟುಂಬದ ಜೊತೆ ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ಫೆ.9) ಮಣಿಪುರ ಸಿಎಂ ಬಿರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪತ್ರಕರ್ತ ಯಂಬೆಮ್ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ್ದರು. ಅಲ್ಲಿಂದ ಹಿಂದಿರುಗಿದ ಕೆಲವೇ ಗಂಟೆಗಳಲ್ಲಿ ಯಂಬೆಮ್ ಅವರನ್ನು ಅಪಹರಿಸಲಾಗಿದೆ ಎಂದು ಅವರ ಹಿರಿಯ ಸಹೋದರ, ನಿವೃತ್ತ ಸೇನಾ ಮೇಜರ್ ಯಂಬೆಮ್ ಅಂಗಂಬಾ ಹೇಳಿದ್ದಾರೆ.

69 ವರ್ಷದ ಲಾಬಾ ಯಂಬೆಮ್ ಅವರು ರಾಷ್ಟ್ರೀಯ ಇಂಗ್ಲಿಷ್ ದಿನಪತ್ರಿಕೆ ಸ್ಟೇಟ್ಸ್‌ಮನ್‌ನ ವಿಶೇಷ ವರದಿಗಾರರಾಗಿದ್ದು, ಬೆಳಗಿನ ಜಾವ 3:30 ರ ಸುಮಾರಿಗೆ 15 ರಿಂದ 20 ಮಂದಿ ಬಂದೂಕುಧಾರಿಗಳ ಗುಂಪೊಂದು ಅವರನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿತ್ತು ಎಂದು ಅಂಗಂಬಾ ವಿವರಿಸಿದ್ದಾರೆ.

ಎರಡು ದಿನಗಳ ಹಿಂದೆ ಲಾಬಾ ಅವರ ಮನೆ ಮೇಲೆ ಬಂಡುಕೋರರು ಗುಂಡಿನ ದಾಳಿ ನಡೆಸಿ, ಅವರನ್ನು ಟೀಕಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ಡಿಲಿಟ್ ಮಾಡುವಂತೆ ಸೂಚಿಸಿದ್ದರು. ಅದಾಗಿ ಎರಡು ದಿನಗಳ ನಂತರ ಅವರ ಅಪಹರಣ ನಡೆದಿದೆ.

ಲಾಬಾ ಅವರು ಮಣಿಪುರ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯರಾಗಿದ್ದಾರೆ.

“ಬಹುಶಃ ಲಾಬಾ ಅವರನ್ನು ಅಪಹರಿಸಿದವರಿಗೆ ಅವರ ಹೇಳಿಕೆ ತೃಪ್ತಿಯಾಗದೇ ಇರಬಹುದು. ಆದರೆ, ಅವರು ಹೇಳಿದ್ದೆಲ್ಲವೂ ಪತ್ರಕರ್ತರ ನೈತಿಕತೆಗೆ ಅನುಗುಣವಾಗಿತ್ತು. ಪತ್ರಕರ್ತನಿಗೆ ಸಮಾಜ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಬರೆಯಲು ಮತ್ತು ಮಾತನಾಡಲು ಹಕ್ಕಿದೆ” ಎಂದು ಸಹೋದರ ಅಂಗಂಬಾ ಹೇಳಿದ್ದಾರೆ. ಕುಟುಂಬಸ್ಥರು ಎಫ್‌ಐಆರ್ ದಾಖಲಿಸಿದ ನಂತರ ಮಂಗಳವಾರ ಬೆಳಿಗ್ಗೆ ಪೊಲೀಸರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ಅಂಗಂಬಾ ತಿಳಿಸಿದ್ದಾರೆ.

” ಈ ಹಿಂದೆಯೂ ಲಾಬಾ ಅವರ ಮನೆಯ ಮೇಲೆ ದಾಳಿ ನಡೆದಿತ್ತು. ಮಣಿಪುರದ ಕೆಲವು ಶಕ್ತಿಗಳು ಪತ್ರಕರ್ತರು ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಕೆಲಸ ಮಾಡುವುದನ್ನು ಇಷ್ಟಪಡುವುದಿಲ್ಲ ಎಂದು ತೋರುತ್ತದೆ” ಎಂದು ಅಂಗಂಬಾ ಹೇಳಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಮಣಿಪುರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಮಧ್ಯೆ ಈ ಘಟನೆ ನಡೆದಿದೆ. ಸಂಘರ್ಷ ಪೀಡಿತ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಪ್ಪಿಸಲು ಮತ್ತು ಬಿರೇನ್ ಅವರನ್ನು ಬದಲಿಸಲು ಬಿಜೆಪಿ ಒಮ್ಮತದ ಅಭ್ಯರ್ಥಿಯನ್ನು ಹುಡುಕುತ್ತಿದೆ.

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...