Homeಅಂತರಾಷ್ಟ್ರೀಯಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ - ಇಸ್ರೇಲ್‌ ಪ್ರಧಾನಿ

ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

- Advertisement -
- Advertisement -

ಶನಿವಾರ ಮಧ್ಯಾಹ್ನದೊಳಗೆ ನಿಗದಿತ ಸಮಯಕ್ಕೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಪ್ಯಾಲೆಸ್ತೀನಿ ಹೋರಾಟಗಾರರ ಪ್ರತಿರೋಧ ಸಂಘಟನೆಯಾದ ಹಮಾಸ್‌ನೊಂದಿಗಿನ ಕದನ ವಿರಾಮ ಕೊನೆಗೊಳ್ಳುತ್ತದೆ ಮತ್ತು  ಗಾಜಾದಲ್ಲಿ ತಮ್ಮ ಮಿಲಿಟರಿ ದಾಳಿಯನ್ನು ಇಸ್ರೇಲ್ ಪಡೆಗಳು  ಪುನರಾರಂಭಿಸುತ್ತವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಹೇಳಿದ್ದಾರೆ. ಶನಿವಾರದೊಳಗೆ

“ಶನಿವಾರ ಮಧ್ಯಾಹ್ನದೊಳಗೆ ಹಮಾಸ್ ನಮ್ಮ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ, ಕದನ ವಿರಾಮ ಕೊನೆಗೊಳ್ಳುತ್ತದೆ. ಜೊತೆಗೆ ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಹಮಾಸ್ ಅನ್ನು ಅಂತಿಮವಾಗಿ ಸೋಲಿಸುವವರೆಗೆ ತೀವ್ರ ಹೋರಾಟಕ್ಕೆ ಇಳಿಯುತ್ತದೆ” ಎಂದು ಅವರು ದೇಶದ ಭದ್ರತಾ ಸಂಪುಟ ಸಭೆಯ ನಂತರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ವಿರಾಮವನ್ನು “ಇಸ್ರೇಲ್ ಉಲ್ಲಂಘನೆ” ಮಾಡಿದೆ ಎಂದು ಪ್ರತಿಪಾದಿಸಿ ಶನಿವಾರ ಯೋಜಿಸಲಾದ ಒತ್ತೆಯಾಳುಗಳ ಬಿಡುಗಡೆಯನ್ನು ಮುಂದಿನ ಸೂಚನೆ ಬರುವವರೆಗೆ ವಿಳಂಬಗೊಳಿಸುವುದಾಗಿ ಹಮಾಸ್ ಹೇಳಿದ ಒಂದು ದಿನದ ನಂತರ ಇಸ್ರೇಲ್ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. ಕದನ ವಿರಾಮವನ್ನು ಉಲ್ಲಂಘಿಸಿ ಗಾಜಾ ನಿವಾಸಿಗಳ ಮೇಲೆ ಇಸ್ರೇಲ್ ದಾಳಿ ಮಾಡಿದೆ ಎಂದು ಹಮಾಸ್ ಆರೋಪಿಸಿದೆ. ಶನಿವಾರದೊಳಗೆ

ಶನಿವಾರ ಮಧ್ಯಾಹ್ನದ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಯನ್ನು ಇಸ್ರೇಲ್ ಭದ್ರತಾ ಸಂಪುಟ ಸ್ವಾಗತಿಸಿದೆ ಎಂದು ನೆತನ್ಯಾಹು ಹೇಳಿದ್ದು, “ಮತ್ತು ಗಾಜಾದ ಭವಿಷ್ಯಕ್ಕಾಗಿ ಅಮೆರಿಕಾ ಅಧ್ಯಕ್ಷರ ಕ್ರಾಂತಿಕಾರಿ ದೃಷ್ಟಿಕೋನವನ್ನು ನಾವೆಲ್ಲರೂ ಸ್ವಾಗತಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಗಾಜಾ ಬಗ್ಗೆ ಟ್ರಂಪ್ ಹೇಳಿಕೆ

ಶನಿವಾರದೊಳಗೆ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಮಂಡಿಸುವುದಾಗಿ ಟ್ರಂಪ್ ಸೋಮವಾರ ಹೇಳಿದ್ದರು.

“ನನ್ನ ಮಟ್ಟಿಗೆ ಹೇಳುವುದಾದರೆ, ಶನಿವಾರ [ಫೆಬ್ರವರಿ 15] 12 ಗಂಟೆಯೊಳಗೆ ಎಲ್ಲಾ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಒಪ್ಪಂದವನ್ನು ರದ್ದು ಮಾಡಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ಒಪ್ಪಂದವನ್ನು ರದ್ದುಗೊಳಿಸಿ, ಎಲ್ಲಾ ಸ್ಪರ್ಧೆಗಳು ಮುಗಿದಿದ್ದು, ನರಕ ದರ್ಶನವಾಗಲಿ ಎಂದು ನಾನು ಹೇಳುತ್ತೇನೆ” ಎಂದು ಟ್ರಂಪ್ ಶ್ವೇತಭವನದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಗಾಜಾದಲ್ಲಿ ವಾಸಿಸುವ ಪ್ಯಾಲೆಸ್ತೀನಿಯನ್ನರನ್ನು ಶಾಶ್ವತವಾಗಿ ಸ್ವೀಕರಿಸುವ ಅಮೆರಿಕದ ಬೇಡಿಕೆಯನ್ನು ಈಜಿಪ್ಟ್ ಮತ್ತು ಜೋರ್ಡಾನ್‌ ವಿರೋಧಿಸಿದರೆ, ಅವರಿಗೆ ನೀಡುವ ಸಹಾಯವನ್ನು ಕಡಿತಗೊಳಿಸಲಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ. ಜೋರ್ಡಾನ್ ಮತ್ತು ಈಜಿಪ್ಟ್‌ನ ನಾಯಕರು ಗಾಜಾದಿಂದ ಪ್ಯಾಲೆಸ್ತೀನಿಯನ್ನರನ್ನು ಸ್ವೀಕರಿಸುವಂತೆ ಟ್ರಂಪ್ ಒತ್ತಾಯಿಸಿದ್ದರು ಮತ್ತು ಗಾಜಾವನ್ನು ತಾವು ಸಂಪೂರ್ಣವಾಗಿ ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದರು.

ಅದಾಗ್ಯೂ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಈ ಪ್ರಸ್ತಾವನೆಯನ್ನು ಜೋರ್ಡಾನ್ ಮತ್ತು ಈಜಿಫ್ಟ್‌, ಪಶ್ಚಿಮ ದಂಡೆ ಪ್ರದೇಶವನ್ನು ನಿಯಂತ್ರಿಸುವ ಪ್ಯಾಲೆಸ್ತೀನಿ ಪ್ರಾಧಿಕಾರ ಮತ್ತು ಹಮಾಸ್ ತಿರಸ್ಕರಿಸಿವೆ.

ಮಂಗಳವಾರ ಟ್ರಂಪ್ ಅವರನ್ನು ಭೇಟಿಯಾದ ನಂತರ ಪ್ರತಿಕ್ರಿಯಿಸಿದ ಜೋರ್ಡಾನ್ ರಾಜ ಅಬ್ದುಲ್ಲಾ II ಬಿನ್ ಅಲ್-ಹುಸೇನ್, ಗಾಜಾ ಮತ್ತು ಪಶ್ಚಿಮ ದಂಡೆಯಿಂದ ಪ್ಯಾಲೆಸ್ತೀನಿಯನ್ನರ ಸ್ಥಳಾಂತರದ ವಿರುದ್ಧ ಜೋರ್ಡಾನ್ ನಿಲುವು ಮತ್ತು “ಏಕೀಕೃತ ಅರಬ್ ನಿಲುವು” ಒಂದೇ ಆಗಿದೆ ಎಂದು ಪುನರುಚ್ಚರಿಸಿದ್ದೇನೆ ಎಂದು ಹೇಳಿದ್ದಾರೆ. “ಪ್ಯಾಲೆಸ್ತೀನಿಯನ್ನರನ್ನು ಸ್ಥಳಾಂತರಿಸದೆ ಗಾಜಾವನ್ನು ಪುನರ್ನಿರ್ಮಿಸುವುದು ಮತ್ತು ಭೀಕರ ಮಾನವೀಯ ಪರಿಸ್ಥಿತಿಯನ್ನು ಪರಿಹರಿಸುವುದು ಎಲ್ಲರಿಗೂ ಆದ್ಯತೆಯಾಗಿರಬೇಕು” ಎಂದು ಅವರು ಹೇಳಿದ್ದಾರೆ.

ಗಾಜಾ ಕದನ ವಿರಾಮದ ಮೊದಲ ಆರು ವಾರಗಳ ಹಂತವು ಜನವರಿ 19 ರಂದು ಪ್ರಾರಂಭವಾಯಿತು. ಇದು ಇಸ್ರೇಲ್‌ನಲ್ಲಿರುವ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ ಹಮಾಸ್ ಬಳಿಯಿರುವ 33 ಒತ್ತೆಯಾಳುಗಳ ವಿನಿಮಯವನ್ನು ಒಳಗೊಂಡಿದೆ. ಹಮಾಸ್ ಇಲ್ಲಿಯವರೆಗೆ 16 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್ 566 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿದೆ.

ಹಮಾಸ್ ದಕ್ಷಿಣ ಇಸ್ರೇಲ್‌ಗೆ ಆಕ್ರಮಣ ಮಾಡಿ 1,200 ಜನರನ್ನು ಕೊಂದು 200 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ತೆಗೆದುಕೊಂಡು ಹೋಗಿತ್ತು. ಇದರ ನಂತರ ಅಕ್ಟೋಬರ್ 7, 2023 ರಂದು ಗಾಜಾ ವಿರುದ್ಧ ಇಸ್ರೇಲ್‌ ಮಿಲಿಟರಿ ದಾಳಿ ಪ್ರಾರಂಭ ಮಾಡಿತ್ತು. ಅಂದಿನಿಂದ ಗಾಜಾದಲ್ಲಿ 17,400 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 47,700 ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಕೊಂದಿದೆ. ಈ ಸಂಘರ್ಷದಲ್ಲಿ ಸುಮಾರು 400 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ.

ಕೆಲವು ಒತ್ತೆಯಾಳುಗಳನ್ನು ನವೆಂಬರ್ 2023 ರಲ್ಲಿ ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಬಿಡುಗಡೆ ಮಾಡಲಾಯಿತು ಮತ್ತು ಕೆಲವರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಪ್ರಸ್ತುತ ಕದನ ವಿರಾಮದ ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದಲ್ಲಿನ ತಮ್ಮ ಪ್ರದೇಶಗಳಿಗೆ ಮರಳಲು ಅವಕಾಶ ನೀಡುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ. ಅಲ್ಲದೆ, ಇಸ್ರೇಲಿ ದಾಳಿಯಲ್ಲಿ ಗಾಜಾದಲ್ಲಿನ 92% ವಸತಿ ಘಟಕಗಳು ನಾಶವಾಗಿವೆ ಅಥವಾ ಹಾನಿಗೊಳಗಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂಓದಿ:  ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...