Homeಕರ್ನಾಟಕಕೋವಿಡ್‌ ಹಗರಣ : ಹೈಕೋರ್ಟ್‌ಗೆ ನ್ಯಾ.ಕುನ್ಹಾ ವರದಿ ಸಲ್ಲಿಕೆ

ಕೋವಿಡ್‌ ಹಗರಣ : ಹೈಕೋರ್ಟ್‌ಗೆ ನ್ಯಾ.ಕುನ್ಹಾ ವರದಿ ಸಲ್ಲಿಕೆ

- Advertisement -
- Advertisement -

‘ಕೋವಿಡ್-19ರ ಎರಡನೇ ಅಲೆಯ ಸಂದರ್ಭದಲ್ಲಿ, ‘ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್’ ಮತ್ತು ‘ಎಲ್‌ಎಜೆ ಎಕ್ಸ್‌ಪೋರ್ಟ್ಸ್‌’ ಲಿಮಿಟೆಡ್‌ ಕಂಪನಿಗಳು ಪಿಪಿಇ ಕಿಟ್‌ಗಳನ್ನು ದುಬಾರಿ ಬೆಲೆಗೆ ಪೂರೈಕೆ ಮಾಡಿವೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ಅವರ ಏಕಸದಸ್ಯ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಕೋವಿಡ್‌ ಸಂದರ್ಭದಲ್ಲಿ ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿರುವುದಕ್ಕೆ 76,51,35,000 ರೂಪಾಯಿ ಮೊತ್ತವನ್ನು ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್‌ಎಜೆ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ಗೆ ಪಾವತಿಸಲು ನಿರ್ದೇಶಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ವಿಭಾಗೀಯ ಪೀಠ ಮಂಗಳವಾರ (ಫೆ.11) ನಡೆಸಿದೆ.

ಮೇಲ್ಮನವಿ ತಿದ್ದುಪಡಿ ಮಾಡಲು ಹಾಗೂ ಕೋವಿಡ್‌ ಹಗರಣದ ತನಿಖಾ ವರದಿ ಒಳಗೊಂಡು ಹೆಚ್ಚುವರಿ ದಾಖಲೆ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿರುವ ಮಧ್ಯಂತರ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯ ಪ್ರತಿಯನ್ನು ನಾಳೆಯೊಳಗೆ ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್ಎಜೆ ಎಕ್ಸ್‌ಪೋರ್ಟ್ಸ್‌ಗೆ ನೀಡಬೇಕು. ಇದನ್ನು ಆಧರಿಸಿ ಮುಂದಿನ ವಿಚಾರಣೆ ವೇಳೆಗೆ ಪ್ರತಿವಾದಿ ಕಂಪನಿ ಪರ ವಕೀಲರು ವಾದಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ ಎಂದು ವರದಿ ತಿಳಿಸಿದೆ.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ರೊಬೆನ್‌ ಜಾಕಬ್‌ ಅವರು ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ಪ್ರತಿ ಪಿಪಿಇ ಕಿಟ್‌ಗೆ 1,312 ರೂಪಾಯಿ ದರ ವಿಧಿಸಲಾಗಿತ್ತು. ಎರಡನೇ ಅವಧಿಯ ವೇಳೆಗೆ ಪಿಪಿಇ ಕಿಟ್‌ ಬೆಲೆ ಮಾರುಕಟ್ಟೆಯಲ್ಲಿ 400 ರೂಪಾಯಿ ಇದ್ದರೂ 1,312 ರೂಪಾಯಿ ದರ ವಿಧಿಸಲಾಗಿದೆ. ಇದರ ಪ್ರಕಾರ ಪ್ರತಿವಾದಿ ಕಂಪನಿಗೆ 23 ಕೋಟಿ ಪಾವತಿಸಬೇಕಿದೆ. ಆದರೆ, ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್‌ಎಜೆ ಎಕ್ಸ್‌ಪೋರ್ಟ್ಸ್‌ 76 ಕೋಟಿ ರೂಪಾಯಿ ಶುಲ್ಕ ವಿಧಿಸುವ ಮೂಲಕ ಅಕ್ರಮ ಎಸಗಿದ್ದಾರೆ ಎಂದು ವಾದಿಸಿದ್ದಾರೆ.

ಪ್ರತಿ ಪಿಪಿಇ ಕಿಟ್‌ಗೆ 400 ರೂಪಾಯಿ ಮೂಲ ಬೆಲೆ ಇದ್ದರೂ ಅದನ್ನು 1,312 ರೂಪಾಯಿಗೆ ಪೂರೈಸಲಾಗಿದೆ. ಈ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಗರಣದ ತನಿಖೆಗೆ ರಚಿಸಲಾದ ನ್ಯಾಯಮೂರ್ತಿ ಕುನ್ಹಾ ಅವರ ನೇತೃತ್ವದ ಆಯೋಗವು ವರದಿ ನೀಡಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್‌ 3ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...