Homeಮುಖಪುಟಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

ಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಸ್ರೇಲಿನಿಂದ ಪಶ್ಚಿಮ ದಂಡೆಯಲ್ಲಿ 40,000 ಫೆಲೆಸ್ತೀನಿಯನ್ನರ ಬಲವಂತದ ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...