Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...