Homeಮುಖಪುಟಕೇರಳ | ತಿಂಗಳುಗಟ್ಟಲೆ ಹಲ್ಲೆ ನಡೆಸಿ, ಖಾಸಗಿ ಭಾಗಗಳಿಗೆ ಡಂಬ್ಬೆಲ್ಸ್ ನೇತಾಕಿ ರ‍್ಯಾಗಿಂಗ್; ಐವರ ಬಂಧನ

ಕೇರಳ | ತಿಂಗಳುಗಟ್ಟಲೆ ಹಲ್ಲೆ ನಡೆಸಿ, ಖಾಸಗಿ ಭಾಗಗಳಿಗೆ ಡಂಬ್ಬೆಲ್ಸ್ ನೇತಾಕಿ ರ‍್ಯಾಗಿಂಗ್; ಐವರ ಬಂಧನ

- Advertisement -
- Advertisement -

ಕೇರಳದ ಕೊಟ್ಟಾಯಂ ಜಿಲ್ಲೆಯ ನರ್ಸಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ತಮ್ಮ ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ರ‍್ಯಾಗ್ ಮಾಡಿದ್ದಕ್ಕಾಗಿ ಬಂಧಿಸಲಾಗಿರುವ ಘಟನೆ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಕೇರಳ

ಬಂಧನಕ್ಕೆ ಒಳಗಾದದವರನ್ನು ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್, ಎನ್.ಎಸ್. ಜೀವಾ, ಕೆ.ಪಿ. ರಾಹುಲ್ ರಾಜ್, ಸಿ. ರಿಜಿಲ್ ಜಿತ್ ಮತ್ತು ವಿವೇಕ್ ಎನ್.ಪಿ. ಎಂದು ಗುರುತಿಸಲಾಗಿದೆ. ಇವರ ಬಂಧನದ ನಂತರ, ಇವರು ನಡೆಸುತ್ತಿರುವ ನಿರಂತರ ರ‍್ಯಾಗ್‌ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಗುಂಪು ನವೆಂಬರ್ 2024 ರಿಂದ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ರ‍್ಯಾಗ್ ಹೆಸರಿನಲ್ಲಿ ಕಿರುಕುಳ ನೀಡುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಕಿರುಕುಳವನ್ನು ಸಹಿಸಲಾಗದೆ, ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ಹತ್ತಿರದ ಗಾಂಧಿನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ವಿದ್ಯಾರ್ಥಿಗಳು ನೀಡಿದ ದೂರು ದುಷ್ಕರ್ಮಿಗಳು ನೀಡುತ್ತಿದ್ದ ಕಿರುಕುಳದ ಹಿಂಸಾತ್ಮಕ ಕೃತ್ಯಗಳನ್ನು ವಿವರಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ

ಆರೋಪಿಗಳು, ಜೂನಿಯರ್ ವಿದ್ಯಾರ್ಥಿನಿಯರ ದೇಹದ ಮೇಲೆ ಇರಿದು ಗಾಯ ಮಾಡಿ, ಈ ಗಾಯಗಳಿಗೆ ಲೋಷನ್ ಸುರಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸಂತ್ರಸ್ತರು ನೋವಿನಿಂದ ಕೂಗಿದಾಗ, ಆರೋಪಿಗಳು ಅವರ ಬಾಯಿ ಮತ್ತು ದೇಹದ ಭಾಗಗಳಿಗೆ ಕ್ರೀಮ್ ಹಚ್ಚುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನಿಯರ್ ವಿದ್ಯಾರ್ಥಿಗಳನ್ನು ನಗ್ನಗೊಳಿಸಿ, ಅವರ ಖಾಸಗಿ ಭಾಗಗಳಿಗೆ ಡಂಬ್ಬೆಲ್‌ಗಳನ್ನು ನೇತುಹಾಕುತ್ತಿದ್ದರು ಎಂದು ಎಂದು ದೂರಿನಲ್ಲಿ ಹೇಳಲಾಗಿದೆ. ಆರೋಪಿಗಳು ಜಾಮೆಟ್ರಿ ಬಾಕ್ಸ್‌ನಲ್ಲಿ ಇರುವ ಉಪಕರಣಗಳನ್ನು ಬಳಸಿ ಗಾಯಗೊಳಿಸುತ್ತಿದ್ದರು ಎಂದು ವರದಿಯಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರ‍್ಯಾಗಿಂಗ್‌ಗೆ ಸಂಬಂಧಿಸಿದ ಎಲ್ಲಾ ಐದು ವಿದ್ಯಾರ್ಥಿಗಳನ್ನು ಅವರ ಕಾಲೇಜು ಸಹ ಅಮಾನತುಗೊಳಿಸಿದೆ. ರ‍್ಯಾಗಿಂಗ್ ವಿರೋಧಿ ಕಾಯ್ದೆಯಡಿ ತನಿಖೆ ನಡೆಸಿದ ನಂತರ ಕಾಲೇಜು ಪ್ರಾಂಶುಪಾಲರು ಈ ಕ್ರಮ ಕೈಗೊಂಡಿದ್ದಾರೆ.

ರ‍್ಯಾಗಿಂಗ್ ಬಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಮಾಹಿತಿ ನೀಡಿರಲಿಲ್ಲ ಎಂದು ಉಸ್ತುವಾರಿ ಪ್ರಾಂಶುಪಾಲರಾದ ಡಾ. ಲಿನಿ ಜೋಸೆಫ್ ಹೇಳಿದ್ದಾರೆ.

“ಪೋಷಕರು ತರಗತಿ ಶಿಕ್ಷಕರಿಗೆ ಈ ಬಗ್ಗೆ ತಿಳಿಸಲು ಕರೆ ಮಾಡಿದರು. ದೂರು ಸ್ವೀಕರಿಸಿದ ನಂತರ, ಪ್ರಾಥಮಿಕ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಯಿತು. ವಿವರವಾದ ತನಿಖೆಗಾಗಿ ಇಂದು (ಫೆಬ್ರವರಿ 12) ಸಮಿತಿಯನ್ನು ನೇಮಿಸಲಾಗುವುದು. ವಿದ್ಯಾರ್ಥಿಗಳ ವಿರುದ್ಧ ಮುಂದಿನ ಕ್ರಮದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

“ತನಿಖೆಯ ಭಾಗವಾಗಿ ನಾವು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದೇವೆ. ನಾವು ದೂರನ್ನು ಗಾಂಧಿನಗರ SHO (ಸ್ಟೇಷನ್ ಹೌಸ್ ಆಫೀಸರ್) ಮತ್ತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿಗೆ ರವಾನಿಸಿದ್ದೇವೆ. ನಿನ್ನೆ, ಪೊಲೀಸರು ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಆರೋಪಿಗಳನ್ನು ಭೇಟಿಯಾದರು. ಈ ವೇಳೆ ಇಬ್ಬರು ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಬರಲು ಕೇಳಲಾಯಿತು. ನಾವು ಅವರನ್ನು ನಮ್ಮ ಸಹಾಯಕ ವಾರ್ಡನ್ ಮತ್ತು ಪುರುಷ ಅಧ್ಯಾಪಕರೊಂದಿಗೆ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...