Homeಮುಖಪುಟಪತ್ನಿಯ ಒಪ್ಪಿಗೆಯಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅಪರಾಧವಲ್ಲ: ಛತ್ತೀಸ್‌ಗಢ ಹೈಕೋರ್ಟ್

ಪತ್ನಿಯ ಒಪ್ಪಿಗೆಯಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅಪರಾಧವಲ್ಲ: ಛತ್ತೀಸ್‌ಗಢ ಹೈಕೋರ್ಟ್

- Advertisement -
- Advertisement -

‘ಒಪ್ಪಂದದೊಂದಿಗೆ ಅಥವಾ ಒಪ್ಪಿಗೆಯಿಲ್ಲದೆ ಪ್ರಾಪ್ತ ಪತ್ನಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ಗಂಡನ ಮೇಲೆ ಅತ್ಯಾಚಾರ ಅಥವಾ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಲಾಗುವುದಿಲ್ಲ’ ಎಂದು ಛತ್ತೀಸ್‌ಗಢ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಲೈಂಗಿಕ ಸಂಭೋಗ/ಅಸ್ವಾಭಾವಿಕ ಸಂಭೋಗದಲ್ಲಿ ಹೆಂಡತಿಯ ‘ಸಮ್ಮತಿ’ ಹೊಂದಿರುವುದು ಅತ್ಯಲ್ಪ ಎಂದು ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಅವರ ಏಕ ಪೀಠವು ಹೇಳಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ಹೀಗಾಗಿ, ಹೆಂಡತಿಯ ವಯಸ್ಸು 15 ವರ್ಷಕ್ಕಿಂತ ಕಡಿಮೆಯಿಲ್ಲದಿದ್ದರೆ, ಗಂಡ ತನ್ನ ಹೆಂಡತಿಯೊಂದಿಗೆ ನಡೆಸುವ ಯಾವುದೇ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಯನ್ನು ಈ ಸಂದರ್ಭಗಳಲ್ಲಿ ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಏಕೆಂದರೆ, ಅಸ್ವಾಭಾವಿಕ ಕೃತ್ಯಕ್ಕೆ ಹೆಂಡತಿಯ ಒಪ್ಪಿಗೆ ಇಲ್ಲದಿರುವುದು ಅದರ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ, ಮೇಲ್ಮನವಿದಾರನ ವಿರುದ್ಧ ಐಪಿಸಿಯ ಸೆಕ್ಷನ್ 376 ಮತ್ತು 377 ರ ಅಡಿಯಲ್ಲಿ ಅಪರಾಧವನ್ನು ಮಾಡಲಾಗುವುದಿಲ್ಲ ಎಂದು ಈ ನ್ಯಾಯಾಲಯವು ಪರಿಗಣಿಸುತ್ತದೆ” ಎಂದು ಪೀಠವು ವೆಬ್‌ಸೈಟ್‌ನ ಪ್ರಕಾರ ಹೇಳಿದೆ.

ಪ್ರಕರಣ ಹಿನ್ನೆಲೆ ಏನು?

11.12.2017 ರ ರಾತ್ರಿ ಒಬ್ಬ ಗಂಡನೊಬ್ಬ ತನ್ನ ಹೆಂಡತಿಯನ್ನು ಅವಳ ಇಚ್ಛೆಗೆ ವಿರುದ್ಧವಾಗಿ ಅಸ್ವಾಭಾವಿಕ ಲೈಂಗಿಕತೆಗೆ ಒಳಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕಾಯಿತು.

ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದಳು. ತನ್ನ ಜೊನೆ ಹೇಳಿಕೆಯಲ್ಲಿ, ಗಂಡ ತನ್ನ ಮೇಲೆ ಬಲವಂತದ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಅವರು ಹೇಳಿದರು. ನಂತರ, ವೈದ್ಯರು ಮಹಿಳೆ ಪೆರಿಟೋನಿಟಿಸ್ ಮತ್ತು ಗುದನಾಳದ ರಂಧ್ರದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎಂದು ನಿರ್ಧರಿಸಿದರು.

ಆಕೆ ಅಪ್ರಾಪ್ತೆ ಅಲ್ಲದಿದ್ದರೆ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳು ಅತ್ಯಾಚಾರವಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿತು. ಯಾವುದೇ ಅಸ್ವಾಭಾವಿಕ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಅದು ಹೇಳಿದೆ.

ವಿಚಾರಣಾ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲ್ಪಟ್ಟ ಪತಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಲಾಯಿತು.

ಇದನ್ನೂ ಓದಿ; ಮಹಾರಾಷ್ಟ್ರ | ಅತ್ಯಾಚಾರ ಎಸಗಿ ವಿಡಿಯೊ ವೈರಲ್ ಮಾಡಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...