Homeಮುಖಪುಟರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು - ಸುಪ್ರೀಂಕೋರ್ಟ್

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

- Advertisement -
- Advertisement -

ರೋಹಿಂಗ್ಯಾ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಸರ್ಕಾರೇತರ ಸಂಸ್ಥೆಯಾದ ರೋಹಿಂಗ್ಯಾ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್‌ಕೆ ಸಿಂಗ್ ಅವರ ಪೀಠ ಈ ರೀತಿ ಪ್ರತಿಕ್ರಿಯಿಸಿದೆ. ರೋಹಿಂಗ್ಯಾ ಮಕ್ಕಳ

ರೋಹಿಂಗ್ಯಾ ನಿರಾಶ್ರಿತರ ಕುಟುಂಬಗಳಿಗೆ ಅವರ ಪೌರತ್ವ ಸ್ಥಾನಮಾನವನ್ನು ಗಣನೆಗೆ ತೆಗೆದುಕೊಳ್ಳದೆ, ಆಧಾರ್ ಸಂಖ್ಯೆಗಳನ್ನು ಹೊಂದಿರಬೇಕೆಂದು ಒತ್ತಾಯಿಸದೆ, ಸರ್ಕಾರಿ ಸೌಲಭ್ಯಗಳು ಮತ್ತು ಶಾಲಾ ಪ್ರವೇಶವನ್ನು ನೀಡಬೇಕು ಎಂದು ಸಂಘಟನೆ ಅರ್ಜಿಯಲ್ಲಿ ಕೋರಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಶಿಕ್ಷಣದ ವಿಷಯದಲ್ಲಿ, ಯಾವುದೇ ತಾರತಮ್ಯ ಇರುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ. ಅವರು ಎಲ್ಲಿದ್ದಾರೆಂದು ನಾವು ತಿಳಿದುಕೊಳ್ಳಬೇಕು ಮತ್ತು ನಂತರ ಅದನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಅವರು ಎಲ್ಲಿ ಮತ್ತು ಅವರು ಹೇಗೆ ವಾಸಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ನಮಗೆ ತೃಪ್ತಿಯಾಗಬೇಕು ಎಂದು ನ್ಯಾಯಾಲಯ ಹೇಳಿದೆ. ರೋಹಿಂಗ್ಯಾ ಮಕ್ಕಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿದ್ಯಾರ್ಥಿಗಳ ಬಗ್ಗೆ ನಮಗೆ ಹೇಳಬೇಡಿ. ಪೋಷಕರ ಬಗ್ಗೆ ನಮಗೆ ಹೇಳಿ. ಅವರು ಎಲ್ಲಿ ವಾಸಿಸುತ್ತಿದ್ದಾರೆ… ಮನೆ ಸಂಖ್ಯೆ, ಕುಟುಂಬಗಳ ಪಟ್ಟಿ, ಅವರು ಎಲ್ಲಿದ್ದಾರೆ ಎಂಬುದರ ಕೆಲವು ಪುರಾವೆಗಳನ್ನು ನಮಗೆ ತಿಳಿಸಿ.” ಎಂದು ನ್ಯಾಯಾಲಯವು ಸಂಸ್ಥೆಗೆ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕಾಲಿನ್ ಗೊನ್ಸಾಲ್ವೆಸ್, ಭಾರತದಲ್ಲಿರುವ ರೋಹಿಂಗ್ಯಾ ಕುಟುಂಬಗಳು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ನೀಡಿದ ನಿರಾಶ್ರಿತರ ಸ್ಥಾನಮಾನವನ್ನು ದೃಢೀಕರಿಸುವ ಕಾರ್ಡ್‌ಗಳನ್ನು ಹೊಂದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಈ ವ್ಯಕ್ತಿಗಳು ಶಾಲಾ ಪ್ರವೇಶ ಪಡೆಯಲು ಸಾಧ್ಯವಾಗದವರು, ಇದು ಹತಾಶ ಪರಿಸ್ಥಿತಿ.” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ. ಫೆಬ್ರವರಿ 28 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಮುಂದಿನ ವಿಚಾರಣೆ ನಡೆಸಲಿದೆ.

ಅಕ್ಟೋಬರ್‌ನಲ್ಲಿ, ರೋಹಿಂಗ್ಯಾ ಮಕ್ಕಳಿಗೆ ಶಾಲಾ ಪ್ರವೇಶಕ್ಕೆ ಅವಕಾಶ ನೀಡುವಂತೆ ರಾಜಧಾನಿಯಲ್ಲಿ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನು ಸ್ವೀಕರಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯವನ್ನು ಸಂಪರ್ಕಿಸಬೇಕು ಎಂದು ಹೈಕೋರ್ಟ್ ಈ ಹೇಳಿತ್ತು.

“ವಿಶ್ವದಲ್ಲಿ ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರು” ಎಂದು ವಿಶ್ವಸಂಸ್ಥೆಯು ವಿವರಿಸಿದ ರೋಹಿಂಗ್ಯಾ ಮುಸ್ಲಿಂ ಸಮುದಾಯವನ್ನು ಅವರದೇ ಸ್ಥಳೀಯ ಸರ್ಕಾರ ಮ್ಯಾನ್ಮಾರ್‌ನಲ್ಲಿ ಅಧಿಕೃತವಾಗಿ ಗುರುತಿಸಲಾಗಿಲ್ಲ. ಅಲ್ಲಿ ಅವರು ನಾಲ್ಕು ದಶಕಗಳಿಂದ ಹಿಂಸಾಚಾರವನ್ನು ಎದುರಿಸುತ್ತಿದ್ದಾರೆ. 2012 ರಲ್ಲಿ ಅವರು ಭಾರತಕ್ಕೆ ಪ್ರವೇಶಿಸಲು ಪ್ರಾರಂಭಿಸಿದರು. ಮಯನ್ಮಾರ್‌ನಲ್ಲಿ ಅವರ ವಿರುದ್ಧ ಮಿಲಿಟರಿ ದಮನ ನಡೆದ ಹಿನ್ನೆಲೆಯಲ್ಲಿ ಅವರ ಸಂಖ್ಯೆ 2017 ರಲ್ಲಿ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ:  ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...