Homeದಲಿತ್ ಫೈಲ್ಸ್ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

- Advertisement -
- Advertisement -

ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ಸ್ಥಳೀಯ ಗುತ್ತಿಗೆದಾರರು ಕರೆದೊಯ್ದಿದ್ದ ನೈಋತ್ಯ ಮಧ್ಯಪ್ರದೇಶದ ಬುಡಕಟ್ಟು ಜನಾಂಗದ 17 ಜನರನ್ನು ಮಹಾರಾಷ್ಟ್ರದ ಧರಾಶಿವ್ (ಉಸ್ಮಾನಾಬಾದ್) ಜಿಲ್ಲೆಯಲ್ಲಿ ಅವರಿಗೆ ಕೂಲಿಯೂ ಕೊಡದೆ, ಕೂಡಿ ಹಾಕಿ ಜೀತದಾಳುಗಳನ್ನಾಗಿ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಪೊಲೀಸ್ ದೂರಿನ ನಂತರ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಯಿತು ಎಂದು ವರದಿಯಾಗಿದೆ. ಮಹಾರಾಷ್ಟ್ರ

ಕೂಡಿ ಹಾಕಲ್ಪಟ್ಟ 17 ಜನರಲ್ಲಿ ಐವರು ಮಹಿಳೆಯರು ಮತ್ತು ಏಳು ಮಕ್ಕಳು ಇದ್ದರು ಎಂದು TNI ವರದಿ ಮಾಡಿದೆ. ಬುಡಕಟ್ಟು ಸಮುದಾಯದ ಈ ಕಾರ್ಮಿಕರು ನಾಲ್ಕು ತಿಂಗಳ ಹಿಂದೆ ಜಲಗಾಂವ್ (ಮಹಾರಾಷ್ಟ್ರ) ಮೂಲದ ಗುತ್ತಿಗೆದಾರ ದೇವಸಿಂಗ್ ಎಂಬುವವರ ಮೂಲಕ ಮಹಾರಾಷ್ಟ್ರದ ಧಾರಾಶಿವ್ (ಉಸ್ಮಾನಾಬಾದ್) ಜಿಲ್ಲೆಯ ಕಲಾಂಬ್ ತಹಸಿಲ್‌ನ ಗಂಭೀರ್ವಾಡಿ ಗ್ರಾಮದ ಶ್ರೀಮಂತ ರೈತನ ಕಬ್ಬಿನ ಹೊಲಗಳಲ್ಲಿ ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ತೆರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಗುತ್ತಿಗೆದಾರ ದೇವಸಿಂಗ್ ಕಾರ್ಮಿಕರನ್ನು ಧರಾಶಿವ್ ಜಿಲ್ಲೆಯಲ್ಲಿ ಬಿಟ್ಟು ಪರಾರಿಯಾಗಿದ್ದನು. ಗುತ್ತಿಗೆದಾರ ಪರಾರಿಯಾದ ಕಾರಣಕ್ಕೆ ಬುಡಕಟ್ಟು ಕಾರ್ಮಿಕರು ಅಲ್ಲಿಯೇ ಸಿಲುಕಿಕೊಂಡಿದ್ದು, ಅವರಿಗೆ ಸರಿಯಾದ ಆಹಾರ ಕೂಡಾ ಲಭ್ಯವಾಗಿಲ್ಲ ಎಂದು ಆರೋಪಿಸಲಾಗಿದೆ.

ಆಹಾರದ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಬುಡಕಟ್ಟು ಕಾರ್ಮಿಕರು ಕಬ್ಬಿನ ತೋಟದ ಮಾಲೀಕರ ಬಳಿ ತಮ್ಮ ವೇತನವನ್ನು ಪಾವತಿಸುವಂತೆ ಕೇಳಿಕೊಂಡಿದ್ದರು. ಆದರೆ ಈ ವೇಳೆ ಕಬ್ಬಿನ ತೋಟದ ಮಾಲಿಕ ಅವರಿಗೆ ಭರವಸೆ ನೀಡಿದ್ದ ವೇತನ ನೀಡುವ ಬದಲು, ಅವರ ಮೇಲೆಯೆ ಹಲ್ಲೆ ನಡೆಸಿದ್ದರು. ಮಹಾರಾಷ್ಟ್ರ

ಹಲ್ಲೆ ನಡೆಸಿದ್ದಲ್ಲದೆ, ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಹೊರಗಿನ ಪ್ರಪಂಚದೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಲು ಅವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಒಪ್ಪಿದ ವೇತನವನ್ನು ಪಾವತಿಸದೆ ಅವರನ್ನು ಬಂಧಿಸಿ ಜಮೀನಿನಲ್ಲಿ ಕೆಲಸ ಮಾಡಲು ಒತ್ತಾಯಿಸಲಾಯಿತು ಎಂದು ಎಂದು ಹೇಳಲಾಗಿದೆ.

ಕಳೆದ ವಾರ ಜನವರಿಯಲ್ಲಿ ಬಂಬಾಡಾ ಗ್ರಾಮದ (ಬುಡಕಟ್ಟು ಕಾರ್ಮಿಕರು ಮಧ್ಯಪ್ರದೇಶದಲ್ಲಿ ವಾಸಿಸುತ್ತಿದ್ದ ಗ್ರಾಮ) ನಿವಾಸಿಯೊಬ್ಬರು ಬುರ್ಹಾನ್‌ಪುರ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ದೂರಿನ ಮೇರೆಗೆ, ಬುರ್ಹಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಾಟಿದಾರ್ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಗೆ ಮೀಸಲಾದ ಪೊಲೀಸ್ ತಂಡವನ್ನು ಕಾರ್ಮಿಕರಿದ್ದ ತೋಟಕ್ಕೆ ಕಳುಹಿಸಿದ್ದರು. ಹಾಗಾಗಿ ಮಂಗಳವಾರ ಅಲ್ಲಿ ಬಂಧಿತರಾಗಿದ್ದ 17 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ:  ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...