ತೆಲುಗು ಚಿತ್ರರಂಗದ ಮೆಗಾಸ್ಟಾರ್, ನಟ ಚಿರಂಜೀವಿ, ತನ್ನ ಮಗ ರಾಮ್ ಚರಣ್ಗೆ ಹೆಣ್ಣು ಮಗು ಜನಿಸಬಹುದೆಂಬ ಬಗ್ಗೆ ಭಯವಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಅಸೂಕ್ಷ್ಮ ಹೇಳಿಕೆ ನೀಡಿರುವ ಅವರ ಈ ಹೇಳಿಕೆ “ಸ್ತ್ರೀ ವಿರೋಧಿ” ಹೇಳಿಕೆಯಾಗಿದೆ ಎಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನನ್ನ ಮಗ ರಾಮ್ ಚರಣ್
ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ತನ್ನ ಮಗ ರಾಮ್ಚರಣ್ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು ಎಂದು ಹೇಳಿರುವ ಅವರು, ತಮ್ಮ ಪರಂಪರೆಯನ್ನು ಮುಂದುವರಿಸಲು ಮೊಮ್ಮಗ ಬೇಕು, ಹೆಣ್ಣು ಮಕ್ಕಳು ಮನೆಯಲ್ಲಿರುವಾಗ “ಮಹಿಳೆಯರ ಹಾಸ್ಟೆಲ್”ನಲ್ಲಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಮಗ ರಾಮ್ ಚರಣ್ಗೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಅವರು ಹೇಳಿದ್ದಾರೆ.
ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಎಂದು ಕೇಳಿದ್ದಾರೆ.
ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು. ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.
ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.
ಚಿರಂಜೀವಿ ಅವರ ಮಗ ರಾಮ್ಚರಣ್ ಮತ್ತು ಸೊಸೆ ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಅವರಿಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.
ಇದನ್ನೂಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ
ಮೈಕ್ರೋ ಫೈನಾನ್ಸ್ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ


