Homeಮುಖಪುಟ"ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ"? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ...

“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದರ ಹಿಂದೆ ಏನಾದರು ‘ಸಾರ್ವಜನಿಕ ಹಿತಾಸಕ್ತಿ’ ಇದೆಯಾ? ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿಯವರು 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಪದವಿ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಆರ್‌ಟಿಐ ಕಾರ್ಯಕರ್ತ ದಾಖಲೆ ಕೇಳಿದ್ದಕ್ಕೆ ಹೈಕೋರ್ಟ್ ಮೇಲಿನಂತೆ ಪ್ರಶ್ನಿಸಿದೆ ಎಂದು ವರದಿ ಹೇಳಿದೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಅರ್ಹತೆ ಕುರಿತು ಆರ್‌ಟಿಐ ಮೂಲಕ ಮಾಹಿತಿ ಒದಗಿಸುವಂತೆ ದೆಹಲಿ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿದೆ. ಇದನ್ನು ಪ್ರಶ್ನಿಸಿ 2017ರಲ್ಲಿ ದೆಹಲಿ ವಿಶ್ವವಿದ್ಯಾನಿಲಯ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಎ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್‌ (ಎಂ.ಎ) ಪದವಿ ಪಡೆದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಆದರೆ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಕೆಲವರು ಮೋದಿ ಪದವಿ ಪಡೆದಿದ್ದಾರೆ ಎನ್ನುವುದು ಕಟ್ಟು ಕಥೆ ಎಂದಿದ್ದಾರೆ.

ಮಂಗಳವಾರ (ಫೆ.11) ದೆಹಲಿ ವಿಶ್ವವಿದ್ಯಾನಿಲಯದ ಪರವಾಗಿ ಹೈಕೋರ್ಟ್‌ಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest)ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರಿದು, “ವಿಶ್ವ ವಿದ್ಯಾನಿಲಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳ ಪದವಿ ಮತ್ತು ಅಂಕ ಪಟ್ಟಿಗಳ ವಿವರಗಳು ಬಹಳ ‘ವಿಶ್ವಾಸಾರ್ಹ ರೀತಿಯಲ್ಲಿ’ ಇದೆ. ಅವೆಲ್ಲವೂ ವಿದ್ಯಾರ್ಥಿಗಳ ‘ವೈಯಕ್ತಿಕ ಗೌಪ್ಯ’ ಮಾಹಿತಿಗಳು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂಜಯ್ ಹೆಗ್ಡೆ, ಶೈಕ್ಷಣಿಕ ವಿವರಗಳು ಸಾರ್ವಜನಿಕ ಮಾಹಿತಿಯಾಗಿದ್ದು, ಅವುಗಳನ್ನು ನೋಟಿಸ್‌ ಬೋರ್ಡ್‌ಗಳು ಮತ್ತು ಪತ್ರಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಂದುವರಿದು, ಸಾರ್ವಜನಿಕ ಹಿತಾಸಕ್ತಿ ಯಾವಾಗಲು ಬಹಿರಂಗಪಡಿಸುವಿಕೆಯ ಕಡೆ ಇರುತ್ತದೆಯೇ ಹೊರತು, ಮುಚ್ಚಿಡುವುದರ ಕಡೆ ಅಲ್ಲ. ಚುನಾಯಿತ ಜನ ಪ್ರತಿನಿಧಿಗಳ ಆಸ್ತಿ, ಕುಟುಂಬದ ಹಿನ್ನೆಲೆ ಇತ್ಯಾದಿ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಒಬ್ಬ ಜನ ಪ್ರತಿನಿಧಿಯ ಶೈಕ್ಷಣಿಕ ಅರ್ಹತೆ ವಿಚಾರ ಬಂದಾಗ ಸಾರ್ವಜನಿಕ ಪ್ರಾಧಿಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ವಾದ-ಪ್ರತಿವಾದ ಅಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ನಿಗದಿ ಮಾಡಿದೆ.

ಪ್ರಕರಣದ ಹಿನ್ನೆಲೆ :

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಕುಮಾರ್ ಎಂಬವರು, 1978ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪ್ರಧಾನಿ ಮೋದಿ ಬಿಎ ಪದವಿ ಪಡೆದಿದ್ದಾರೆ ಎನ್ನಲಾದ ಸಂದರ್ಭದ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಅಂಕಗಳು ಮತ್ತು ಅವರು ಪದವಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿದ್ದಾರೆಯೇ ಅಥವಾ ಅನುತ್ತೀರ್ಣರಾಗಿದ್ದಾರೆಯೇ? ಎಂಬ ವಿವರಗಳನ್ನು ಕೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ ಆರ್‌ಟಿಐ ಕಾರ್ಯಕರ್ತ ನೀರಜ್ ಕುಮಾರ್ ಮೂರನೇ ವ್ಯಕ್ತಿ (ವಿಷಯಕ್ಕೆ ಸಂಬಂಧಿಸದ) ಎಂಬ ಕಾರಣ ನೀಡಿ, ಮೋದಿಯವರ ಪದವಿ ಕುರಿತು ಮಾಹಿತಿ ನೀಡಲು ನಿರಾಕರಿಸಿತ್ತು. ಇದರ ವಿರುದ್ದ ನೀರಜ್ ಕುಮಾರ್ ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು.

2016ರಲ್ಲಿ ಕೇಂದ್ರ ಮಾಹಿತಿ ಆಯೋಗವು ಆರ್‌ಟಿಐ ಕಾರ್ಯಕರ್ತನಿಗೆ ಮಾಹಿತಿ ಒದಗಿಸುವಂತೆ ದೆಹಲಿ ವಿವಿಗೆ ಸೂಚಿಸಿತ್ತು. ದೆಹಲಿ ವಿಶ್ವವಿದ್ಯಾನಿಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಅದರ ಪದವಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಸ್ಥೆಯ ರಿಜಿಸ್ಟರ್‌ನಲ್ಲಿ ಲಭ್ಯವಿದೆ. ಅದು ಸಾರ್ವಜನಿಕ ದಾಖಲೆಯಾಗಿದೆ ಎಂದು ಹೇಳಿತ್ತು.

ಆದರೆ, ದೆಹಲಿ ವಿವಿ ಮಾಹಿತಿ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಟಿಐ ಮೂಲಕ ಎಲ್ಲಾ ವಿದ್ಯಾರ್ಥಿಗಳ ರೋಲ್ ನಂಬರ್‌ಗಳು, ಹೆಸರುಗಳು ಮತ್ತು ಅಂಕಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ ಎಂದು ಹೇಳಿಕೊಂಡಿದೆ.

370ನೇ ವಿಧಿ ರದ್ದತಿಗೆ ಮೆಹಬೂಬಾ ಮುಫ್ತಿ, ಅವರ ತಂದೆ ಕಾರಣ: ಎನ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...