Homeಕರ್ನಾಟಕಆನೇಕಲ್| ಕೆರೆಯಲ್ಲಿ ಮುಳುಗಿ ಯುವತಿ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ಆನೇಕಲ್| ಕೆರೆಯಲ್ಲಿ ಮುಳುಗಿ ಯುವತಿ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

- Advertisement -
- Advertisement -

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೋರ್ವಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಯುವತಿ ಹಾಗೂ ಆಕೆಯ ತಂದೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಕೆರೆಗೆ ಉರುಳಿದೆ. ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದಾರೆ. ಆದರೆ ಮಗಳು ಸಹನಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಅವರು  ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಹಾಜರಾಗಿ ತಿಳಿಸಿದ್ದಾರೆ.

ತಂದೆ ರಾಮಮೂರ್ತಿ ಕೆರೆಯಲ್ಲಿ ಮುಳುಗುತ್ತಿದ್ದ ಮಗಳನ್ನು ರಕ್ಷಿಸದೆ, ದೂರು ನೀಡಲು ಠಾಣೆಗೆ ಆಗಮಿಸಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆದರೆ, ಆಕೆಯ ಪ್ರಿಯಕರ ನಿತಿನ್ ಇದೊಂದು ಮರ್ಯಾದಾ ಹತ್ಯೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಒಂದು ವರ್ಷದಿಂದ ನಿತಿನ್ ಮತ್ತು 21 ವರ್ಷದ ಸಹನಾ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ದಿನದ ಹಿಂದೆ ಪೋಷಕರಿಗೆ ಮಗಳ ಪ್ರೀತಿಯ ವಿಚಾರ ಗೊತ್ತಾಗಿದೆ. ಅಂದು ರಾತ್ರಿ ಪ್ರಿಯಕರ ನಿತಿನ್​ಗೆ ಕರೆ ಮಾಡಿದ್ದ ಸಹನಾ ತಂದೆ, ಬೆಳಗ್ಗೆ ಮಾತುಕತೆಗೆ ಬರುವಂತೆ ತಿಳಿಸಿದ್ದಾರೆ. ಸಹನಾ ತಂದೆ ಸ್ನೇಹಿತನ ಮನೆಯಲ್ಲಿ ನ್ಯಾಯ ಪಂಚಾಯಿತಿ ನಡೆದಿದೆ. ಈ ವೇಳೆ ಪುತ್ರಿ ಮೇಲೆ ರಾಮಮೂರ್ತಿ ಹಲ್ಲೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಈ ಪ್ರೀತಿಗೆ ಒಪ್ಪುವುದಿಲ್ಲ ಎಂದು ಅವರು ಖಡಕ್‌ ಆಗಿ ತಿಳಿಸಿದ್ದಾರೆ.

ನಿತಿನ್‌ ತಾಯಿ ಮನವಿ ಮಾಡಿದರೂ ಯುವತಿಯ ತಂದೆ ಮದುವೆಗೆ ಒಪ್ಪಿಲ್ಲ. ಅಂತಿಮವಾಗಿ ಎರಡು ದಿನ ಸಮಯ ಕೇಳಿದ್ದಾರೆ. ಇಂದು ಮಗಳನ್ನು ರಾಮಮೂರ್ತಿ ಬೈಕ್‌ ನಲ್ಲಿ ಕರೆದೊಯ್ದಿದ್ದು, ಮಾರ್ಗಮಧ್ಯೆ ಪುತ್ರಿ ಸಹನಾರನ್ನು ರಾಮಮೂರ್ತಿ ಕೆರೆಗೆ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೂರಿನ ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸದ್ಯ ಯುವತಿ ಸಾವಿನ ಸುತ್ತ ಅನುಮಾನ ಕಾಡುತ್ತಿದೆ. ಆಕಸ್ಮಿಕವಾಗಿ ಕೆರೆಗೆ ಬಿದ್ದರೇ ಅಥವಾ ಅಪ್ಪನೇ ಕೆರೆಗೆ ತಳ್ಳಿದರೇ ಎಂಬ ಅನುಮಾನ ಕಾಡುತ್ತಿದೆ. ನಿತಿನ್​ನನ್ನೇ ಮದುವೆಯಾಗುವುದಾಗಿ ಯುವತಿ ಹಠ ಹಿಡಿದಿದ್ದಳು. ಆದರೆ, ಪೋಷಕರು ಅಕ್ಕನ ಮಗನ ಜೊತೆ ವಿವಾಹಕ್ಕೆ ಮುಂದಾಗಿದ್ದರು. ಇದೇ ವಿಚಾರಕ್ಕೆ ಅಪ್ಪ ಮಗಳ ನಡುವೆ ಜೋರು ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಒದಿ; ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...