Homeಅಂತರಾಷ್ಟ್ರೀಯಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ - ಇಸ್ರೇಲ್‌ ಪ್ರಧಾನಿ

ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

- Advertisement -
- Advertisement -

ಶನಿವಾರ ಮಧ್ಯಾಹ್ನದೊಳಗೆ ನಿಗದಿತ ಸಮಯಕ್ಕೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಪ್ಯಾಲೆಸ್ತೀನಿ ಹೋರಾಟಗಾರರ ಪ್ರತಿರೋಧ ಸಂಘಟನೆಯಾದ ಹಮಾಸ್‌ನೊಂದಿಗಿನ ಕದನ ವಿರಾಮ ಕೊನೆಗೊಳ್ಳುತ್ತದೆ ಮತ್ತು  ಗಾಜಾದಲ್ಲಿ ತಮ್ಮ ಮಿಲಿಟರಿ ದಾಳಿಯನ್ನು ಇಸ್ರೇಲ್ ಪಡೆಗಳು  ಪುನರಾರಂಭಿಸುತ್ತವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಹೇಳಿದ್ದಾರೆ. ಶನಿವಾರದೊಳಗೆ

“ಶನಿವಾರ ಮಧ್ಯಾಹ್ನದೊಳಗೆ ಹಮಾಸ್ ನಮ್ಮ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ, ಕದನ ವಿರಾಮ ಕೊನೆಗೊಳ್ಳುತ್ತದೆ. ಜೊತೆಗೆ ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಹಮಾಸ್ ಅನ್ನು ಅಂತಿಮವಾಗಿ ಸೋಲಿಸುವವರೆಗೆ ತೀವ್ರ ಹೋರಾಟಕ್ಕೆ ಇಳಿಯುತ್ತದೆ” ಎಂದು ಅವರು ದೇಶದ ಭದ್ರತಾ ಸಂಪುಟ ಸಭೆಯ ನಂತರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ವಿರಾಮವನ್ನು “ಇಸ್ರೇಲ್ ಉಲ್ಲಂಘನೆ” ಮಾಡಿದೆ ಎಂದು ಪ್ರತಿಪಾದಿಸಿ ಶನಿವಾರ ಯೋಜಿಸಲಾದ ಒತ್ತೆಯಾಳುಗಳ ಬಿಡುಗಡೆಯನ್ನು ಮುಂದಿನ ಸೂಚನೆ ಬರುವವರೆಗೆ ವಿಳಂಬಗೊಳಿಸುವುದಾಗಿ ಹಮಾಸ್ ಹೇಳಿದ ಒಂದು ದಿನದ ನಂತರ ಇಸ್ರೇಲ್ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. ಕದನ ವಿರಾಮವನ್ನು ಉಲ್ಲಂಘಿಸಿ ಗಾಜಾ ನಿವಾಸಿಗಳ ಮೇಲೆ ಇಸ್ರೇಲ್ ದಾಳಿ ಮಾಡಿದೆ ಎಂದು ಹಮಾಸ್ ಆರೋಪಿಸಿದೆ. ಶನಿವಾರದೊಳಗೆ

ಶನಿವಾರ ಮಧ್ಯಾಹ್ನದ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಯನ್ನು ಇಸ್ರೇಲ್ ಭದ್ರತಾ ಸಂಪುಟ ಸ್ವಾಗತಿಸಿದೆ ಎಂದು ನೆತನ್ಯಾಹು ಹೇಳಿದ್ದು, “ಮತ್ತು ಗಾಜಾದ ಭವಿಷ್ಯಕ್ಕಾಗಿ ಅಮೆರಿಕಾ ಅಧ್ಯಕ್ಷರ ಕ್ರಾಂತಿಕಾರಿ ದೃಷ್ಟಿಕೋನವನ್ನು ನಾವೆಲ್ಲರೂ ಸ್ವಾಗತಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಗಾಜಾ ಬಗ್ಗೆ ಟ್ರಂಪ್ ಹೇಳಿಕೆ

ಶನಿವಾರದೊಳಗೆ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಮಂಡಿಸುವುದಾಗಿ ಟ್ರಂಪ್ ಸೋಮವಾರ ಹೇಳಿದ್ದರು.

“ನನ್ನ ಮಟ್ಟಿಗೆ ಹೇಳುವುದಾದರೆ, ಶನಿವಾರ [ಫೆಬ್ರವರಿ 15] 12 ಗಂಟೆಯೊಳಗೆ ಎಲ್ಲಾ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಒಪ್ಪಂದವನ್ನು ರದ್ದು ಮಾಡಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ಒಪ್ಪಂದವನ್ನು ರದ್ದುಗೊಳಿಸಿ, ಎಲ್ಲಾ ಸ್ಪರ್ಧೆಗಳು ಮುಗಿದಿದ್ದು, ನರಕ ದರ್ಶನವಾಗಲಿ ಎಂದು ನಾನು ಹೇಳುತ್ತೇನೆ” ಎಂದು ಟ್ರಂಪ್ ಶ್ವೇತಭವನದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಗಾಜಾದಲ್ಲಿ ವಾಸಿಸುವ ಪ್ಯಾಲೆಸ್ತೀನಿಯನ್ನರನ್ನು ಶಾಶ್ವತವಾಗಿ ಸ್ವೀಕರಿಸುವ ಅಮೆರಿಕದ ಬೇಡಿಕೆಯನ್ನು ಈಜಿಪ್ಟ್ ಮತ್ತು ಜೋರ್ಡಾನ್‌ ವಿರೋಧಿಸಿದರೆ, ಅವರಿಗೆ ನೀಡುವ ಸಹಾಯವನ್ನು ಕಡಿತಗೊಳಿಸಲಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ. ಜೋರ್ಡಾನ್ ಮತ್ತು ಈಜಿಪ್ಟ್‌ನ ನಾಯಕರು ಗಾಜಾದಿಂದ ಪ್ಯಾಲೆಸ್ತೀನಿಯನ್ನರನ್ನು ಸ್ವೀಕರಿಸುವಂತೆ ಟ್ರಂಪ್ ಒತ್ತಾಯಿಸಿದ್ದರು ಮತ್ತು ಗಾಜಾವನ್ನು ತಾವು ಸಂಪೂರ್ಣವಾಗಿ ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದರು.

ಅದಾಗ್ಯೂ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಈ ಪ್ರಸ್ತಾವನೆಯನ್ನು ಜೋರ್ಡಾನ್ ಮತ್ತು ಈಜಿಫ್ಟ್‌, ಪಶ್ಚಿಮ ದಂಡೆ ಪ್ರದೇಶವನ್ನು ನಿಯಂತ್ರಿಸುವ ಪ್ಯಾಲೆಸ್ತೀನಿ ಪ್ರಾಧಿಕಾರ ಮತ್ತು ಹಮಾಸ್ ತಿರಸ್ಕರಿಸಿವೆ.

ಮಂಗಳವಾರ ಟ್ರಂಪ್ ಅವರನ್ನು ಭೇಟಿಯಾದ ನಂತರ ಪ್ರತಿಕ್ರಿಯಿಸಿದ ಜೋರ್ಡಾನ್ ರಾಜ ಅಬ್ದುಲ್ಲಾ II ಬಿನ್ ಅಲ್-ಹುಸೇನ್, ಗಾಜಾ ಮತ್ತು ಪಶ್ಚಿಮ ದಂಡೆಯಿಂದ ಪ್ಯಾಲೆಸ್ತೀನಿಯನ್ನರ ಸ್ಥಳಾಂತರದ ವಿರುದ್ಧ ಜೋರ್ಡಾನ್ ನಿಲುವು ಮತ್ತು “ಏಕೀಕೃತ ಅರಬ್ ನಿಲುವು” ಒಂದೇ ಆಗಿದೆ ಎಂದು ಪುನರುಚ್ಚರಿಸಿದ್ದೇನೆ ಎಂದು ಹೇಳಿದ್ದಾರೆ. “ಪ್ಯಾಲೆಸ್ತೀನಿಯನ್ನರನ್ನು ಸ್ಥಳಾಂತರಿಸದೆ ಗಾಜಾವನ್ನು ಪುನರ್ನಿರ್ಮಿಸುವುದು ಮತ್ತು ಭೀಕರ ಮಾನವೀಯ ಪರಿಸ್ಥಿತಿಯನ್ನು ಪರಿಹರಿಸುವುದು ಎಲ್ಲರಿಗೂ ಆದ್ಯತೆಯಾಗಿರಬೇಕು” ಎಂದು ಅವರು ಹೇಳಿದ್ದಾರೆ.

ಗಾಜಾ ಕದನ ವಿರಾಮದ ಮೊದಲ ಆರು ವಾರಗಳ ಹಂತವು ಜನವರಿ 19 ರಂದು ಪ್ರಾರಂಭವಾಯಿತು. ಇದು ಇಸ್ರೇಲ್‌ನಲ್ಲಿರುವ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ ಹಮಾಸ್ ಬಳಿಯಿರುವ 33 ಒತ್ತೆಯಾಳುಗಳ ವಿನಿಮಯವನ್ನು ಒಳಗೊಂಡಿದೆ. ಹಮಾಸ್ ಇಲ್ಲಿಯವರೆಗೆ 16 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್ 566 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿದೆ.

ಹಮಾಸ್ ದಕ್ಷಿಣ ಇಸ್ರೇಲ್‌ಗೆ ಆಕ್ರಮಣ ಮಾಡಿ 1,200 ಜನರನ್ನು ಕೊಂದು 200 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ತೆಗೆದುಕೊಂಡು ಹೋಗಿತ್ತು. ಇದರ ನಂತರ ಅಕ್ಟೋಬರ್ 7, 2023 ರಂದು ಗಾಜಾ ವಿರುದ್ಧ ಇಸ್ರೇಲ್‌ ಮಿಲಿಟರಿ ದಾಳಿ ಪ್ರಾರಂಭ ಮಾಡಿತ್ತು. ಅಂದಿನಿಂದ ಗಾಜಾದಲ್ಲಿ 17,400 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 47,700 ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಕೊಂದಿದೆ. ಈ ಸಂಘರ್ಷದಲ್ಲಿ ಸುಮಾರು 400 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ.

ಕೆಲವು ಒತ್ತೆಯಾಳುಗಳನ್ನು ನವೆಂಬರ್ 2023 ರಲ್ಲಿ ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಬಿಡುಗಡೆ ಮಾಡಲಾಯಿತು ಮತ್ತು ಕೆಲವರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಪ್ರಸ್ತುತ ಕದನ ವಿರಾಮದ ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದಲ್ಲಿನ ತಮ್ಮ ಪ್ರದೇಶಗಳಿಗೆ ಮರಳಲು ಅವಕಾಶ ನೀಡುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ. ಅಲ್ಲದೆ, ಇಸ್ರೇಲಿ ದಾಳಿಯಲ್ಲಿ ಗಾಜಾದಲ್ಲಿನ 92% ವಸತಿ ಘಟಕಗಳು ನಾಶವಾಗಿವೆ ಅಥವಾ ಹಾನಿಗೊಳಗಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂಓದಿ:  ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...