Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...