Homeಮುಖಪುಟನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ - ಸ್ತ್ರೀ...

ನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ – ಸ್ತ್ರೀ ವಿರೋಧಿ ಹೇಳಿಕೆ ನೀಡಿದ ನಟ ಚಿರಂಜೀವಿ

- Advertisement -
- Advertisement -

ತೆಲುಗು ಚಿತ್ರರಂಗದ ಮೆಗಾಸ್ಟಾರ್, ನಟ ಚಿರಂಜೀವಿ, ತನ್ನ ಮಗ ರಾಮ್ ಚರಣ್‌ಗೆ ಹೆಣ್ಣು ಮಗು ಜನಿಸಬಹುದೆಂಬ ಬಗ್ಗೆ ಭಯವಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಅಸೂಕ್ಷ್ಮ ಹೇಳಿಕೆ ನೀಡಿರುವ ಅವರ ಈ ಹೇಳಿಕೆ “ಸ್ತ್ರೀ ವಿರೋಧಿ” ಹೇಳಿಕೆಯಾಗಿದೆ ಎಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನನ್ನ ಮಗ ರಾಮ್ ಚರಣ್‌

ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ತನ್ನ ಮಗ ರಾಮ್‌ಚರಣ್‌ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು ಎಂದು ಹೇಳಿರುವ ಅವರು, ತಮ್ಮ ಪರಂಪರೆಯನ್ನು ಮುಂದುವರಿಸಲು ಮೊಮ್ಮಗ ಬೇಕು, ಹೆಣ್ಣು ಮಕ್ಕಳು ಮನೆಯಲ್ಲಿರುವಾಗ “ಮಹಿಳೆಯರ ಹಾಸ್ಟೆಲ್”ನಲ್ಲಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಮಗ ರಾಮ್ ಚರಣ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್‌ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್‌ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್‌ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಎಂದು ಕೇಳಿದ್ದಾರೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು. ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.

ಚಿರಂಜೀವಿ ಅವರ ಮಗ ರಾಮ್‌ಚರಣ್‌ ಮತ್ತು ಸೊಸೆ ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಅವರಿಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.

ಇದನ್ನೂಓದಿ:  ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...