Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...